AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ರಸ್ತೆ ದಾಟುತ್ತಿದ್ದಾಗ ಆಟೋರಿಕ್ಷಾ ಡಿಕ್ಕಿ, ಬಾಲಕಿ ಸಾವು

ರಸ್ತೆ ದಾಟುತ್ತಿದ್ದ 10 ವರ್ಷದ ಬಾಲಕಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Accident: ರಸ್ತೆ ದಾಟುತ್ತಿದ್ದಾಗ ಆಟೋರಿಕ್ಷಾ ಡಿಕ್ಕಿ, ಬಾಲಕಿ ಸಾವು
ಸಾಂದರ್ಭಿಕ ಚಿತ್ರ Image Credit source: PTI
TV9 Web
| Edited By: |

Updated on:Dec 14, 2022 | 6:03 PM

Share

ಮಲಪ್ಪುರಂ: ರಸ್ತೆ ದಾಟುತ್ತಿದ್ದ 10 ವರ್ಷದ ಬಾಲಕಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐದನೇ ತರಗತಿ ವಿದ್ಯಾರ್ಥಿನಿ ಶಫ್ನಾ ಶೆರಿನ್ ತನ್ನ ಶಾಲಾ ಬಸ್‌ನಿಂದ ಇಳಿದು ಪಾಂಡಿಮುತ್ತಂನಲ್ಲಿ ರಸ್ತೆ ದಾಟುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಪರೀಕ್ಷೆಗೆ ಹಾಜರಾಗಿ ಮನೆಗೆ ತೆರಳುತ್ತಿದ್ದಳು.

ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಮೊದಲು ಸಮೀಪದ ತಾಲೂಕು ಆಸ್ಪತ್ರೆಗೆ ದಾಖಲಿಸಿ ನಂತರ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಆಕೆಯ ಪ್ರಾಣ ಉಳಿಸಲಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯಗಳು ಸೆರೆಯಾಗಿದೆ.

ಇದನ್ನು ಓದಿ: ಟಾಟಾ ಏಸ್, ಲಾರಿ ನಡುವೆ ಡಿಕ್ಕಿ, 6 ಸಾವು, 5 ಜನರಿಗೆ ಗಾಯ

ಗ್ಯಾಸ್ ಟ್ಯಾಂಕರ್ – ಆಂಬ್ಯುಲೆನ್ಸ್ ಡಿಕ್ಕಿ, ನವಜಾತ ಶಿಶು ಮತ್ತು ತಾಯಿಗೆ ಗಂಭೀರ ಗಾಯ

ಜಲ್ಪೈಗುರಿ: ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಬುಧವಾರ ಖಾಲಿ ಗ್ಯಾಸ್ ಟ್ಯಾಂಕರ್ ಮತ್ತು ಆಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನವಜಾತ ಶಿಶು ಮತ್ತು ತಾಯಿ ಸೇರಿದಂತೆ ಇತರ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. .

ಮೂರು ದಿನಗಳ ಶಿಶು ಮತ್ತು ತಾಯಿಯನ್ನು ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರುವಾಗ ಈ ಘಟನೆ ನಡೆದಿದೆ. ಈ ಘಟನೆಯು ಉತ್ತರ ದಿನಜ್‌ಪುರ ಜಿಲ್ಲೆಯ ಇಸ್ಲಾಂಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಬಂದು ಗಾಯಾಳುಗಳನ್ನು ಫನ್ಸಿಡೆವಾ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿಂದ ಅವರನ್ನು ಉತ್ತರ ಬಂಗಾಳ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಅವರ ಸ್ಥಿತಿ ಬಗ್ಗೆ ಯಾವುದೇ ಹೆಚ್ಚು ಮಾಹಿತಿ ತಿಳಿದುಬಂದಿಲ್ಲ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:50 pm, Wed, 14 December 22

Follow Us
Web contact
Web contact

TV9 Kannada

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ