AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ತುರ್ತು ಪರಿಸ್ಥಿತಿ ಇರುವವರಿಗೆ ಉಚಿತ ಸೇವೆ ನೀಡುತ್ತಿರುವ ಆಟೋ ಡ್ರೈವರ್

ರಾಂಚಿ ನಿವಾಸಿ ರವಿ ಅಗರ್​ವಾಲ್ಎಂಬಾತ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಹೋಗಬೇಕಾದ ಜನರಿಂದ ಒಂದು ರೂಪಾಯಿ ಹಣವನ್ನು ಪಡೆಯದೆ ಉಚಿತವಾಗಿ ಆಸ್ಪತ್ರೆಯತ್ತ ಕರೆದೊಯ್ಯುತ್ತಾರೆ. ಜೊತೆಗೆ ರವಿ ಅಗರ್​ವಾಲ್ ಆಟೋ ಹಿಂಬದಿಯಲ್ಲಿ ತುರ್ತು ಸೇವೆಯಲ್ಲಿ ಉಚಿತ ಸೇವೆ ಎಂಬ ಪೋಸ್ಟ್ ಅಂಟಿಸಿ ತಮ್ಮ ಮೊಬೈಲ್ ಸಂಖ್ಯೆಯನ್ನು ಅಂಟಿಸಿದ್ದಾರೆ.

ವೈದ್ಯಕೀಯ ತುರ್ತು ಪರಿಸ್ಥಿತಿ ಇರುವವರಿಗೆ ಉಚಿತ ಸೇವೆ ನೀಡುತ್ತಿರುವ ಆಟೋ ಡ್ರೈವರ್
ಆಟೋ ಡ್ರೈವರ್ ರವಿ ಅಗರ್​ವಾಲ್
sandhya thejappa
|

Updated on: Apr 24, 2021 | 1:37 PM

Share

ಜಾರ್ಖಂಡ್: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವಿನ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ವೀಕೆಂಡ್ ಕರ್ಫ್ಯೂನ ಜಾರಿಗೊಳಿಸಲಾಗಿದೆ. ಈ ನಡುವೆ ಜಾರ್ಖಂಡ್​ನ ರಾಂಚಿಯಲ್ಲಿ ಆಟೋ ಚಾಲಕರೊಬ್ಬರು ತನ್ನದೇ ಆದ ವಿಶಿಷ್ಟ ಸಹಾಯದಿಂದ ಎಲ್ಲರ ಗಮನ ಸೆಳೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ರಾಂಚಿ ನಿವಾಸಿ ರವಿ ಅಗರ್​ವಾಲ್ಎಂಬಾತ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಹೋಗಬೇಕಾದ ಜನರಿಂದ ಒಂದು ರೂಪಾಯಿ ಹಣವನ್ನು ಪಡೆಯದೆ ಉಚಿತವಾಗಿ ಆಸ್ಪತ್ರೆಯತ್ತ ಕರೆದೊಯ್ಯುತ್ತಾರೆ. ಜೊತೆಗೆ ರವಿ ಅಗರ್​ವಾಲ್ ಆಟೋ ಹಿಂಬದಿಯಲ್ಲಿ ತುರ್ತು ಸೇವೆಯಲ್ಲಿ ಉಚಿತ ಸೇವೆ ಎಂಬ ಪೋಸ್ಟ್ ಅಂಟಿಸಿ ತಮ್ಮ ಮೊಬೈಲ್ ಸಂಖ್ಯೆಯನ್ನು ಅಂಟಿಸಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಿಂಜರಿಯುವ ಆಟೋ ಚಾಲಕರ ಮಧ್ಯೆ ರವಿ ಅಗರ್​ವಾಲ್​ರವರ ಈ ಸೇವೆಗೆ ನಿಜಕ್ಕೂ ಮೆಚ್ಚುಗೆ ವ್ಯಕ್ತಪಡಿಸುವ ವಿಷಯ.

ಆಟೋ ಚಾಲಕ ರವಿ ಅಗರ್​ವಾಲ್ ಏಪ್ರಿಲ್ 15ರಿಂದ ಈ ಉಚಿತ ಸೇವೆಯನ್ನು ಮಾಡುತ್ತಿದ್ದಾರೆ. ಇಲ್ಲಿವರೆಗೆ ಸುಮಾರು 16 ಜನರಿಗೆ ಈ ಸೇವೆಯನ್ನು ನೀಡಿದ್ದೇನೆ ಎಂದು ಮಾತನಾಡಿದ ರವಿ ಅಗರ್​ವಾಲ್ , ಮಹಿಳೆಯೊಬ್ಬರು ರಿಮ್ಸ್ (ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ಗೆ ಹೋಗಬೇಕಿತ್ತು. ಆದರೆ ಯಾರೊಬ್ಬ ಆಟೋ ಡ್ರೈವರ್ ಆಕೆಯನ್ನು ಕರೆದುಕೊಂಡು ಹೋಗಲು ಒಪ್ಪಲಿಲ್ಲ. ನೀವು ಕೇಳುವಷ್ಟು ಹಣವನ್ನು ನೀಡುತ್ತೇನೆ ಎಂದು ಮಹಿಳೆ ಆಟೋ ಡ್ರೈವರ್​ಗಳಿಗೆ ಹೇಳಿದರೂ ಯಾರು ಸಿದ್ಧರಾಗಿರಲಿಲ್ಲ. ಆ ಮಹಿಳೆ ಕೊರೊನಾ ಸೋಂಕಿತಳಾ ಎಂದು ನನಗೆ ತಿಳಿದಿಲ್ಲ. ಆದರೆ ಆಕೆ ಹೋಗಬೇಕಾದ ಕಡೆ ಉಚಿತವಾಗಿ ಕರೆದುಕೊಂಡು ಹೋಗಿದ್ದೇನೆ ಎಂದು ತಿಳಿಸಿದರು.

ಅಲ್ಲದೇ ನನ್ನ ಪೋನ್ ನಂಬರ್​ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇನೆ. ಉಚಿತವಾಗಿ ಸೇವೆ ಮಾಡಲು ಸಿದ್ದನಾಗಿದ್ದೇನೆ. ಆಸ್ಪತ್ರೆಗೆ ಹೋಗಬೇಕಾದವರಿಗೆ ಆಟೋ ಅಗತ್ಯವಿದ್ದರೆ ನನ್ನನ್ನು ಸುಲಭವಾಗಿ ಸಂಪರ್ಕಿಸಬಹುದೆಂದು ಹೇಳಿದ್ದಾರೆ.

ಇದನ್ನೂ ಓದಿ

ಗರ್ಭಾವಸ್ಥೆಯಲ್ಲೂ ರಸ್ತೆಗಿಳಿದು ಕಾರ್ಯ ನಿರ್ವಹಿಸಿದ ಡಿಎಸ್​ಪಿ ಶಿಲ್ಪಾ ಸಾಹುಗೆ ಎಲ್ಲೆಡೆ ಮೆಚ್ಚುಗೆ

ಕರ್ನಾಟಕದಲ್ಲಿ 50 ಸಾವಿರ ಕೋವಿಡ್ ಬೆಡ್​​ಗಳಿಗೆ ದಿನಕ್ಕೆ 1,600 ಟನ್​ ಆಕ್ಸಿಜನ್​ ಬೇಕಾಗಿದೆ! ಉತ್ಪಾದನೆ ಹೇಗೆ? ಸರಬರಾಜು ಹೇಗೆ?

(Auto driver is providing free service for those with medical emergencies at Ranchi)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ