AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಸಲ್ಲಿ ಕಂಡ ರಾಮನ ದರ್ಶನಕ್ಕೆ ಅಯೋಧ್ಯೆಗೆ 700 ಕಿಮೀ ಪಾದಯಾತ್ರೆ ಹೊರಟ ಮುಸ್ಲಿಂ ಮಹಿಳೆ!

ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಹೋಗುತ್ತಿದ್ದೇನೆ ಎಂದು ಶಬ್ನಮ್ ಹೇಳಿದ್ದಾರೆ. ಸುದೀರ್ಘ ಯಾತ್ರೆಯ ಆಯಾಸವನ್ನು ಭಗವಾನ್ ರಾಮನ ಮೇಲಿನ ಭಕ್ತಿಯು ಮರೆಯಿಸಿದೆ ಎಂದು ಅವರು ಹೇಳಿದ್ದಾರೆ.

ಕನಸಲ್ಲಿ ಕಂಡ ರಾಮನ ದರ್ಶನಕ್ಕೆ ಅಯೋಧ್ಯೆಗೆ 700 ಕಿಮೀ ಪಾದಯಾತ್ರೆ ಹೊರಟ ಮುಸ್ಲಿಂ ಮಹಿಳೆ!
ಶಬ್ನಮ್ ಸೋಮವಾರ ಉತ್ತರ ಪ್ರದೇಶದ ಹರ್ದೋಯಿ ತಲುಪಿದ್ದು, ಅಲ್ಲಿ ಅವರಿಗೆ ಭವ್ಯ ಸ್ವಾಗತ ದೊರೆತಿದೆ.
Ganapathi Sharma
|

Updated on: Jan 16, 2024 | 12:34 PM

Share

ನವದೆಹಲಿ, ಜನವರಿ 16: ಭಗವಾನ್ ಶ್ರೀರಾಮ (Lord Ram) ಕನಸಿನಲ್ಲಿ ಕಾಣಿಸಿಕೊಂಡಿದ್ದು ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದ (Ayodhya Ram Mandir) ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಸೂಚಿಸಿದ್ದಾನೆ ಎಂದಿರುವ ಮುಸ್ಲಿಂ ಮಹಿಳೆಯೊಬ್ಬರು (Muslim Women) ಪದಾಯಾತ್ರೆ ಹೊರಟಿದ್ದಾರೆ. ಶಬ್ನಮ್ ಖಾನ್ (Shabnam Khan) ಸುಮಾರು 700 ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸುತ್ತಿದ್ದು, ಈಗಾಗಲೇ 400 ಕಿಲೋಮೀಟರ್ ಪ್ರಯಾಣ ಮಾಡಿದ್ದಾರೆ.

ಮುಸ್ಲಿಂ ಆಗಿದ್ದರೂ ಭಗವಾನ್ ರಾಮನ ಮೇಲಿನ ಅಚಲ ಭಕ್ತಿಯಿಂದಾಗಿ ಈ ಪ್ರಯಾಣ ಸಾಧ್ಯವಾಗುತ್ತಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಸದ್ಯ ಉತ್ತರ ಪ್ರದೇಶದ ಹರ್ದೋಯಿ ತಲುಪಿರುವ ಶಬ್ನಮ್, ನನ್ನ ಕನಸಿನಲ್ಲಿ ಭಗವಾನ್ ರಾಮ ಕಾಣಿಸಿಕೊಂಡ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗದಿದ್ದಾಗ ಅದಕ್ಕಾಗಿ ಹೋರಾಟ ಮಾಡುತ್ತಿದ್ದೆ. ಈಗ ಮಂದಿರ ಸಿದ್ಧವಾಗಿರುವಾಗ ನೀನೇಕೆ ಬರುತ್ತಿಲ್ಲ ಎಂದು ರಾಮ ಪ್ರಶ್ನಿಸಿದ್ದ. ಇದರ ನಂತರ ನಾನು ಅಯೋಧ್ಯೆಗೆ ಪ್ರಯಾಣ ಬೆಳೆಸಿದೆ ಎಂದು ತಿಳಿಸಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿಯಾಗಿರುವ ಶಬ್ನಮ್ ಜನವರಿ 3 ರಂದು ಪೂರ್ವ ದೆಹಲಿಯ ಮಯೂರ್ ವಿಹಾರ್‌ನಿಂದ ಪ್ರಯಾಣವನ್ನು ಪ್ರಾರಂಭಿಸಿದರು. ಶಬ್ನಮ್ ಸೋಮವಾರ ಉತ್ತರ ಪ್ರದೇಶದ ಹರ್ದೋಯಿ ತಲುಪಿದ್ದು, ಅಲ್ಲಿ ಆಕೆಗೆ ಭವ್ಯ ಸ್ವಾಗತ ದೊರೆತಿದೆ.

ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಹೋಗುತ್ತಿದ್ದೇನೆ ಎಂದು ಶಬ್ನಮ್ ಹೇಳಿದ್ದಾರೆ. ಸುದೀರ್ಘ ಯಾತ್ರೆಯ ಆಯಾಸವನ್ನು ಭಗವಾನ್ ರಾಮನ ಮೇಲಿನ ಭಕ್ತಿಯು ಮರೆಯಿಸಿದೆ ಎಂದು ಅವರು ಹೇಳಿದ್ದಾರೆ.

ಶಬ್ನಮ್ ಅವರಂತೆ, ಹಲವಾರು ರಾಮ ಭಕ್ತರು ದೇಶದ ವಿವಿಧ ಭಾಗಗಳಿಂದ ಅಯೋಧ್ಯೆಗೆ ಕಾಲ್ನಡಿಗೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ತೆರಳುತ್ತಿದ್ದಾರೆ.

ಅಯೋಧ್ಯೆಯಲ್ಲಿ ಭರದಿಂದ ಸಾಗುತ್ತಿರುವ ಸಿದ್ಧತೆ

ಈ ಮಧ್ಯೆ, ಜನವರಿ 22ರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಅಯೋಧ್ಯೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಒಂದೆಡೆ, ರಾಮಲಲ್ಲಾನ ಮೂರ್ತಿಯನ್ನು ಟ್ರಸ್ಟ್ ಅಂತಿಮಗೊಳಿಸಿದ್ದು, ಸೋಮವಾರವಷ್ಟೇ ಅಧಿಕೃತ ಘೋಷಣೆ ಮಾಡಿದೆ. ಈ ಮಧ್ಯೆ, ರಾಮಲಲ್ಲಾನ ಗರ್ಭ ಗೃಹದ ಚಿನ್ನದ ಬಾಗಿಲುಗಳ ಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ. ಭಗವಾನ್ ಶ್ರೀ ರಾಮಲಲ್ಲಾ ಅವರ ಗರ್ಭಗೃಹದ ಚಿನ್ನದ ಬಾಗಿಲುಗಳ ಸ್ಥಾಪನೆಯೊಂದಿಗೆ, ನೆಲ ಮಹಡಿಯ ಎಲ್ಲಾ ಚಿನ್ನದ ಬಾಗಿಲುಗಳ ಸ್ಥಾಪನೆಯ ಕಾರ್ಯವು ಪೂರ್ಣಗೊಂಡಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ರಾಮಲಲ್ಲಾ ಗರ್ಭ ಗೃಹದ ಚಿನ್ನದ ಬಾಗಿಲು ಪೂರ್ಣ, ಹೀಗಿದೆ ನೋಡಿ

ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಸಮಾರಂಭದಲ್ಲಿ ಸುಮಾರು 7,000 ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ