Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಅಯೋಧ್ಯೆಯಲ್ಲಿ 50 ತಂಡಗಳಿಂದ ಮೊಳಗಲಿದೆ ಮಂಗಳ ವಾದ್ಯ; ಸಂಜೆ 10 ಲಕ್ಷ ದೀಪಗಳಿಂದ ಕಂಗೊಳಿಸಲಿದೆ ರಾಮ ಮಂದಿರ

ಅಯೋಧ್ಯೆ ರಾಮ ಮಂದಿರದಲ್ಲಿ ನಾಳೆ ಬಾಲರಾಮನ (ರಾಮಲಲ್ಲಾ) ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಪ್ರಾಣ ಪ್ರತಿಷ್ಠಾಪನೆಯ ಶುಭ ಸಮಯ ಕೇವಲ 84 ಸೆಕೆಂಡುಗಳು ಮಾತ್ರ ಇರಲಿದೆ. ಅಷ್ಟೇ ಅಲ್ಲದೆ, ಸುಮಾರು 50 ತಂಡಗಳಿಂದ ಮಂಗಳ ವಾದ್ಯ ಮೊಳಗಳಿದ್ದು, ಸಂಜೆ ವೇಳೆಗೆ ಲಕ್ಷ ದೀಪಗಳಿಂದ ಅಯೋಧ್ಯೆ ಕಂಗೊಳಲಿಸಲಿದೆ.

ನಾಳೆ ಅಯೋಧ್ಯೆಯಲ್ಲಿ 50 ತಂಡಗಳಿಂದ ಮೊಳಗಲಿದೆ ಮಂಗಳ ವಾದ್ಯ; ಸಂಜೆ 10 ಲಕ್ಷ ದೀಪಗಳಿಂದ ಕಂಗೊಳಿಸಲಿದೆ ರಾಮ ಮಂದಿರ
ನಾಳೆ ಅಯೋಧ್ಯೆಯಲ್ಲಿ 50 ತಂಡಗಳಿಂದ ಮೊಳಗಳಿದೆ ಮಂಗಳ ವಾದ್ಯ; ಸಂಜೆ 10 ಲಕ್ಷ ದೀಪಗಳಿಂದ ಕಂಗೊಳಿಸಲಿದೆ ರಾಮ ಮಂದಿರ Image Credit source: PTI
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Rakesh Nayak Manchi

Updated on:Jan 21, 2024 | 6:44 PM

ನವದೆಹಲಿ, ಜ.21: ಕೋಟ್ಯಂತರ ಹಿಂದೂಗಳ ಐದು ಶತಮಾನಗಳ ಕನಸು ಅಯೋಧ್ಯೆ ಶ್ರೀರಾಮ ಮಂದಿರ (Ayodhya Ram Mandir) ನಾಳೆ ಲೋಕಾರ್ಪಣೆಗೊಳ್ಳಲಿದೆ. ಗರ್ಭಗುಡಿಯಲ್ಲಿ ಬಾಲರಾಮನ (ರಾಮಲಲ್ಲಾ) ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಈ ಶುಭ ಸಮಯ ಕೇವಲ 84 ಸೆಕೆಂಡುಗಳು ಮಾತ್ರ ಇರಲಿದೆ. ಅಷ್ಟೇ ಅಲ್ಲದೆ, 50 ತಂಡಗಳಿಂದ ಮಂಗಳ ವಾದ್ಯ ಮೊಳಗಲಿದೆ.

ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆ ಅಯೋಧ್ಯೆಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಬೆಳಿಗ್ಗೆ 10 ರಿಂದ ಮಂಗಳ ವಾದ್ಯ ಮೊಳಗಲಿದೆ. ಉತ್ತರ ಪ್ರದೇಶದ ಆದಿವಾಸಿ ಜನಾಂಗದವರ ಜಾನಪದ ವಾದ್ಯಮೇಳ, ಬುಡಕಟ್ಟು ಜನಾಂಗದವರು ಭಾರಿಸುವ ವಾದ್ಯ ಸೇರಿದಂತೆ ವಿವಿಧ ರಾಜ್ಯಗಳ 50ಕ್ಕೂ ಹೆಚ್ಚು ಮನಮೋಹಕ ಸಂಗೀತ ವಾದ್ಯ ತಂಡಗಳು ಭಾಗಿಯಾಗಲಿದ್ದು, ಸುಮಾರು ಎರಡು ಗಂಟೆಗಳ ಕಾಲ ಮಂಗಳ ವಾದ್ಯ ಮೊಳಗಲಿದೆ.

ಅಯೋಧ್ಯೆಯಲ್ಲಿ ಲಕ್ಷದೀಪ ವೈಭವ

ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯ ಬಳಿಕ ರಾಮ ​​ಜ್ಯೋತಿ ಬೆಳಗುವ ಮೂಲಕ ದೀಪಾವಳಿ ಆಚರಣೆ ಮಾಡಲಾಗುತ್ತದೆ. ಸಂಜೆ 10 ಲಕ್ಷ ದೀಪಗಳಿಂದ ಅಯೋಧ್ಯೆ ಕಂಗೊಳಿಸಲಿದೆ. ಅಯೋಧ್ಯೆಯ ಮನೆಗಳು, ಅಂಗಡಿಗಳು ಮತ್ತು ಪೌರಾಣಿಕ ಸ್ಥಳಗಳಲ್ಲಿ ‘ರಾಮ ಜ್ಯೋತಿ’ ಬೆಳಗಿಸಲಾಗುತ್ತದೆ.

ಇದನ್ನೂ ಓದಿ: Ayodhya Ram Mandir: ಹೂಗಳಿಂದ ಶೃಂಗಾರಗೊಂಡ ಅಯೋಧ್ಯೆ ರಾಮಮಂದಿರ, ಫೋಟೋಗಳು ಇಲ್ಲಿವೆ

ಮಣ್ಣಿನಿಂದ ಮಾಡಿದ ದೀಪಗಳಿಂದ ಅಯೋಧ್ಯೆಯು ಬೆಳಗಲಿದ್ದು, ಸರಯೂ ನದಿಯ ದಡದ ರಾಮ್ ಕಿ ಪಾಡಿಯಲ್ಲಿ ದೀಪ ಬೆಳಗಲಾಗುತ್ತದೆ. ಕನಕ್ ಭವನ, ಹನುಮಾನ್ ಗಡಿ, ಗುಪ್ತರಘಾಟ್, ಸರಯು ಘಾಟ್, ಲತಾ ಮಂಗೇಶ್ಕರ್ ಚೌಕ್, ಮಣಿರಾಮ್ ದಾಸ್ ಕಂಟೋನ್ಮೆಂಟ್ ಸೇರಿದಂತೆ 100 ದೇವಸ್ಥಾನಗಳಲ್ಲಿ ದೀಪ ಬೆಳಗಲಾಗುತ್ತಿದೆ.

ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ಮುಹೂರ್ತ, ಶುಭ ಸಮಯ

ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಶುಭ ಮುಹೂರ್ತ 12.29 ರಿಂದ 12.30 ರ ವರೆಗೆ (32 ಸೆಕೆಂಡುಗಳು) ಇರಲಿದ್ದು, ಪ್ರಾಣ ಪ್ರತಿಷ್ಠಾಪನೆಯ ಶುಭ ಸಮಯ ಕೇವಲ 84 ಸೆಕೆಂಡುಗಳು ಮಾತ್ರ ಇರಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಿದ್ದು, ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯನ್ನೂ ನೆರವೇರಿಸಲಿದ್ದಾರೆ. ಕಾಶಿಯ ಹೆಸರಾಂತ ವೈದಿಕ ಆಚಾರ್ಯ ಗಣೇಶ್ವರ್ ದ್ರಾವಿಡ್ ಹಾಗೂ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿವೆ.

ಇವರಿಬ್ಬರ ನಿರ್ದೇಶನದಲ್ಲಿ 121 ವೈದಿಕ ಆಚಾರ್ಯರಿಂದ ಧಾರ್ಮಿಕ ಕ್ರಿಯೆ ನೆರವೇರಲಿದ್ದು, ಈ ವೇಳೆ 150 ಕ್ಕೂ ಹೆಚ್ಚು ಸಂಪ್ರದಾಯಗಳು, 50ಕ್ಕೂ ಹೆಚ್ಚು ಬುಡಕಟ್ಟು, ಕರಾವಳಿ, ದ್ವೀಪ, ಬುಡಕಟ್ಟು ಸಂಪ್ರದಾಯಗಳ ಸಂತರು ಮತ್ತು ಧಾರ್ಮಿಕ ಮುಖಂಡರು ಉಪಸ್ಥಿತರಿರಲಿದ್ದಾರೆ.

ರಾಮ ಮಂದಿರದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Sun, 21 January 24

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್