AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ರಾಮ ಮಂದಿರದಲ್ಲಿ ದರ್ಶನದ ಸಮಯ ವಿಸ್ತರಣೆ, ಎಷ್ಟು ಗಂಟೆ ಬಾಗಿಲು ತೆಗೆದಿರುತ್ತೆ?

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀರಾಮ ಮಂದಿರದ ದರ್ಶನ ಸಮಯವನ್ನು ವಿಸ್ತರಿಸಲಾಗಿದೆ. ಈಗ ದೇವಾಲಯವು ಒಂದು ಗಂಟೆ ಮುಂಚಿತವಾಗಿ ತೆರೆಯುತ್ತದೆ. ಇಲ್ಲಿಯವರೆಗೆ ದೇವಾಲಯ ತೆರೆಯುವ ಸಮಯ ಬೆಳಗ್ಗೆ 7 ಗಂಟೆಯಾಗಿತ್ತು. ಇನ್ನು ಮುಂದೆ ದೇವಸ್ಥಾನ ಬೆಳಗ್ಗೆ 6 ಗಂಟೆಗೆ ತೆರೆಯುತ್ತದೆ. ಈ ಮಾಹಿತಿಯನ್ನು ರಾಮ ಮಂದಿರ ಟ್ರಸ್ಟ್‌ನ ಮಾಧ್ಯಮ ವಿಭಾಗ ಸೋಮವಾರ ನೀಡಿದೆ. ಮಾಧ್ಯಮ ವಿಭಾಗದ ಪ್ರಕಾರ, ರಾಮ ಮಂದಿರದಲ್ಲಿ ದರ್ಶನಕ್ಕಾಗಿ ಹೊಸ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ಅಯೋಧ್ಯೆಯ ರಾಮ ಮಂದಿರದಲ್ಲಿ ದರ್ಶನದ ಸಮಯ ವಿಸ್ತರಣೆ, ಎಷ್ಟು ಗಂಟೆ ಬಾಗಿಲು ತೆಗೆದಿರುತ್ತೆ?
ಅಯೋಧ್ಯೆ
ನಯನಾ ರಾಜೀವ್
|

Updated on: Mar 04, 2025 | 12:41 PM

Share

ಅಯೋಧ್ಯೆ, ಮಾರ್ಚ್​ 04: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀರಾಮ ಮಂದಿರದ ದರ್ಶನ ಸಮಯವನ್ನು ವಿಸ್ತರಿಸಲಾಗಿದೆ. ಈಗ ದೇವಾಲಯವು ಒಂದು ಗಂಟೆ ಮುಂಚಿತವಾಗಿ ತೆರೆಯುತ್ತದೆ. ಇಲ್ಲಿಯವರೆಗೆ ದೇವಾಲಯ ತೆರೆಯುವ ಸಮಯ ಬೆಳಗ್ಗೆ 7 ಗಂಟೆಯಾಗಿತ್ತು. ಇನ್ನು ಮುಂದೆ ದೇವಸ್ಥಾನ ಬೆಳಗ್ಗೆ 6 ಗಂಟೆಗೆ ತೆರೆಯುತ್ತದೆ. ಈ ಮಾಹಿತಿಯನ್ನು ರಾಮ ಮಂದಿರ ಟ್ರಸ್ಟ್‌ನ ಮಾಧ್ಯಮ ವಿಭಾಗ ಸೋಮವಾರ ನೀಡಿದೆ. ಮಾಧ್ಯಮ ವಿಭಾಗದ ಪ್ರಕಾರ, ರಾಮ ಮಂದಿರದಲ್ಲಿ ದರ್ಶನಕ್ಕಾಗಿ ಹೊಸ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ಅಯೋಧ್ಯೆ ದೇವಾಲಯದ ಹೊಸ ವೇಳಾಪಟ್ಟಿಯಲ್ಲಿ, ದರ್ಶನ ಮತ್ತು ಆರತಿಯ ಸಮಯವನ್ನು ಸಹ ಬದಲಾಯಿಸಲಾಗಿದೆ. ಈ ಬದಲಾವಣೆಗಳು ಸೋಮವಾರದಿಂದ ಜಾರಿಗೆ ಬಂದಿವೆ. ಹೊಸ ವೇಳಾಪಟ್ಟಿಯ ಪ್ರಕಾರ, ಶೃಂಗಾರ ಆರತಿಯ ನಂತರ ಭಕ್ತರು ಬೆಳಗ್ಗೆ 6:30 ರಿಂದ 11.50 ರವರೆಗೆ ದೇವಾಲಯವನ್ನು ಪ್ರವೇಶಿಸಬಹುದು.

ಮತ್ತಚ್ಟು ಓದಿ: ರಾಮಮಂದಿರದ ಮೇಲೆ ದಾಳಿಗೆ ಸಂಚು; ಉಗ್ರ ಅಬ್ದುಲ್ ಬಂಧನ

ಇದಾದ ನಂತರ ರಾಜಭೋಗ ಆರತಿಗಾಗಿ ಮಧ್ಯಾಹ್ನ 12 ಗಂಟೆಗೆ ದೇವಾಲಯವನ್ನು ಮುಚ್ಚಲಾಗುತ್ತದೆ. ದರ್ಶನ ಸಮಯವು ಮಧ್ಯಾಹ್ನ 1 ಗಂಟೆಯಿಂದ ಸಂಜೆ 6:50 ರವರೆಗೆ ಪುನರಾರಂಭಗೊಳ್ಳಲಿದ್ದು, ನಂತರ ಸಂಜೆ 7 ಗಂಟೆಗೆ ಆರತಿ ಇರುತ್ತದೆ. ಈ ಸಮಯದವರೆಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು

ರಾತ್ರಿ 9:45 ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಮತ್ತು ರಾತ್ರಿ 10 ಗಂಟೆಗೆ ಶಯನ ಆರತಿ (ದಿನದ ಕೊನೆಯ ಆರತಿ) ನಂತರ, ಮರುದಿನ ಬೆಳಿಗ್ಗೆ ತನಕ ದೇವಾಲಯ ಮುಚ್ಚಲಾಗುವುದು ಎಂದು ಟ್ರಸ್ಟ್ ತಿಳಿಸಿದೆ. ಈ ರೀತಿಯಾಗಿ, ದೇವಾಲಯದಲ್ಲಿ ದರ್ಶನದಿಂದ ಆರತಿಯವರೆಗಿನ ಸಮಯವನ್ನು ಬದಲಾಯಿಸಲಾಗಿದೆ. ಈಗ ಭಕ್ತರಿಗೆ ದೇವಾಲಯಕ್ಕೆ ಭೇಟಿ ನೀಡಲು ಮತ್ತು ಆರತಿ ಮಾಡಲು ಒಂದು ಗಂಟೆ ಹೆಚ್ಚುವರಿ ಸಮಯ ಸಿಗಲಿದೆ.

ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯ ನಂತರ, ಸಾವಿರಾರು ಭಕ್ತರು ದರ್ಶನಕ್ಕಾಗಿ ದೇವಸ್ಥಾನಕ್ಕೆ ಬರುತ್ತಾರೆ. ದೇವಾಲಯದಲ್ಲಿ ಭಕ್ತರ ಗುಂಪನ್ನು ಕಾಣಬಹುದು. ದೇವಾಲಯದ ಕೆಲಸ ಪೂರ್ಣಗೊಳ್ಳದಿದ್ದರೂ, ರಾಮಲಲ್ಲಾ ದರ್ಶನ ಪಡೆಯಲು ಭಕ್ತರು ಪ್ರತಿದಿನ ಸೇರುತ್ತಲೇ ಇರುತ್ತಾರೆ. ಈ ವರ್ಷದ ಅಕ್ಟೋಬರ್ ವೇಳೆಗೆ ಅಯೋಧ್ಯೆ ರಾಮ ಮಂದಿರದ ಕೆಲಸ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ