AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ಭಾರಿ ಹಿಮಪಾತ; ಹಿಮದಡಿ ಸಿಲುಕಿ ನಾಪತ್ತೆಯಾಗಿರುವ ಭಾರತೀಯ ಸೇನೆಯ ಏಳು ಯೋಧರು

2021ರ ಅಕ್ಟೋಬರ್​ನಲ್ಲಿ ಉತ್ತರಾಖಂಡ್​ನ ತ್ರಿಶೂಲ್​ ಪರ್ವತದಲ್ಲಿ ಉಂಟಾದ ಹಿಮಪಾತಕ್ಕೆ ನೌಕಾಪಡೆಯ ಐವರು ಯೋಧರು ಮೃತರಾಗಿದ್ದರು. ನಂತರ ಅವರ ಮೃತದೇಹ ಪತ್ತೆಯಾಗಿತ್ತು.  

ಅರುಣಾಚಲ ಪ್ರದೇಶದಲ್ಲಿ ಭಾರಿ ಹಿಮಪಾತ; ಹಿಮದಡಿ ಸಿಲುಕಿ ನಾಪತ್ತೆಯಾಗಿರುವ ಭಾರತೀಯ ಸೇನೆಯ ಏಳು ಯೋಧರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 07, 2022 | 5:25 PM

Share

ಇಟಾನಗರ: ಅರುಣಾಚಲ ಪ್ರದೇಶದ ಅತ್ಯಂತ ಎತ್ತರ ವಲಯವಾದ ಕಾಮೆಂಗ್​​ನಲ್ಲಿ ಹಿಮಕುಸಿತ( Avalanche) ಉಂಟಾದ ಪರಿಣಾಮ ಸುಮಾರು ಏಳು ಮಂದಿ ಸೇನಾ ಸಿಬ್ಬಂದಿ ಅದರಡಿಯಲ್ಲಿ ಸಿಲುಕಿದ್ದಾರೆ. ಇಲ್ಲಿ ಭಾರತೀಯ ಸೇನಾ ಯೋಧರು ಗಸ್ತು ತಿರುಗುತ್ತಿದ್ದರು. ಅವರ ಮೇಲೆ ಹಿಮ ಕುಸಿದು ಬಿದ್ದಿದೆ. ಅಲ್ಲಿದ್ದ ಏಳು ಮಂದಿ ಹಿಮದಡಿ ಸಮಾಧಿಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಈ ಘಟನೆ ನಿನ್ನೆಯೇ ನಡೆದಿದ್ದು, ನಾಪತ್ತೆಯಾದವರ ಹುಡುಕಾಟ, ರಕ್ಷಣಾ ಕಾರ್ಯಾಚರಣೆ ಇನ್ನೂ ಕೂಡ ನಡೆಯುತ್ತಲೇ ಇದೆ.   

ಕಳೆದ ಹಲವು ದಿನಗಳಿಂದಲೂ ಇಲ್ಲಿ ಹಿಮಪಾತ ಆಗುತ್ತಲೇ ಇತ್ತು. ಹಾಗಾಗಿ ಹವಾಮಾನ ಕೂಡ ಪ್ರತಿಕೂಲವಾಗಿತ್ತು. ಆದರೆ ಭಾನುವಾರ ಭಾರಿ ಪ್ರಮಾಣದಲ್ಲಿ ಹಿಮಪಾತವಾಗಿದೆ. ಘಟನೆ ನಡೆಯುತ್ತಿದ್ದಂತೆ ಯೋಧರ ರಕ್ಷಣೆಗಾಗಿ ವಿಶೇಷ ತರಬೇತಿ ಪಡೆದ ಸೈನಿಕರ ತಂಡಗಳನ್ನು ಅಲ್ಲಿಗೆ ಕಳಿಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಸಮುದ್ರ ಮಟ್ಟದಿಂದ ಅತ್ಯಂತ ಎತ್ತರದಲ್ಲಿರುವ ಈ ಗಡಿ ರಾಜ್ಯಗಳಲ್ಲಿ ಸೈನಿಕರು ಕೆಲಸ ನಿರ್ವಹಿಸುವುದು ಅತ್ಯಂತ ಕಷ್ಟ. ಸದಾ ಹಿಮಪಾತವಾಗುವ ಪ್ರದೇಶಗಳಲ್ಲಂತೂ ಅದೆಷ್ಟು ಯೋಧರು ಪ್ರಾಣ ಕಳೆದುಕೊಳ್ಳುತ್ತಾರೆ ಹೇಳಲು ಸಾಧ್ಯವಿಲ್ಲ. 2020ರ ಮೇ ತಿಂಗಳಲ್ಲಿ ಸಿಕ್ಕಿಂನಲ್ಲಿ ಹಿಮಪಾತವಾಗಿ ಇಬ್ಬರು ಯೋಧರು ಪ್ರಾಣಕಳೆದುಕೊಂಡಿದ್ದರು.  2021ರ ಅಕ್ಟೋಬರ್​ನಲ್ಲಿ ಉತ್ತರಾಖಂಡ್​ನ ತ್ರಿಶೂಲ್​ ಪರ್ವತದಲ್ಲಿ ಉಂಟಾದ ಹಿಮಪಾತಕ್ಕೆ ನೌಕಾಪಡೆಯ ಐವರು ಯೋಧರು ಮೃತರಾಗಿದ್ದರು. ನಂತರ ಅವರ ಮೃತದೇಹ ಪತ್ತೆಯಾಗಿತ್ತು.

ಇದನ್ನೂ ಓದಿ: ಮಾಲ್ಡೀವ್ ನಲ್ಲಿ ಹಾಟ್ ಹಾಟ್ ಫೋಟೋ ಶೂಟ್ ಮಾಡಿಸಿಕೊಂಡ ನಟಿ

Published On - 2:40 pm, Mon, 7 February 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ