AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಕೈಯಲ್ಲಿ ಕಾಲು ಒತ್ತಿಸಿಕೊಳ್ಳುತ್ತಿದ್ದರು, ರಾಮ ಮಂದಿರ ಟ್ರಸ್ಟ್ ಅಧಿಕಾರಿಗಳ ವಿರುದ್ಧ ಮಾಜಿ ಸಿಬ್ಬಂದಿ ಗಂಭೀರ ಆರೋಪ

ಅಯೋಧ್ಯೆ ರಾಮ ಮಂದಿರ ಟ್ರಸ್ಟ್‌ನಲ್ಲಿ ಮಾಜಿ ಸಿಬ್ಬಂದಿ ಗಂಭೀರ ಕಿರುಕುಳ ಮತ್ತು ಭ್ರಷ್ಟಾಚಾರ ಆರೋಪಿಸಿದ್ದಾರೆ. ಅಧಿಕಾರಿಗಳು ತಮ್ಮಿಂದ ಪಾದ ಸೇವೆ ಮಾಡಿಸುತ್ತಿದ್ದರು ಎಂದು ಅವರು ವಿವರಿಸಿದ್ದಾರೆ. ದೇಣಿಗೆ ಕಳ್ಳತನದ ಎಸ್‌ಐಟಿ ತನಿಖೆ ನಡೆಯುತ್ತಿರುವಾಗಲೇ ಈ ಹೊಸ ಆರೋಪಗಳು ಹೊರಬಂದಿವೆ. ಉದ್ಯೋಗ ಭದ್ರತೆ ಇಲ್ಲದಿರುವುದು ಮತ್ತು ಕಮಿಷನ್ ವಸೂಲಿಯಂತಹ ಅಕ್ರಮಗಳನ್ನು ಮಾಜಿ ಸಿಬ್ಬಂದಿ ಬಹಿರಂಗಪಡಿಸಿದ್ದಾರೆ. ಟ್ರಸ್ಟ್ ಆಡಳಿತದಲ್ಲಿ ಪಾರದರ್ಶಕತೆ ತರಲು ನಿವೃತ್ತ ಐಎಎಸ್ ಅಧಿಕಾರಿಯನ್ನು ಸಿಇಒ ಆಗಿ ನೇಮಿಸುವ ಚಿಂತನೆ ನಡೆಯುತ್ತಿದೆ.

ನಮ್ಮ ಕೈಯಲ್ಲಿ ಕಾಲು ಒತ್ತಿಸಿಕೊಳ್ಳುತ್ತಿದ್ದರು, ರಾಮ ಮಂದಿರ ಟ್ರಸ್ಟ್ ಅಧಿಕಾರಿಗಳ ವಿರುದ್ಧ ಮಾಜಿ ಸಿಬ್ಬಂದಿ ಗಂಭೀರ  ಆರೋಪ
ರಾಮ ಮಂದಿರ
ನಯನಾ ರಾಜೀವ್
|

Updated on:Jul 03, 2026 | 9:07 AM

Share

ಅಯೋಧ್ಯೆ, ಜುಲೈ 03:ಅಯೋಧ್ಯೆ ರಾಮ ಮಂದಿರ(Ram Mandir)ದ ಕೋಟ್ಯಂತರ ರೂಪಾಯಿ ದೇಣಿಗೆ ಕಳ್ಳತನ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಶೇಷ ತನಿಖಾ ತಂಡ (SIT) ಈ ದಂಧೆಯ ಆಳ ಜಾಲಾಡುತ್ತಿರುವ ಬೆನ್ನಲ್ಲೇ, ಮಂದಿರದಲ್ಲಿ ಸುಮಾರು 18 ತಿಂಗಳು ಕೆಲಸ ಮಾಡಿದ್ದ ಮಾಜಿ ಉದ್ಯೋಗಿಯೊಬ್ಬರು ನ್ಯೂಸ್ 18 ಇಂಡಿಯಾ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಟ್ರಸ್ಟ್‌ನ ಉನ್ನತ ಅಧಿಕಾರಿಗಳ ವಿರುದ್ಧ ಗಂಭೀರ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ಮಾಡಿರುವುದು ಹೊಸ ಸಂಚಲನ ಮೂಡಿಸಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಚಾಲಕ ಹಾಗೂ ಸೇವದಾರನಾಗಿದ್ದ ಟಿನ್ನು ಯಾದವ್ ಎಂಬಾತ ದೇವಸ್ಥಾನದ ನೌಕರರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದ. ಆತ ಮತ್ತು ಇತರೆ ಅಧಿಕಾರಿಗಳು ಮಂದಿರದ ನೌಕರರು ಹಾಗೂ ಸೇವಕರಿಂದ ತಮ್ಮ ಪಾದಗಳನ್ನು ಒತ್ತಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿದ್ದಾರೆ.

ಮಾಜಿ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಮತ್ತು ಅಧಿಕಾರಿ ಗೋಪಾಲ್ ರಾಯ್ ಮಂದಿರದ ಒಳಗಿನ ವ್ಯವಹಾರಗಳನ್ನು ತಮಗೆ ಬೇಕಾದಂತೆ ನಡೆಸುತ್ತಾ, ಸಾಮಾನ್ಯ ನೌಕರರಿಗೆ ತೀವ್ರ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಹಲವಾರು ಪ್ರಾಮಾಣಿಕ ಉದ್ಯೋಗಿಗಳು ಕೆಲಸ ಬಿಟ್ಟು ಹೋಗಿದ್ದಾರೆ.

ಮಂದಿರದಲ್ಲಿ ಉದ್ಯೋಗ ಭದ್ರತೆ ಎಂಬುದು ಇರಲಿಲ್ಲ. ಕೇವಲ ಪ್ರಭಾವಿ ವ್ಯಕ್ತಿಗಳ ಸಂಬಂಧಿಕರಿಗೆ ಮಾತ್ರ ಉದ್ಯೋಗ ನೀಡಲಾಗುತ್ತಿತ್ತು. ಅಲ್ಲದೆ, ಮಂದಿರದ ಸಣ್ಣಪುಟ್ಟ ಕಾಮಗಾರಿಗಳ ಕೆಲಸ ಹುಡುಕಿಕೊಂಡು ಬರುವ ಸಣ್ಣ ಕಂಪನಿಗಳಿಂದ ಶೇ. 10 ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿತ್ತು ಎಂದು ಅವರು ದೂರಿದ್ದಾರೆ. ಆದರೆ ಚಂಪತ್ ರಾಯ್ ವಿರುದ್ಧ ತನಗೆ ಯಾವುದೇ ವೈಯಕ್ತಿಕ ದೂರಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಓದಿ: ರಾಮ ಮಂದಿರ ದೇಣಿಗೆ ಹಗರಣದ ತನಿಖೆ ವೇಳೆ ಬಯಲಾಯ್ತು ನಕಲಿ ನೇಮಕಾತಿ ದಂಧೆ, ಸಿಗದ ಉದ್ಯೋಗ ದಾಖಲೆಗಳು

ಶೌಚಾಲಯದಲ್ಲಿ ಹಣ ಅಡಗಿಸಿಡುತ್ತಿದ್ದ ಖದೀಮರು ಜೈಲು ಸೇರಿರುವ ದೇಣಿಗೆ ಕಳ್ಳತನದ ಆರೋಪಿಗಳ ಬಗ್ಗೆ ಮಾತನಾಡಿದ ಮಾಜಿ ಸಿಬ್ಬಂದಿ, ನಾನು ಅವರನ್ನು ದೇವಸ್ಥಾನದ ಒಳಗಿನ ಟೀ ಕ್ಯಾಂಟೀನ್‌ನಲ್ಲಿ ಆಗಾಗ ಭೇಟಿಯಾಗುತ್ತಿದ್ದೆ. ಅವರ ನಡವಳಿಕೆ ಮೊದಲಿನಿಂದಲೂ ಅತ್ಯಂತ ಅನುಮಾನಾಸ್ಪದವಾಗಿತ್ತು ಎಂದಿದ್ದಾರೆ. ಎಸ್‌ಐಟಿ ತನಿಖೆಯ ಪ್ರಕಾರ, ಆರೋಪಿಗಳು ಸಿಸಿಟಿವಿ ಕ್ಯಾಮೆರಾಗಳ ಕಣ್ಣು ತಪ್ಪಿಸಿ ಭಾರಿ ಪ್ರಮಾಣದ ಕಾಣಿಕೆ ಹಣವನ್ನು ಕದ್ದು, ದೇವಸ್ಥಾನದ ಶೌಚಾಲಯಗಳಲ್ಲಿ ಅಡಗಿಸಿಡುತ್ತಿದ್ದರು ಎಂಬುದು ಬಯಲಾಗಿದೆ.

ತನಿಖೆ ತೀವ್ರ, ಟ್ರಸ್ಟ್‌ಗೆ ಐಎಎಸ್ ಅಧಿಕಾರಿ ನೇಮಕ ಸಾಧ್ಯತೆ ಪ್ರಕರಣದ ವ್ಯಾಪ್ತಿ ದೊಡ್ಡದಾಗುತ್ತಿರುವುದರಿಂದ ಕಾಣಿಕೆ ಎಣಿಕೆ ಉಸ್ತುವಾರಿ ವಹಿಸಿದ್ದ ವಾರಣಾಸಿ ಮೂಲದ ಭದ್ರತಾ ಸಂಸ್ಥೆಯ ಪಾತ್ರದ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಸುತ್ತಿದೆ. ಇದೇ ವೇಳೆ ಟ್ರಸ್ಟ್‌ನ ಭದ್ರತಾ ವ್ಯವಸ್ಥೆಯ ಕುರಿತು ಚಂಪತ್ ರಾಯ್ ಅವರನ್ನು ಅಧಿಕಾರಿಗಳು ಸುದೀರ್ಘವಾಗಿ ಪ್ರಶ್ನಿಸಿದ್ದಾರೆ.

ಮಂದಿರದ ಆಡಳಿತದಲ್ಲಿ ಪಾರದರ್ಶಕತೆ ತರಲು ಮತ್ತು ಇಂತಹ ಆರ್ಥಿಕ ಅಕ್ರಮಗಳು ಮರುಕಳಿಸದಂತೆ ತಡೆಯಲು, ಇನ್ಮುಂದೆ ಒಬ್ಬರು ನಿವೃತ್ತ ಐಎಎಸ್ (IAS) ಅಧಿಕಾರಿಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ (CEO) ನೇಮಿಸಲು ಟ್ರಸ್ಟ್ ಗಂಭೀರ ಚಿಂತನೆ ನಡೆಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:07 am, Fri, 3 July 26

Follow Us
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ