AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿ ಸಮೀಪದಲ್ಲಿರುವ ಗುಡಿಸಲಿಗೆ ನುಗ್ಗಿದ ಡಂಪರ್, ಗರ್ಭಿಣಿ ಸೇರಿ ನಾಲ್ಕು ಮಂದಿ ಸಾವು

ಉತ್ತರ ಪ್ರದೇಶದ ಲಕ್ನೋದಲ್ಲಿ ಭಾರಿ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ನಿಯಂತ್ರಣ ತಪ್ಪಿದ ಡಂಪರ್ ಡಿಕ್ಕಿ ಹೊಡೆದು ಇಡೀ ಕುಟುಂಬ ಸಾವನ್ನಪ್ಪಿದೆ. ಬಿಬಿಡಿ ವಿಶ್ವವಿದ್ಯಾಲಯದ ಮುಂಭಾಗದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ನಡೆಸಿದ ಟ್ರಕ್ ಚಾಲಕ ಪೊಲೀಸ್ ವಶದಲ್ಲಿದ್ದಾನೆ. ಈ ಅಪಘಾತದ ನಂತರ ಸ್ಥಳೀಯರು ಜಾಮ್‌ ಸೃಷ್ಟಿಸಿದರು. ಪೊಲೀಸರು ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಅಗತ್ಯ ಕ್ರಮ ಕೈಗೊಂಡು ತನಿಖೆ ಆರಂಭಿಸಿದ್ದಾರೆ.

ಹೆದ್ದಾರಿ ಸಮೀಪದಲ್ಲಿರುವ ಗುಡಿಸಲಿಗೆ ನುಗ್ಗಿದ ಡಂಪರ್, ಗರ್ಭಿಣಿ ಸೇರಿ ನಾಲ್ಕು ಮಂದಿ ಸಾವು
ಅಪಘಾತ
Follow us
ನಯನಾ ರಾಜೀವ್
|

Updated on: Jul 20, 2024 | 8:52 AM

ಅಯೋಧ್ಯೆ ಹೆದ್ದಾರಿಯಲ್ಲಿರುವ ಬಿಬಿಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ಭಾರಿ ಅಪಘಾತ ಸಂಭವಿಸಿದೆ. ಡಂಪರ್ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿದ್ದ ಗುಡಿಸಲಿಗೆ ನುಗ್ಗಿದ ಪರಿಣಾಮ ಗರ್ಭಿಣಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ದಂಪತಿಯ ಏಳು ವರ್ಷದ ಮಗಳು ಬದುಕುಳಿದಿದ್ದಾಳೆ.

ಬಾರಾಬಂಕಿಯ ಜೈತ್‌ಪುರ ನಿವಾಸಿ ಉಮೇಶ್ (35) ಟೈಲ್ಸ್ ಕುಶಲಕರ್ಮಿ. ಅವರು ತಮ್ಮ ಪತ್ನಿ ನೀಲಂ (32), ಪುತ್ರರಾದ ಗೋಲು (4), ಸನ್ನಿ (13) ಮತ್ತು ಮಗಳು ವೈಷ್ಣವಿ ಅವರೊಂದಿಗೆ ಅಯೋಧ್ಯೆ ಹೆದ್ದಾರಿಯ ಗುಡಿಸಲಿನಲ್ಲಿ ವಾಸಿಸುತ್ತಿದ್ದರು.

ಇಡೀ ಕುಟುಂಬ ಗುಡಿಸಲಿನಲ್ಲಿ ಮಲಗಿದ್ದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಡಂಪರ್ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದೆ. ಅಪಘಾತದಲ್ಲಿ ಉಮೇಶ್, ನೀಲಂ, ಗೋಳು ಮತ್ತು ಸನ್ನಿ ಸಾವನ್ನಪ್ಪಿದ್ದಾರೆ. ವೈಷ್ಣವಿ ಮಾತ್ರ ಬದುಕುಳಿದರು.

ಮತ್ತಷ್ಟು ಓದಿ: ಪ್ರತ್ಯೇಕ ಘಟನೆ: ನೈಸ್ ರಸ್ತೆಯಲ್ಲಿ ಸರಣಿ ಅಪಘಾತ: ಒಟ್ಟು 4 ಸಾವು, ಐವರಿಗೆ ಗಂಭೀರ ಗಾಯ

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಡಂಪರ್ ಚಾಲಕನನ್ನು ಬಂಧಿಸಲಾಗಿದೆ. ನೀಲಂ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ಅವರ ಸೋದರಳಿಯ ಧರಂ ಸಿಂಗ್ ಎಫ್‌ಐಆರ್ ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್