AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ಭಾರಿ ಹಿಮಪಾತ; ಹಿಮದಡಿ ಸಿಲುಕಿ ನಾಪತ್ತೆಯಾಗಿರುವ ಭಾರತೀಯ ಸೇನೆಯ ಏಳು ಯೋಧರು

2021ರ ಅಕ್ಟೋಬರ್​ನಲ್ಲಿ ಉತ್ತರಾಖಂಡ್​ನ ತ್ರಿಶೂಲ್​ ಪರ್ವತದಲ್ಲಿ ಉಂಟಾದ ಹಿಮಪಾತಕ್ಕೆ ನೌಕಾಪಡೆಯ ಐವರು ಯೋಧರು ಮೃತರಾಗಿದ್ದರು. ನಂತರ ಅವರ ಮೃತದೇಹ ಪತ್ತೆಯಾಗಿತ್ತು.  

ಅರುಣಾಚಲ ಪ್ರದೇಶದಲ್ಲಿ ಭಾರಿ ಹಿಮಪಾತ; ಹಿಮದಡಿ ಸಿಲುಕಿ ನಾಪತ್ತೆಯಾಗಿರುವ ಭಾರತೀಯ ಸೇನೆಯ ಏಳು ಯೋಧರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 07, 2022 | 5:25 PM

Share

ಇಟಾನಗರ: ಅರುಣಾಚಲ ಪ್ರದೇಶದ ಅತ್ಯಂತ ಎತ್ತರ ವಲಯವಾದ ಕಾಮೆಂಗ್​​ನಲ್ಲಿ ಹಿಮಕುಸಿತ( Avalanche) ಉಂಟಾದ ಪರಿಣಾಮ ಸುಮಾರು ಏಳು ಮಂದಿ ಸೇನಾ ಸಿಬ್ಬಂದಿ ಅದರಡಿಯಲ್ಲಿ ಸಿಲುಕಿದ್ದಾರೆ. ಇಲ್ಲಿ ಭಾರತೀಯ ಸೇನಾ ಯೋಧರು ಗಸ್ತು ತಿರುಗುತ್ತಿದ್ದರು. ಅವರ ಮೇಲೆ ಹಿಮ ಕುಸಿದು ಬಿದ್ದಿದೆ. ಅಲ್ಲಿದ್ದ ಏಳು ಮಂದಿ ಹಿಮದಡಿ ಸಮಾಧಿಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಈ ಘಟನೆ ನಿನ್ನೆಯೇ ನಡೆದಿದ್ದು, ನಾಪತ್ತೆಯಾದವರ ಹುಡುಕಾಟ, ರಕ್ಷಣಾ ಕಾರ್ಯಾಚರಣೆ ಇನ್ನೂ ಕೂಡ ನಡೆಯುತ್ತಲೇ ಇದೆ.   

ಕಳೆದ ಹಲವು ದಿನಗಳಿಂದಲೂ ಇಲ್ಲಿ ಹಿಮಪಾತ ಆಗುತ್ತಲೇ ಇತ್ತು. ಹಾಗಾಗಿ ಹವಾಮಾನ ಕೂಡ ಪ್ರತಿಕೂಲವಾಗಿತ್ತು. ಆದರೆ ಭಾನುವಾರ ಭಾರಿ ಪ್ರಮಾಣದಲ್ಲಿ ಹಿಮಪಾತವಾಗಿದೆ. ಘಟನೆ ನಡೆಯುತ್ತಿದ್ದಂತೆ ಯೋಧರ ರಕ್ಷಣೆಗಾಗಿ ವಿಶೇಷ ತರಬೇತಿ ಪಡೆದ ಸೈನಿಕರ ತಂಡಗಳನ್ನು ಅಲ್ಲಿಗೆ ಕಳಿಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಸಮುದ್ರ ಮಟ್ಟದಿಂದ ಅತ್ಯಂತ ಎತ್ತರದಲ್ಲಿರುವ ಈ ಗಡಿ ರಾಜ್ಯಗಳಲ್ಲಿ ಸೈನಿಕರು ಕೆಲಸ ನಿರ್ವಹಿಸುವುದು ಅತ್ಯಂತ ಕಷ್ಟ. ಸದಾ ಹಿಮಪಾತವಾಗುವ ಪ್ರದೇಶಗಳಲ್ಲಂತೂ ಅದೆಷ್ಟು ಯೋಧರು ಪ್ರಾಣ ಕಳೆದುಕೊಳ್ಳುತ್ತಾರೆ ಹೇಳಲು ಸಾಧ್ಯವಿಲ್ಲ. 2020ರ ಮೇ ತಿಂಗಳಲ್ಲಿ ಸಿಕ್ಕಿಂನಲ್ಲಿ ಹಿಮಪಾತವಾಗಿ ಇಬ್ಬರು ಯೋಧರು ಪ್ರಾಣಕಳೆದುಕೊಂಡಿದ್ದರು.  2021ರ ಅಕ್ಟೋಬರ್​ನಲ್ಲಿ ಉತ್ತರಾಖಂಡ್​ನ ತ್ರಿಶೂಲ್​ ಪರ್ವತದಲ್ಲಿ ಉಂಟಾದ ಹಿಮಪಾತಕ್ಕೆ ನೌಕಾಪಡೆಯ ಐವರು ಯೋಧರು ಮೃತರಾಗಿದ್ದರು. ನಂತರ ಅವರ ಮೃತದೇಹ ಪತ್ತೆಯಾಗಿತ್ತು.

ಇದನ್ನೂ ಓದಿ: ಮಾಲ್ಡೀವ್ ನಲ್ಲಿ ಹಾಟ್ ಹಾಟ್ ಫೋಟೋ ಶೂಟ್ ಮಾಡಿಸಿಕೊಂಡ ನಟಿ

Published On - 2:40 pm, Mon, 7 February 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ