
ಅಯೋಧ್ಯೆ, ಆ.12: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಥಮ ಪೂರ್ಣಕಾಲಿಕ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹುದ್ದೆಯ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಮಂಗಳವಾರ ನಡೆದ ಸಂದರ್ಶನದಲ್ಲಿ ಅಭ್ಯರ್ಥಿಗಳಿಗೆ ಅವರ ಆಡಳಿತಾತ್ಮಕ ಅನುಭವದ ಜೊತೆಗೆ ಧಾರ್ಮಿಕ ಆಚರಣೆ, ಜೀವನಶೈಲಿ ಮತ್ತು ಹಿಂದುತ್ವದ ಆಧಾರದ ಮೇಲೆ ಕಠಿಣ ಪ್ರಶ್ನೆಗಳನ್ನು ಕೇಳಲಾಗಿದೆ.
ಸುಮಾರು 5,200 ಅರ್ಜಿಗಳ ಪೈಕಿ 18 ಅಭ್ಯರ್ಥಿಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿತ್ತು. ಸಂದರ್ಶನಕ್ಕೆ ಹಾಜರಾಗುವ ಮುನ್ನ ಎಲ್ಲಾ ಅಭ್ಯರ್ಥಿಗಳಿಗೆ 34 ಅಂಶಗಳ ಗೂಗಲ್ ಫಾರ್ಮ್ ಭರ್ತಿ ಮಾಡಲು ಸೂಚಿಸಲಾಗಿತ್ತು. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಅಭ್ಯರ್ಥಿಗಳಿಗೆ ವೈಯಕ್ತಿಕ ಹಾಗೂ ಧಾರ್ಮಿಕ ಜೀವನಕ್ಕೆ ಸಂಬಂಧಿಸಿದಂತೆ ಈ ಕೆಳಗಿನ ಪ್ರಮುಖ ಪ್ರಶ್ನೆಗಳನ್ನು ಕೇಳಲಾಗಿದೆ.
ಇದನ್ನೂ ಓದಿ: ಮುಂಬೈನ ಘಾಟ್ಕೋಪರ್ನಲ್ಲಿ ಭಾರಿ ಭೂಕುಸಿತ: ಇಬ್ಬರು ಬಲಿ, ನಾಲ್ಕೈದು ಜನರು ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ
ಆಯ್ಕೆಯಾದ 18 ಅಭ್ಯರ್ಥಿಗಳಲ್ಲಿ ನಾಲ್ವರು ವಿಶ್ರಾಂತ ಐಎಎಸ್ ಅಧಿಕಾರಿಗಳು, ಐಪಿಎಸ್ ಹಾಗೂ ಸೇನಾ ಮಾಜಿ ಅಧಿಕಾರಿಗಳು ಸೇರಿದ್ದಾರೆ. ಮಂಗಳವಾರ 8 ಅಭ್ಯರ್ಥಿಗಳು ಮುಖಾಮುಖಿ ನೇರ ಸಂದರ್ಶನಕ್ಕೆ ಹಾಜರಾಗಿದ್ದು, ಪ್ರತಿಯೊಬ್ಬರ ಸಂದರ್ಶನ 1 ರಿಂದ 2 ಗಂಟೆಗಳ ಕಾಲ ನಡೆಯಿತು.ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪ್ರಮೋದ್ ಕೊಹ್ಲಿ, ನಿವೃತ್ತ ಲೆಫ್ಟಿನೆಂಟ್ ಜನರಲ್ ವಿಷ್ಣುಕಾಂತ್ ಚತುರ್ವೇದಿ ಹಾಗೂ ಸುರೇಶ್ ಹಾವರೆ ಅವರನ್ನೊಳಗೊಂಡ ಉನ್ನತ ಸಮಿತಿಯು ಈ ಸಂದರ್ಶನ ನಡೆಸುತ್ತಿದೆ. ಆಯ್ಕೆ ಸಮಿತಿಯು ಸೆಪ್ಟೆಂಬರ್ 2 ರೊಳಗೆ 3 ಪ್ರಮುಖ ಹೆಸರುಗಳನ್ನು ಟ್ರಸ್ಟ್ಗೆ ಶಿಫಾರಸು ಮಾಡಲಿದ್ದು, ಅದರಲ್ಲಿ ಒಬ್ಬರನ್ನು ಅಂತಿಮ ಸಿಇಒ ಆಗಿ ಆಯ್ಕೆ ಮಾಡಲಾಗುತ್ತದೆ.
ಇತ್ತೀಚೆಗೆ ರಾಮಮಂದಿರದ ದೇಣಿಗೆ ಹಣದ ದುರುಪಯೋಗ ಮತ್ತು ಆರ್ಥಿಕ ಅಕ್ರಮಗಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಟ್ರಸ್ಟ್ನ ಆಡಳಿತ ಹಾಗೂ ಹಣಕಾಸು ನಿರ್ವಹಣೆಯನ್ನು ಪಾರದರ್ಶಕವಾಗಿ ನಡೆಸಲು ಈ ಪೂರ್ಣಕಾಲಿಕ ಸಿಇಒ ಹುದ್ದೆಯನ್ನು ಸೃಷ್ಟಿಸಲಾಗಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ