AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದಲ್ಲಿ ಭಾರಿ ಹಿಮಪಾತ; ಹಿಮದಡಿ ಸಿಲುಕಿ ನಾಪತ್ತೆಯಾಗಿರುವ ಭಾರತೀಯ ಸೇನೆಯ ಏಳು ಯೋಧರು

2021ರ ಅಕ್ಟೋಬರ್​ನಲ್ಲಿ ಉತ್ತರಾಖಂಡ್​ನ ತ್ರಿಶೂಲ್​ ಪರ್ವತದಲ್ಲಿ ಉಂಟಾದ ಹಿಮಪಾತಕ್ಕೆ ನೌಕಾಪಡೆಯ ಐವರು ಯೋಧರು ಮೃತರಾಗಿದ್ದರು. ನಂತರ ಅವರ ಮೃತದೇಹ ಪತ್ತೆಯಾಗಿತ್ತು.  

ಅರುಣಾಚಲ ಪ್ರದೇಶದಲ್ಲಿ ಭಾರಿ ಹಿಮಪಾತ; ಹಿಮದಡಿ ಸಿಲುಕಿ ನಾಪತ್ತೆಯಾಗಿರುವ ಭಾರತೀಯ ಸೇನೆಯ ಏಳು ಯೋಧರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 07, 2022 | 5:25 PM

Share

ಇಟಾನಗರ: ಅರುಣಾಚಲ ಪ್ರದೇಶದ ಅತ್ಯಂತ ಎತ್ತರ ವಲಯವಾದ ಕಾಮೆಂಗ್​​ನಲ್ಲಿ ಹಿಮಕುಸಿತ( Avalanche) ಉಂಟಾದ ಪರಿಣಾಮ ಸುಮಾರು ಏಳು ಮಂದಿ ಸೇನಾ ಸಿಬ್ಬಂದಿ ಅದರಡಿಯಲ್ಲಿ ಸಿಲುಕಿದ್ದಾರೆ. ಇಲ್ಲಿ ಭಾರತೀಯ ಸೇನಾ ಯೋಧರು ಗಸ್ತು ತಿರುಗುತ್ತಿದ್ದರು. ಅವರ ಮೇಲೆ ಹಿಮ ಕುಸಿದು ಬಿದ್ದಿದೆ. ಅಲ್ಲಿದ್ದ ಏಳು ಮಂದಿ ಹಿಮದಡಿ ಸಮಾಧಿಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಈ ಘಟನೆ ನಿನ್ನೆಯೇ ನಡೆದಿದ್ದು, ನಾಪತ್ತೆಯಾದವರ ಹುಡುಕಾಟ, ರಕ್ಷಣಾ ಕಾರ್ಯಾಚರಣೆ ಇನ್ನೂ ಕೂಡ ನಡೆಯುತ್ತಲೇ ಇದೆ.   

ಕಳೆದ ಹಲವು ದಿನಗಳಿಂದಲೂ ಇಲ್ಲಿ ಹಿಮಪಾತ ಆಗುತ್ತಲೇ ಇತ್ತು. ಹಾಗಾಗಿ ಹವಾಮಾನ ಕೂಡ ಪ್ರತಿಕೂಲವಾಗಿತ್ತು. ಆದರೆ ಭಾನುವಾರ ಭಾರಿ ಪ್ರಮಾಣದಲ್ಲಿ ಹಿಮಪಾತವಾಗಿದೆ. ಘಟನೆ ನಡೆಯುತ್ತಿದ್ದಂತೆ ಯೋಧರ ರಕ್ಷಣೆಗಾಗಿ ವಿಶೇಷ ತರಬೇತಿ ಪಡೆದ ಸೈನಿಕರ ತಂಡಗಳನ್ನು ಅಲ್ಲಿಗೆ ಕಳಿಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಸಮುದ್ರ ಮಟ್ಟದಿಂದ ಅತ್ಯಂತ ಎತ್ತರದಲ್ಲಿರುವ ಈ ಗಡಿ ರಾಜ್ಯಗಳಲ್ಲಿ ಸೈನಿಕರು ಕೆಲಸ ನಿರ್ವಹಿಸುವುದು ಅತ್ಯಂತ ಕಷ್ಟ. ಸದಾ ಹಿಮಪಾತವಾಗುವ ಪ್ರದೇಶಗಳಲ್ಲಂತೂ ಅದೆಷ್ಟು ಯೋಧರು ಪ್ರಾಣ ಕಳೆದುಕೊಳ್ಳುತ್ತಾರೆ ಹೇಳಲು ಸಾಧ್ಯವಿಲ್ಲ. 2020ರ ಮೇ ತಿಂಗಳಲ್ಲಿ ಸಿಕ್ಕಿಂನಲ್ಲಿ ಹಿಮಪಾತವಾಗಿ ಇಬ್ಬರು ಯೋಧರು ಪ್ರಾಣಕಳೆದುಕೊಂಡಿದ್ದರು.  2021ರ ಅಕ್ಟೋಬರ್​ನಲ್ಲಿ ಉತ್ತರಾಖಂಡ್​ನ ತ್ರಿಶೂಲ್​ ಪರ್ವತದಲ್ಲಿ ಉಂಟಾದ ಹಿಮಪಾತಕ್ಕೆ ನೌಕಾಪಡೆಯ ಐವರು ಯೋಧರು ಮೃತರಾಗಿದ್ದರು. ನಂತರ ಅವರ ಮೃತದೇಹ ಪತ್ತೆಯಾಗಿತ್ತು.

ಇದನ್ನೂ ಓದಿ: ಮಾಲ್ಡೀವ್ ನಲ್ಲಿ ಹಾಟ್ ಹಾಟ್ ಫೋಟೋ ಶೂಟ್ ಮಾಡಿಸಿಕೊಂಡ ನಟಿ

Published On - 2:40 pm, Mon, 7 February 22

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್