AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya: ಉಚಿತ ತೀರ್ಥಯಾತ್ರೆ ಯೋಜನೆಯಡಿ ಡಿ. 3ರಂದು ಅಯೋಧ್ಯೆಗೆ ರೈಲು ಸಂಚಾರ ಆರಂಭ; ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

Free Pilgrimage Scheme: ಸುಮಾರು ಒಂದು ತಿಂಗಳ ಹಿಂದೆ ಸಿಎಂ ಅರವಿಂದ್ ಕೇಜ್ರಿವಾಲ್ ಉಚಿತ ತೀರ್ಥಯಾತ್ರೆ ಯೋಜನೆಯನ್ನು ಘೋಷಿಸಿದ್ದರು. ಈ ಯೋಜನೆಯ ಮೊದಲ ರೈಲು ಡಿಸೆಂಬರ್ 3ರಂದು ಹೊರಡಲಿದೆ. ಈಗಾಗಲೇ ರಿಜಿಸ್ಟ್ರೇಷನ್ ಶುರುವಾಗಿದೆ.

Ayodhya: ಉಚಿತ ತೀರ್ಥಯಾತ್ರೆ ಯೋಜನೆಯಡಿ ಡಿ. 3ರಂದು ಅಯೋಧ್ಯೆಗೆ ರೈಲು ಸಂಚಾರ ಆರಂಭ; ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
TV9 Web
| Updated By: ಸುಷ್ಮಾ ಚಕ್ರೆ|

Updated on: Nov 24, 2021 | 7:39 PM

Share

ನವದೆಹಲಿ: ದೆಹಲಿ ಸರ್ಕಾರದ ಉಚಿತ ತೀರ್ಥಯಾತ್ರೆ ಯೋಜನೆಯಡಿ ಅಯೋಧ್ಯೆಗೆ ಡಿಸೆಂಬರ್ 3ರಂದು ಮೊದಲ ರೈಲು ಹೊರಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಉಚಿತ ತೀರ್ಥಯಾತ್ರೆ ಯೋಜನೆಯ ಪಟ್ಟಿಯಲ್ಲಿ ತಮಿಳುನಾಡಿನ ವೇಲಂಕಣಿ ಚರ್ಚ್ ಕೂಡ ಇದೆ. ಕ್ಯಾಥೋಲಿಕರ ಪ್ರಮುಖ ತೀರ್ಥಯಾತ್ರೆ ಕ್ಷೇತ್ರವಾದ ತಮಿಳುನಾಡಿನ ವೇಲಂಕಣಿ ಚರ್ಚ್ ಅನ್ನು ಉಚಿತ ತೀರ್ಥಯಾತ್ರೆ ಯೋಜನೆಯ ಸ್ಥಳಗಳ ಪಟ್ಟಿಗೆ ಸೇರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಸುಮಾರು ಒಂದು ತಿಂಗಳ ಹಿಂದೆ ಸಿಎಂ ಅರವಿಂದ್ ಕೇಜ್ರಿವಾಲ್ ಉಚಿತ ತೀರ್ಥಯಾತ್ರೆ ಯೋಜನೆಯನ್ನು ಘೋಷಿಸಿದ್ದರು. ಅಯೋಧ್ಯೆಗೆ ನಮ್ಮ ಯೋಜನೆಯ ಮೊದಲ ರೈಲು ಡಿಸೆಂಬರ್ 3ರಂದು ಹೊರಡಲಿದೆ. ಈಗಾಗಲೇ ರಿಜಿಸ್ಟ್ರೇಷನ್ ಶುರುವಾಗಿದೆ. ಈ ರೈಲು ದೆಹಲಿಯ 1,000 ಹಿರಿಯ ನಾಗರಿಕರನ್ನು ಅಯೋಧ್ಯೆಗೆ ಕರೆದೊಯ್ಯಲಿದೆ. ಹಿರಿಯ ನಾಗರಿಕರಿಂದ ತೀರ್ಥಯಾತ್ರೆ ಯೋಜನೆಗೆ ಬಹಳ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ತೀರ್ಥಯಾತ್ರಾ ಯೋಜನೆ ಹಿರಿಯ ನಾಗರಿಕರು ತೀರ್ಥಯಾತ್ರೆಗೆ ಹೋಗಬಹುದಾದ 12 ಸ್ಥಳಗಳ ಪಟ್ಟಿಯನ್ನು ಹೊಂದಿದೆ. ಆ ಪಟ್ಟಿಗೆ ಅಯೋಧ್ಯೆಯನ್ನು ಸೇರಿಸಿದ್ದೇವೆ. ದೆಹಲಿಯಲ್ಲಿರುವ ಯಾವುದೇ ಹಿರಿಯ ನಾಗರಿಕರು ಈ ಯೋಜನೆಯ ಲಾಭವನ್ನು ಪಡೆಯಬಹುದು. ಒಬ್ಬ ಹಿರಿಯ ವ್ಯಕ್ತಿಗೆ ಒಬ್ಬ ಯುವಕನನ್ನು ಅಟೆಂಡರ್ ಆಗಿ ಕರೆದುಕೊಂಡು ಹೋಗಬಹುದು. ದೆಹಲಿಯಿಂದ ಅಯೋಧ್ಯೆಗೆ ಮೊದಲ ರೈಲು ಡಿಸೆಂಬರ್ 3ರಂದು ಹೊರಡಲಿದೆ. ದೆಹಲಿ ಸರ್ಕಾರದ ಇ-ಡಿಸ್ಟ್ರಿಕ್ಟ್ ಪೋರ್ಟಲ್‌ನಲ್ಲಿ ಈಗಾಗಲೇ ನೋಂದಣಿ ಪ್ರಾರಂಭವಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.

ಈ ಯೋಜನೆಯಡಿಯಲ್ಲಿ ಎಸಿ ರೈಲುಗಳಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು. ಯಾತ್ರಿಕರನ್ನು ಎಸಿ ಹೋಟೆಲ್‌ಗಳಲ್ಲಿ ಇರಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆಹಾರ ಮತ್ತು ಪ್ರಯಾಣದ ವೆಚ್ಚವನ್ನು ಸಹ ಸರ್ಕಾರವೇ ಭರಿಸಲಿದೆ ಮತ್ತು ಸದ್ಯಕ್ಕೆ 36,000ಕ್ಕೂ ಹೆಚ್ಚು ಜನರು ಯೋಜನೆಯ ಲಾಭ ಪಡೆದಿದ್ದಾರೆ. ಪ್ರತಿಯೊಬ್ಬರಿಗೂ ದರ್ಶನಕ್ಕೆ ಅವಕಾಶ ಸಿಗುವಂತೆ ನೋಡಿಕೊಳ್ಳುತ್ತೇನೆ. ಹೆಚ್ಚು ಜನರಿದ್ದರೆ ವಾರದ ನಂತರ ಇನ್ನೊಂದು ರೈಲನ್ನು ಕಳುಹಿಸುತ್ತೇವೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ನಾನು ಹಿಂದೂ, ಹಾಗಾಗಿ ದೇವಸ್ಥಾನಗಳಿಗೆ  ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್

ಕಾಂಗ್ರೆಸ್​​ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ, ಆದರೆ ಕಸಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ: ಅರವಿಂದ್ ಕೇಜ್ರಿವಾಲ್​

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?