ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆ ವರದಿಯಿಂದ ಹಲವು ಸಂಗತಿಗಳು ಬಹಿರಂಗ

ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಹಲವು ಸಂಗತಿಗಳು ಬಹಿರಂಗಗೊಂಡಿವೆ. ದಿವ್ಯಾ ತಲೆಯಲ್ಲಿ ಗುಂಡು ಪತ್ತೆಯಾಗಿದೆ, ಹೋಟೆಲ್ ಮಾಲೀಕ ಅಭಿಜೀತ್ ಸಿಂಗ್ ಅವರು ಆಕೆಯ ತಲೆಗೆ ಅತ್ಯಂತ ಸಮೀಪದಿಂದ ಗುಂಡು ಹಾರಿಸಿದ್ದ

ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆ ವರದಿಯಿಂದ ಹಲವು ಸಂಗತಿಗಳು ಬಹಿರಂಗ
ದಿವ್ಯಾ ಪಹುಜಾ
Image Credit source: India Today

Updated on: Jan 15, 2024 | 9:46 AM

ಮಾಜಿ ರೂಪದರ್ಶಿ ದಿವ್ಯಾ ಪಹುಜಾ(Divya Pahuja) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಹಲವು ಸಂಗತಿಗಳು ಬಹಿರಂಗಗೊಂಡಿವೆ. ದಿವ್ಯಾ ತಲೆಯಲ್ಲಿ ಗುಂಡು ಪತ್ತೆಯಾಗಿದೆ, ಹೋಟೆಲ್ ಮಾಲೀಕ ಅಭಿಜೀತ್ ಸಿಂಗ್ ಅವರು ಆಕೆಯ ತಲೆಗೆ ಅತ್ಯಂತ ಸಮೀಪದಿಂದ ಗುಂಡು ಹಾರಿಸಿದ್ದರು.

ದಿವ್ಯಾಳ ಮರಣೋತ್ತರ ಪರೀಕ್ಷೆ ಹಿಸಾರ್​ನ ಅಗ್ರೋಹಾ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಈ ವೇಳೆ ಆಕೆಯ ತಾಯಿ ಮತ್ತು ಸಹೋದರ ಆಸ್ಪತ್ರೆಯಲ್ಲಿ ಹಾಜರಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ದಿವ್ಯಾ ಕುಟುಂಬಸ್ಥರು ಮೃತದೇಹವನ್ನು ಗುರುಗ್ರಾಮಕ್ಕೆ ಕೊಂಡೊಯ್ದಿದ್ದಾರೆ.

ದಿವ್ಯಾರನ್ನು ಹತ್ಯೆ ಮಾಡಿದ 11 ದಿನಗಳ ಬಳಿಕ ಹರ್ಯಾಣದ ತೊಹಾನಾ ಕಾಲುವೆಯಲ್ಲಿ ಪತ್ತೆಯಾಗಿತ್ತು. ಜನವರಿ 2 ರಂದು ಹತ್ಯೆ ಮಡಲಾಗಿತ್ತು, ಜನವರಿ 3 ರಂದು ಬಾಲರಾಜ್​ ಗಿಲ್​ ಮೃತದೇಹವನ್ನು ಕಾಲುವೆಗೆ ಎಸೆದಿದ್ದರು.

ದಿವ್ಯಾಳ ಮೃತದೇಹ ಸುಮಾರು 10 ದಿನಗಳ ಕಾಲ ನೀರಿನಲ್ಲಿಯೇ ಇತ್ತು, ಕಾಲುವೆಯಿಂದ ದೇಹವನ್ನು ಹೊರತೆಗೆದಾಗ ತಲೆಯ ಮೇಲಿನ ಕೂದಲು ಕಾಣೆಯಾಗಿತ್ತು. ಹೀಗಾಗಿ ದೇಹವನ್ನು ಗುರುತಿಸುವುದು ಪೊಲೀಸರಿಗೆ ಕಷ್ಟವಾಗಿತ್ತು., ಬೆನ್ನು, ತೋಳುಗಳ ಮೇಲಿರುವ ಹಚ್ಚೆಗಳಿಂದ ತಾಯಿ ಆಕೆಯನ್ನು ಗುರುತಿಸಿದ್ದರು.

ಮತ್ತಷ್ಟು ಓದಿ: Divya Pahuja: ಕಾಲುವೆಯಲ್ಲಿ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

ದಿವ್ಯಾಳ ಫೋನ್​ನಲ್ಲಿ ಕೆಲವು ಅಶ್ಲೀಲ ಚಿತ್ರಗಳು ಇದ್ದುದರಿಂದ ಆಕೆ ಪದೇ ಪದೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಳು, ಇದೇ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಅಭಿಜೀತ್ ಒಪ್ಪಿಕೊಂಡಿದ್ದಾರೆ.

ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಕೊಲೆ ಆರೋಪಿಯನ್ನು ಪಶ್ಚಿಮ ಬಂಗಾಳದಲ್ಲಿ ಪೊಲೀಸರು ಬಂಧಿಸಿದ್ದರು. ಮಾಜಿ ಮಾಡೆಲ್​ನ ಶವವನ್ನು ಮತ್ತೊಬ್ಬ ಆರೋಪಿ ರವಿ ಬಾಂದ್ರಾ ಜತೆ ವಿಲೇವಾರಿ ಮಾಡಿದ್ದ ಬಾಲ್​ರಾಜ್ ಗಿಲ್ ಗುರುವಾರ ಸಂಜೆ ವಿಮಾನ ನಿಲ್ದಾಣದಲ್ಲಿ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಬಂಧಿಸಲಾಗಿತ್ತು.

ಗುರುಗ್ರಾಮದ ಭೂಗತ ಪಾತಕಿ ಸಂದೀಪ್ ಗಡೋಲಿ ನಕಲಿ ಎನ್​ಕೌಂಟರ್​ ಪ್ರಕರಣಕ್ಕೆ ಸಂಬಂಧಿಸಿ ದಿವ್ಯಾ ಪಹುಜಾಗೆ 7 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಲಾಗಿತ್ತು. ಸ್ವಲ್ಪ ದಿನಗಳ ಹಿಂದಷ್ಟೇ ಜಾಮೀನಿನ ಮೂಲಕ ಹೊರಬಂದಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿ ಹೋಟೆಲ್ ಮಾಲೀಕ ಅಭಿಜಿತ್, ಕೆಲಸಗಾರರಾದ ಹೇಮರಾಜ್, ಓಂ ಪ್ರಕಾಶ್​ನನ್ನು ಬಂಧಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us