AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya: ಅತಿಯಾದ ತಾಪಮಾನದಿಂದಾಗಿ ಕರ್ತವ್ಯನಿರತ ಟ್ರಾಫಿಕ್ ಪೊಲೀಸ್ ಸಾವು

ಉತ್ತರ ಪ್ರದೇಶ(Uttar Pradesh) ದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಹೀಟ್​ ಸ್ಟ್ರೋಕ್​ನಿಂದಾಗಿ ಅಯೋಧ್ಯೆಯಲ್ಲಿ ಟ್ರಾಫಿಕ್ ಪೊಲೀಸ್​  ಒಬ್ಬರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

Ayodhya: ಅತಿಯಾದ ತಾಪಮಾನದಿಂದಾಗಿ ಕರ್ತವ್ಯನಿರತ ಟ್ರಾಫಿಕ್ ಪೊಲೀಸ್ ಸಾವು
ಶಾಖImage Credit source: Deccan Herald
ನಯನಾ ರಾಜೀವ್
|

Updated on: Jun 19, 2023 | 1:59 PM

Share

ಉತ್ತರ ಪ್ರದೇಶ(Uttar Pradesh) ದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಹೀಟ್​ ಸ್ಟ್ರೋಕ್​ನಿಂದಾಗಿ ಅಯೋಧ್ಯೆಯಲ್ಲಿ ಟ್ರಾಫಿಕ್ ಪೊಲೀಸ್​  ಒಬ್ಬರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ವಿನೋದ್ ಸೋಂಕರ್( 40)  ಟ್ರಾಫಿಕ್ ಪೊಲೀಸ್ ಸಬ್-ಇನ್‌ಸ್ಪೆಕ್ಟರ್ ತೀವ್ರ ಶಾಖದ ಕಾರಣ ತಲೆ ತಿರುಗಿ ಬಿದ್ದಿದ್ದಾರೆ, ಮತ್ತೆ ಮೇಲೇಳಲು ಸಾಧ್ಯವೇ ಆಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿನೋದ್ ಸೋಂಕರ್ ಅವರು ಭಾನುವಾರ ಮಧ್ಯಾಹ್ನ ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನದ ಬಳಿ ಕರ್ತವ್ಯದಲ್ಲಿದ್ದರು ಎಂದು ವೃತ್ತ ಅಧಿಕಾರಿ (ಸಂಚಾರ) ಪ್ರಮೋದ್ ಯಾದವ್ ತಿಳಿಸಿದ್ದಾರೆ.

ತೀವ್ರ ಸೆಕೆಯಿಂದಾಗಿ ಸೋಂಕರ್ ಪ್ರಜ್ಞೆ ತಪ್ಪಿ ಬಿದ್ದಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಅಯೋಧ್ಯೆಯ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಡಾ ಅಜಯ್ ರಾಜಾ ಹೇಳಿದ್ದಾರೆ. ಸಾವಿಗೆ ಹೀಟ್​ ಸ್ಟ್ರೋಕ್ ಕಾರಣವೇ ಎಂಬುದರ ಕುರಿತು ಇನ್ನೂ ಮಾಹಿತಿ ಲಭ್ಯವಾಗಬೇಕಿದೆ.

ಮತ್ತಷ್ಟು ಓದಿ: Uttar Pradesh: ಅತಿಯಾದ ತಾಪಮಾನದಿಂದಾಗಿ 72 ಗಂಟೆಗಳಲ್ಲಿ 54 ಮಂದಿ ಸಾವು, 400 ಮಂದಿ ಅಸ್ವಸ್ಥ

ಉತ್ತರ ಪ್ರದೇಶ(Uttar Pradesh)ದಲ್ಲಿ ಅತಿಯಾದ ಶಾಖದಿಂದಾಗಿ 54 ಮಂದಿ ಸಾವನ್ನಪ್ಪಿದ್ದಾರೆ. 2  ದಿನಗಳ ಹಿಂದೆ 400 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ 54 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 400 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾವಿಗೆ ಬೇರೆ ಬೇರೆ ಕಾರಣಗಳಿದ್ದರೂ, ತೀವ್ರ ಶಾಖವೂ ಒಂದು ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ತೀವ್ರ ಶಾಖದಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಅವರು ಹೇಳಿದರು. ತೀವ್ರವಾದ ಶಾಖದ ಅಲೆಯು ಉತ್ತರ ಪ್ರದೇಶದವನ್ನು ಆವರಿಸಿದೆ, ಹೆಚ್ಚಿನ ಸ್ಥಳಗಳು ಗರಿಷ್ಠ ಉಷ್ಣಾಂಶ 40 ಡಿಗ್ರಿಗಳಿಗಿಂತ ಹೆಚ್ಚಿದೆ.

ಹಠಾತ್ ಸಾವುಗಳು ಮತ್ತು ಜ್ವರ, ಉಸಿರಾಟದ ತೊಂದರೆ ಮತ್ತು ಇತರ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಜೂನ್ 15 ರಂದು 23 ಮಂದಿ ಮೃತಪಟ್ಟಿದ್ದಾರೆ, ಮರುದಿನ 20 ಮಂದಿ, 17 ರಂದು 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆಸ್ಪತ್ರೆ ಬಲ್ಲಿಯಾ ಪ್ರಭಾರಿ ವೈದ್ಯಕೀಯ ಅಧೀಕ್ಷಕ ಎಸ್‌ಕೆ ಯಾದವ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ