AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Mandir VIP Entry: ರಾಮಮಂದಿರಕ್ಕೆ ಉಚಿತವಾಗಿ ವಿಐಪಿ ಪ್ರವೇಶ ನೀಡುವ ವಾಟ್ಸ್​ಆ್ಯಪ್ ಸಂದೇಶ ಎಷ್ಟು ಸತ್ಯ?

ಅಯೋಧ್ಯೆAyodhya)ಯ ರಾಮ ಮಂದಿರ(Ram Mandir)ದ ಹೆಸರಿನಲ್ಲಿ ಸೈಬರ್ ವಂಚಕರು(Cyber Criminals) ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ. ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಈ ಸಮಯದಲ್ಲಿ ಪ್ರತಿಯೊಬ್ಬರಿಗೂ ಪಾಲ್ಗೊಳ್ಳುವ ಆಸೆ ಇದ್ದೇ ಇರುತ್ತದೆ ಅದನ್ನು ಟಾರ್ಗೆಟ್​ ಮಾಡಿರುವ ಸೈಬರ್ ವಂಚಕರು ಸುಳ್ಳು ಸಂದೇಶಗಳನ್ನು ಕಳುಹಿಸಿ ದುಡ್ಡು ದೋಚುವ ಸಾಹಸಕ್ಕೆ ಕೈಹಾಕಿದ್ದಾರೆ.

Ram Mandir VIP Entry: ರಾಮಮಂದಿರಕ್ಕೆ ಉಚಿತವಾಗಿ ವಿಐಪಿ ಪ್ರವೇಶ ನೀಡುವ ವಾಟ್ಸ್​ಆ್ಯಪ್ ಸಂದೇಶ ಎಷ್ಟು ಸತ್ಯ?
ಅಯೋಧ್ಯೆImage Credit source: Timesnow
Follow us
ನಯನಾ ರಾಜೀವ್
|

Updated on:Jan 12, 2024 | 10:34 AM

ಅಯೋಧ್ಯೆ(Ayodhya)ಯ ರಾಮ ಮಂದಿರ(Ram Mandir)ದ ಹೆಸರಿನಲ್ಲಿ ಸೈಬರ್ ವಂಚಕರು(Cyber Criminals) ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ. ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಈ ಸಮಯದಲ್ಲಿ ಪ್ರತಿಯೊಬ್ಬರಿಗೂ ಪಾಲ್ಗೊಳ್ಳುವ ಆಸೆ ಇದ್ದೇ ಇರುತ್ತದೆ ಅದನ್ನು ಟಾರ್ಗೆಟ್​ ಮಾಡಿರುವ ಸೈಬರ್ ವಂಚಕರು ಸುಳ್ಳು ಸಂದೇಶಗಳನ್ನು ಕಳುಹಿಸಿ ದುಡ್ಡು ದೋಚುವ ಸಾಹಸಕ್ಕೆ ಕೈಹಾಕಿದ್ದಾರೆ.

ವಾಟ್ಸ್​ಆ್ಯಪ್​ನಲ್ಲಿ ಸಂದೇಶವೊಂದು ಹರಿದಾಡುತ್ತಿದ್ದು, ಅದರಲ್ಲಿ ಅಯೋಧ್ಯೆಗೆ ಉಚಿತ ವಿಐಪಿ ಪ್ರವೇಶ ನೀಡುತ್ತೇವೆ ಎಂದು ಹುಸಿ ಭರವಸೆಯನ್ನು ನೀಡಲಾಗುತ್ತಿದೆ. Ram Janmabhoomi Grihspark Abhiyan.APK ಹೆಸರಿನ APK (Android ಅಪ್ಲಿಕೇಶನ್ ಪ್ಯಾಕೇಜ್) ಫೈಲ್ ಅನ್ನು ಒಳಗೊಂಡಿವೆ.

ದೇವಸ್ಥಾನಕ್ಕೆ ತೆರಳಲು ಉತ್ಸುಕರಾಗಿರುವ ಭಕ್ತರ ಭಾವನೆಗಳಿಗೆ ಧಕ್ಕೆ ತರವು ನಿಟ್ಟಿನಲ್ಲಿ ಇಂತಹ ಸಂದೇಶಗಳನ್ನು ಕಳುಹಿಸಲಾಗುತ್ತಿದೆ. ಈ ಹಿಂದೆಯೂ ದೇವಸ್ಥಾನಕ್ಕೆ ದೇಣಿಗೆಯ ಹೆಸರಿನಲ್ಲಿ ಭಕ್ತರನ್ನು ಲೂಟಿ ಮಾಡುವ ದಂಧೆ ನಡೆದಿತ್ತು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಹೆಸರಿನಲ್ಲಿ ನಕಲಿ ಐಡಿ ಮಾಡಿ ವಂಚಿಸಲು ಯತ್ನಿಸುತ್ತಿರುವ ಸೈಬರ್ ಕ್ರಿಮಿನಲ್‌ಗಳಿಗೆ ಬಲಿಯಾಗಬೇಡಿ ಎಂದು ವಿಶ್ವ ಹಿಂದೂ ಪರಿಷತ್ತಿನ ವಿನೋದ್ ಬನ್ಸಾಲ್ ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆಗೂ ಮುನ್ನ 11 ದಿನಗಳ ವಿಶೇಷ ಆಚರಣೆ, ಮೋದಿ ವಿಡಿಯೋ ಸಂದೇಶ

Shri Ram Janmabhoomi Teerth Chhetra Ayodhya, Uttar Pradesh(ಶ್ರೀ ರಾಮ ಜನ್ಮಭೂಮಿ ತೀರ್ಥ, ಛೇತ್ರ ಅಯೋಧ್ಯೆ, ಉತ್ತರಪ್ರದೇಶ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪುಟವೊಂದನ್ನು ತೆರೆಯಲಾಗಿದೆ. ಕ್ಯೂ ಆರ್​ ಕೋಡ್ ಹೊಂದಿರುವ ಪುಟವು ರಾಮ ಮಂದಿರ ನಿರ್ಮಾಣ ಹೆಸರಿನಲ್ಲಿ ಹಣವನ್ನು ನೀಡುವಂತೆ ಬಳಕೆದಾರರನ್ನು ಕೇಳುತ್ತದೆ.

ಅನುಮಾನಾಸ್ಪದವಾಗಿ ತೋರುವ ಅಪರಿಚಿತ ಫೈಲ್​ಗಳು ಅಥವಾ ಅಪ್ಲಿಕೇಷನ್​ಗಳನ್ನು ಡೌನ್​ಲೋಡ್ ಮಾಡದಂತೆ ಸೂಚಿಸಲಾಗಿದೆ. ರಾಮ ಮಂದಿರ ಉದ್ಘಾಟನೆಗೆ ಸಂಬಂಧಿಸಿದ ಯಾವುದೇ ಸುದ್ದಿ ಬಂದಾಗ,ವಿಶ್ವಾಸಾರ್ಹ ಮೂಲದ ಮೂಲಕ ಪರಿಶೀಲಿಸುವುದು ಉತ್ತಮ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:33 am, Fri, 12 January 24

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ