AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿ ಸಮೀಪದಲ್ಲಿರುವ ಗುಡಿಸಲಿಗೆ ನುಗ್ಗಿದ ಡಂಪರ್, ಗರ್ಭಿಣಿ ಸೇರಿ ನಾಲ್ಕು ಮಂದಿ ಸಾವು

ಉತ್ತರ ಪ್ರದೇಶದ ಲಕ್ನೋದಲ್ಲಿ ಭಾರಿ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ನಿಯಂತ್ರಣ ತಪ್ಪಿದ ಡಂಪರ್ ಡಿಕ್ಕಿ ಹೊಡೆದು ಇಡೀ ಕುಟುಂಬ ಸಾವನ್ನಪ್ಪಿದೆ. ಬಿಬಿಡಿ ವಿಶ್ವವಿದ್ಯಾಲಯದ ಮುಂಭಾಗದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ನಡೆಸಿದ ಟ್ರಕ್ ಚಾಲಕ ಪೊಲೀಸ್ ವಶದಲ್ಲಿದ್ದಾನೆ. ಈ ಅಪಘಾತದ ನಂತರ ಸ್ಥಳೀಯರು ಜಾಮ್‌ ಸೃಷ್ಟಿಸಿದರು. ಪೊಲೀಸರು ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಅಗತ್ಯ ಕ್ರಮ ಕೈಗೊಂಡು ತನಿಖೆ ಆರಂಭಿಸಿದ್ದಾರೆ.

ಹೆದ್ದಾರಿ ಸಮೀಪದಲ್ಲಿರುವ ಗುಡಿಸಲಿಗೆ ನುಗ್ಗಿದ ಡಂಪರ್, ಗರ್ಭಿಣಿ ಸೇರಿ ನಾಲ್ಕು ಮಂದಿ ಸಾವು
ಅಪಘಾತ
ನಯನಾ ರಾಜೀವ್
|

Updated on: Jul 20, 2024 | 8:52 AM

Share

ಅಯೋಧ್ಯೆ ಹೆದ್ದಾರಿಯಲ್ಲಿರುವ ಬಿಬಿಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ಭಾರಿ ಅಪಘಾತ ಸಂಭವಿಸಿದೆ. ಡಂಪರ್ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿದ್ದ ಗುಡಿಸಲಿಗೆ ನುಗ್ಗಿದ ಪರಿಣಾಮ ಗರ್ಭಿಣಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ದಂಪತಿಯ ಏಳು ವರ್ಷದ ಮಗಳು ಬದುಕುಳಿದಿದ್ದಾಳೆ.

ಬಾರಾಬಂಕಿಯ ಜೈತ್‌ಪುರ ನಿವಾಸಿ ಉಮೇಶ್ (35) ಟೈಲ್ಸ್ ಕುಶಲಕರ್ಮಿ. ಅವರು ತಮ್ಮ ಪತ್ನಿ ನೀಲಂ (32), ಪುತ್ರರಾದ ಗೋಲು (4), ಸನ್ನಿ (13) ಮತ್ತು ಮಗಳು ವೈಷ್ಣವಿ ಅವರೊಂದಿಗೆ ಅಯೋಧ್ಯೆ ಹೆದ್ದಾರಿಯ ಗುಡಿಸಲಿನಲ್ಲಿ ವಾಸಿಸುತ್ತಿದ್ದರು.

ಇಡೀ ಕುಟುಂಬ ಗುಡಿಸಲಿನಲ್ಲಿ ಮಲಗಿದ್ದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಡಂಪರ್ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದೆ. ಅಪಘಾತದಲ್ಲಿ ಉಮೇಶ್, ನೀಲಂ, ಗೋಳು ಮತ್ತು ಸನ್ನಿ ಸಾವನ್ನಪ್ಪಿದ್ದಾರೆ. ವೈಷ್ಣವಿ ಮಾತ್ರ ಬದುಕುಳಿದರು.

ಮತ್ತಷ್ಟು ಓದಿ: ಪ್ರತ್ಯೇಕ ಘಟನೆ: ನೈಸ್ ರಸ್ತೆಯಲ್ಲಿ ಸರಣಿ ಅಪಘಾತ: ಒಟ್ಟು 4 ಸಾವು, ಐವರಿಗೆ ಗಂಭೀರ ಗಾಯ

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಡಂಪರ್ ಚಾಲಕನನ್ನು ಬಂಧಿಸಲಾಗಿದೆ. ನೀಲಂ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ಅವರ ಸೋದರಳಿಯ ಧರಂ ಸಿಂಗ್ ಎಫ್‌ಐಆರ್ ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!