AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ತುರ್ತು ಪರಿಸ್ಥಿತಿ ಇರುವವರಿಗೆ ಉಚಿತ ಸೇವೆ ನೀಡುತ್ತಿರುವ ಆಟೋ ಡ್ರೈವರ್

ರಾಂಚಿ ನಿವಾಸಿ ರವಿ ಅಗರ್​ವಾಲ್ಎಂಬಾತ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಹೋಗಬೇಕಾದ ಜನರಿಂದ ಒಂದು ರೂಪಾಯಿ ಹಣವನ್ನು ಪಡೆಯದೆ ಉಚಿತವಾಗಿ ಆಸ್ಪತ್ರೆಯತ್ತ ಕರೆದೊಯ್ಯುತ್ತಾರೆ. ಜೊತೆಗೆ ರವಿ ಅಗರ್​ವಾಲ್ ಆಟೋ ಹಿಂಬದಿಯಲ್ಲಿ ತುರ್ತು ಸೇವೆಯಲ್ಲಿ ಉಚಿತ ಸೇವೆ ಎಂಬ ಪೋಸ್ಟ್ ಅಂಟಿಸಿ ತಮ್ಮ ಮೊಬೈಲ್ ಸಂಖ್ಯೆಯನ್ನು ಅಂಟಿಸಿದ್ದಾರೆ.

ವೈದ್ಯಕೀಯ ತುರ್ತು ಪರಿಸ್ಥಿತಿ ಇರುವವರಿಗೆ ಉಚಿತ ಸೇವೆ ನೀಡುತ್ತಿರುವ ಆಟೋ ಡ್ರೈವರ್
ಆಟೋ ಡ್ರೈವರ್ ರವಿ ಅಗರ್​ವಾಲ್
sandhya thejappa
|

Updated on: Apr 24, 2021 | 1:37 PM

Share

ಜಾರ್ಖಂಡ್: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವಿನ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ವೀಕೆಂಡ್ ಕರ್ಫ್ಯೂನ ಜಾರಿಗೊಳಿಸಲಾಗಿದೆ. ಈ ನಡುವೆ ಜಾರ್ಖಂಡ್​ನ ರಾಂಚಿಯಲ್ಲಿ ಆಟೋ ಚಾಲಕರೊಬ್ಬರು ತನ್ನದೇ ಆದ ವಿಶಿಷ್ಟ ಸಹಾಯದಿಂದ ಎಲ್ಲರ ಗಮನ ಸೆಳೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ರಾಂಚಿ ನಿವಾಸಿ ರವಿ ಅಗರ್​ವಾಲ್ಎಂಬಾತ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಹೋಗಬೇಕಾದ ಜನರಿಂದ ಒಂದು ರೂಪಾಯಿ ಹಣವನ್ನು ಪಡೆಯದೆ ಉಚಿತವಾಗಿ ಆಸ್ಪತ್ರೆಯತ್ತ ಕರೆದೊಯ್ಯುತ್ತಾರೆ. ಜೊತೆಗೆ ರವಿ ಅಗರ್​ವಾಲ್ ಆಟೋ ಹಿಂಬದಿಯಲ್ಲಿ ತುರ್ತು ಸೇವೆಯಲ್ಲಿ ಉಚಿತ ಸೇವೆ ಎಂಬ ಪೋಸ್ಟ್ ಅಂಟಿಸಿ ತಮ್ಮ ಮೊಬೈಲ್ ಸಂಖ್ಯೆಯನ್ನು ಅಂಟಿಸಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಿಂಜರಿಯುವ ಆಟೋ ಚಾಲಕರ ಮಧ್ಯೆ ರವಿ ಅಗರ್​ವಾಲ್​ರವರ ಈ ಸೇವೆಗೆ ನಿಜಕ್ಕೂ ಮೆಚ್ಚುಗೆ ವ್ಯಕ್ತಪಡಿಸುವ ವಿಷಯ.

ಆಟೋ ಚಾಲಕ ರವಿ ಅಗರ್​ವಾಲ್ ಏಪ್ರಿಲ್ 15ರಿಂದ ಈ ಉಚಿತ ಸೇವೆಯನ್ನು ಮಾಡುತ್ತಿದ್ದಾರೆ. ಇಲ್ಲಿವರೆಗೆ ಸುಮಾರು 16 ಜನರಿಗೆ ಈ ಸೇವೆಯನ್ನು ನೀಡಿದ್ದೇನೆ ಎಂದು ಮಾತನಾಡಿದ ರವಿ ಅಗರ್​ವಾಲ್ , ಮಹಿಳೆಯೊಬ್ಬರು ರಿಮ್ಸ್ (ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ಗೆ ಹೋಗಬೇಕಿತ್ತು. ಆದರೆ ಯಾರೊಬ್ಬ ಆಟೋ ಡ್ರೈವರ್ ಆಕೆಯನ್ನು ಕರೆದುಕೊಂಡು ಹೋಗಲು ಒಪ್ಪಲಿಲ್ಲ. ನೀವು ಕೇಳುವಷ್ಟು ಹಣವನ್ನು ನೀಡುತ್ತೇನೆ ಎಂದು ಮಹಿಳೆ ಆಟೋ ಡ್ರೈವರ್​ಗಳಿಗೆ ಹೇಳಿದರೂ ಯಾರು ಸಿದ್ಧರಾಗಿರಲಿಲ್ಲ. ಆ ಮಹಿಳೆ ಕೊರೊನಾ ಸೋಂಕಿತಳಾ ಎಂದು ನನಗೆ ತಿಳಿದಿಲ್ಲ. ಆದರೆ ಆಕೆ ಹೋಗಬೇಕಾದ ಕಡೆ ಉಚಿತವಾಗಿ ಕರೆದುಕೊಂಡು ಹೋಗಿದ್ದೇನೆ ಎಂದು ತಿಳಿಸಿದರು.

ಅಲ್ಲದೇ ನನ್ನ ಪೋನ್ ನಂಬರ್​ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇನೆ. ಉಚಿತವಾಗಿ ಸೇವೆ ಮಾಡಲು ಸಿದ್ದನಾಗಿದ್ದೇನೆ. ಆಸ್ಪತ್ರೆಗೆ ಹೋಗಬೇಕಾದವರಿಗೆ ಆಟೋ ಅಗತ್ಯವಿದ್ದರೆ ನನ್ನನ್ನು ಸುಲಭವಾಗಿ ಸಂಪರ್ಕಿಸಬಹುದೆಂದು ಹೇಳಿದ್ದಾರೆ.

ಇದನ್ನೂ ಓದಿ

ಗರ್ಭಾವಸ್ಥೆಯಲ್ಲೂ ರಸ್ತೆಗಿಳಿದು ಕಾರ್ಯ ನಿರ್ವಹಿಸಿದ ಡಿಎಸ್​ಪಿ ಶಿಲ್ಪಾ ಸಾಹುಗೆ ಎಲ್ಲೆಡೆ ಮೆಚ್ಚುಗೆ

ಕರ್ನಾಟಕದಲ್ಲಿ 50 ಸಾವಿರ ಕೋವಿಡ್ ಬೆಡ್​​ಗಳಿಗೆ ದಿನಕ್ಕೆ 1,600 ಟನ್​ ಆಕ್ಸಿಜನ್​ ಬೇಕಾಗಿದೆ! ಉತ್ಪಾದನೆ ಹೇಗೆ? ಸರಬರಾಜು ಹೇಗೆ?

(Auto driver is providing free service for those with medical emergencies at Ranchi)

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್