AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ಯುವ ಆಕ್ಸಿಯಮ್-4 ಮಿಷನ್ ಉಡಾವಣೆ ಜೂನ್ 11ಕ್ಕೆ ಮುಂದೂಡಿಕೆ

Axiom-4 Mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಹೊತ್ತೊಯ್ಯುವ ಆಕ್ಸಿಯಮ್-4 ಬಾಹ್ಯಾಕಾಶ ಮಿಷನ್ ಹವಾಮಾನ ವೈಪರೀತ್ಯದಿಂದಾಗಿ ಮುಂದೂಡಿಕೆಯಾಗಿದೆ. ಭಾರತದ ಶುಭಾಂಶು ಸೇರಿದಂತೆ ನಾಲ್ವರು ಗಗನಯಾತ್ರಿಗಳು ನಾಳೆ (ಜೂನ್ 10) ಬಾಹ್ಯಾಕಾಶ ನೌಕೆಯಲ್ಲಿ ಪ್ರಯಾಣ ಬೆಳೆಸಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ಇದನ್ನು ಜೂನ್ 11ಕ್ಕೆ ಮುಂದೂಡಲಾಗಿದೆ. 1984ರಲ್ಲಿ ಸೋವಿಯತ್ ರಷ್ಯಾದ ಸೋಯುಜ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸುವ ಮೂಲಕ ರಾಕೇಶ್ ಶರ್ಮಾ ಇತಿಹಾಸ ಬರೆದ 41 ವರ್ಷಗಳ ನಂತರ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಪ್ರಯಾಣವು ಭಾರತದ ಮಾನವ ಬಾಹ್ಯಾಕಾಶ ಹಾರಾಟಕ್ಕೆ ಬಹಳ ದೊಡ್ಡ ಮೈಲಿಗಲ್ಲಾಗಿದೆ.

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ಯುವ ಆಕ್ಸಿಯಮ್-4 ಮಿಷನ್ ಉಡಾವಣೆ ಜೂನ್ 11ಕ್ಕೆ ಮುಂದೂಡಿಕೆ
Shubhanshu Shukla
ಸುಷ್ಮಾ ಚಕ್ರೆ
|

Updated on: Jun 09, 2025 | 9:23 PM

Share

ನವದೆಹಲಿ, ಜೂನ್ 9: ಭಾರತದ ಎರಡನೇ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಬಾಹ್ಯಾಕಾಶಕ್ಕೆ ಕರೆದೊಯ್ಯುವ ಆಕ್ಸಿಯಮ್-4 ಮಿಷನ್ (Axiom-4 Mission) ಉಡಾವಣೆಯನ್ನು ಕೆಟ್ಟ ಹವಾಮಾನದಿಂದಾಗಿ ಒಂದು ದಿನ ಮುಂದೂಡಲಾಗಿದೆ. ನಿಗದಿತ ವೇಳಾಪಟ್ಟಿಯ ಪ್ರಕಾರ ನಾಳೆ ಶುಭಾಂಶು ಶುಕ್ಲಾ (Shubhanshu Shukla) ಅವರ ತಂಡ ಬಾಹ್ಯಾಕಾಶ ಪ್ರಯಾಣ ಬೆಳೆಸಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದಿಂದ ಅದನ್ನು ಜೂನ್ 11ಕ್ಕೆ ಮುಂದೂಡಲಾಗಿದೆ. ನಾಸಾ ಮತ್ತು ಸ್ಪೇಸ್‌ಎಕ್ಸ್ ಸಹಯೋಗದೊಂದಿಗೆ ಆಕ್ಸಿಯಮ್ ಸ್ಪೇಸ್ ಆಯೋಜಿಸಿರುವ ಈ ಮಿಷನ್, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ನಡೆಸುವ ಗುರಿಯನ್ನು ಹೊಂದಿದೆ. ವಾಣಿಜ್ಯಿಕವಾಗಿ ಸಿಬ್ಬಂದಿಯೊಂದಿಗೆ ಬಾಹ್ಯಾಕಾಶ ಹಾರಾಟದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲು ಶುಭಾಂಶು ಶುಕ್ಲಾ ಸಿದ್ಧತೆ ನಡೆಸುತ್ತಿರುವುದರಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನಗಳಲ್ಲಿ ಭಾರತದ ಉಪಸ್ಥಿತಿಗೆ ಇದು ಮಹತ್ವದ ಮೈಲಿಗಲ್ಲು.

“ಹವಾಮಾನ ವೈಪರೀತ್ಯದಿಂದಾಗಿ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭಾರತೀಯ ಗಗನಯಾತ್ರಿಯನ್ನು ಕಳುಹಿಸಲು ಆಕ್ಸಿಯಮ್ -4 ಮಿಷನ್‌ನ ಉಡಾವಣೆಯನ್ನು ಜೂನ್ 10ರಿಂದ ಜೂನ್ 11ಕ್ಕೆ ಮುಂದೂಡಲಾಗಿದೆ. ಉಡಾವಣೆಯ ಉದ್ದೇಶಿತ ಸಮಯ ಜೂನ್ 11ರಂದು ಸಂಜೆ 5.30 (ಭಾರತೀಯ ಕಾಲಮಾನದ ಪ್ರಕಾರ)” ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಎಕ್ಸ್​ ನಲ್ಲಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ
Image
ಭಾರತದ ಸ್ನೇಹಿತರಿಂದ ಕೆಲವು ಮಾಹಿತಿ ಪಡೆದಿದ್ದು ಹೌದೆಂದು ಒಪ್ಪಿಕೊಂಡ ನಾಸಿರ್
Image
11 ವರ್ಷಗಳಲ್ಲಿ ಭಾರತದ ಜನರ ಬದುಕನ್ನು ಕೇಂದ್ರ ಸರ್ಕಾರ ಹೇಗೆ ಬದಲಿಸಿದೆ?
Image
ಹೊಸ ಇತಿಹಾಸ ಸೃಷ್ಟಿಯತ್ತ ಶುಭಾಂಶು ಶುಕ್ಲ; ಮುಖ್ಯಾಂಶಗಳು
Image
ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕರು, ಐದಕ್ಕಿಂತ ಹೆಚ್ಚು ಮಂದಿ ಸಾವು

ಇದನ್ನೂ ಓದಿ: ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣುತ್ತೆ, ವಿವರ ಹಂಚಿಕೊಂಡ ಗಗನಯಾತ್ರಿ ಸುನಿತಾ ವಿಲಿಯಮ್ಸ್​

ಈ ಮಿಷನ್ – ಹೂಸ್ಟನ್ ಮೂಲದ ಆಕ್ಸಿಯಮ್ ಸ್ಪೇಸ್‌ನ ಸಹಯೋಗದೊಂದಿಗೆ ಯುಎಸ್ ಬಾಹ್ಯಾಕಾಶ ಸಂಸ್ಥೆ ನಾಸಾದ ಸಹಭಾಗಿತ್ವದಲ್ಲಿ ಮಿಷನ್ ಆಕಾಶ್ ಗಂಗಾ ಎಂದೂ ಕರೆಯಲ್ಪಡುತ್ತದೆ. ಇದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯವನ್ನು ಸುತ್ತುತ್ತದೆ. ಫ್ಲೋರಿಡಾದ ಕೆಎಸ್‌ಸಿಯ ಲಾಂಚ್ ಕಾಂಪ್ಲೆಕ್ಸ್ 39 ಎನಿಂದ ಉಡಾವಣೆಗೊಳ್ಳಲಿರುವ ಆಕ್ಸಿಯಮ್ -4 (ಆಕ್ಸ್ -4) ಮಿಷನ್‌ನಲ್ಲಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಜೊತೆ ಕಮಾಂಡರ್ ಪೆಗ್ಗಿ ವಿಟ್ಸನ್, ಪೈಲಟ್ ಶುಕ್ಲಾ ಮತ್ತು ತಜ್ಞರಾದ ಹಂಗೇರಿಯ ಟಿಗೋರ್ ಕಪು ಮತ್ತು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿವ್ಸ್ಕಿ ಕೂಡ ಇದ್ದಾರೆ.

ಬಾಹ್ಯಾಕಾಶದಲ್ಲಿ 14 ದಿನಗಳ ವಾಸ್ತವ್ಯದ ಅವಧಿಯಲ್ಲಿ Ax-4 ಸಿಬ್ಬಂದಿ ಪ್ರಧಾನಿ ನರೇಂದ್ರ ಮೋದಿ, ಶಾಲಾ ವಿದ್ಯಾರ್ಥಿಗಳು ಮತ್ತು ಬಾಹ್ಯಾಕಾಶ ಉದ್ಯಮದ ಪ್ರಮುಖರೊಂದಿಗೆ ಸಂವಹನ ನಡೆಸುವ ನಿರೀಕ್ಷೆಯಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ (DBT) ನಡುವಿನ ಸಹಯೋಗದಡಿಯಲ್ಲಿ ಅಭಿವೃದ್ಧಿಪಡಿಸಲಾದ ವಿಶೇಷ ಆಹಾರ ಮತ್ತು ಪೌಷ್ಟಿಕಾಂಶ-ಸಂಬಂಧಿತ ಪ್ರಯೋಗಗಳನ್ನು ಶುಭಾಂಶು ಶುಕ್ಲಾ ನಡೆಸಲು ಸಜ್ಜಾಗಿದ್ದು, ನಾಸಾದ ಬೆಂಬಲದೊಂದಿಗೆ ಇದನ್ನು ಮಾಡಬಹುದು.

ಇದನ್ನೂ ಓದಿ: Shubhanshu Shukla: 4 ದಶಕಗಳ ಬಳಿಕ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿರುವ ಮೊದಲ ಭಾರತೀಯ ಶುಭಾಂಶು ಶುಕ್ಲ; ಸಂಪೂರ್ಣ ಮಾಹಿತಿ

ಈ ಪ್ರಯೋಗಗಳು ಭವಿಷ್ಯದ ದೀರ್ಘಾವಧಿಯ ಬಾಹ್ಯಾಕಾಶ ಪ್ರಯಾಣಕ್ಕೆ ಅತ್ಯಗತ್ಯವಾದ ಬಾಹ್ಯಾಕಾಶ ಪೋಷಣೆ ಮತ್ತು ಸ್ವಾವಲಂಬಿ ಜೀವ ಬೆಂಬಲ ವ್ಯವಸ್ಥೆಗಳನ್ನು ಪ್ರವರ್ತಿಸುವ ಗುರಿಯನ್ನು ಹೊಂದಿವೆ. ISRO ಶುಭಾಂಶು ಶುಕ್ಲಾಗಾಗಿ 7 ಪ್ರಯೋಗಗಳ ಗುಂಪನ್ನು ಸಿದ್ಧಪಡಿಸಿದೆ. ಅವರು NASA ತನ್ನ ಮಾನವ ಸಂಶೋಧನಾ ಕಾರ್ಯಕ್ರಮಕ್ಕಾಗಿ ಯೋಜಿಸಿರುವ 5 ಜಂಟಿ ಅಧ್ಯಯನಗಳಲ್ಲಿ ಭಾಗವಹಿಸಲಿದ್ದಾರೆ. ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಸ್ಥಿತಿಗಳಲ್ಲಿ ಮೊಳಕೆಯೊಡೆಯುವ ಮೆಂತ್ಯ ಮತ್ತು ಹೆಸರುಕಾಳು ಸೇರಿದಂತೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಪ್ರಯೋಗಗಳನ್ನು ನಡೆಸಲು ಭಾರತ ಕೇಂದ್ರಿತ ಆಹಾರದ ಮೇಲೆ ಕೇಂದ್ರೀಕರಿಸಲು ಇದು ಯೋಜನೆಗಳನ್ನು ರೂಪಿಸಿದೆ.

ಆಕ್ಸಿಯಮ್ ಮಿಷನ್- 4ರಲ್ಲಿ ಶುಭಾಂಶು ಶುಕ್ಲಾ ಅವರ ಅನುಭವವನ್ನು 2027ಕ್ಕೆ ಯೋಜಿಸಲಾಗಿರುವ ಗಗನಯಾನ ಕಾರ್ಯಾಚರಣೆಯಲ್ಲಿ ಉತ್ತಮವಾಗಿ ಬಳಸಿಕೊಳ್ಳಲಾಗುವುದು. ಆಕ್ಸಿಯಮ್ -4 ಕಾರ್ಯಾಚರಣೆಗಾಗಿ ಇಸ್ರೋ 550 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್