AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Mandir Inauguration: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ರಾಮ

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರ(Ram Mandir)ದ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ. ಅಯೋದ್ಯಾನಗರಿಯಲ್ಲಿ ಮರ್ಯಾದಾ ಪುರುಷೋತ್ತಮ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದಾರೆ. ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ, ಈ ಮಹತ್ವದ ಸಮಾರಂಭವನ್ನು ಜಾಗತೀಕರಣಗೊಳಿಸುವ ನಿಟ್ಟಿನಲ್ಲಿ ವಿವಿಧ 50 ದೇಶಗಳನ್ನು ಪ್ರತಿನಿಧಿಸುವ 92 ವಿಶೇಷ ಆಹ್ವಾನಿತರು ಈ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿದ್ದಾರೆ.

Ram Mandir Inauguration: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ರಾಮ
ರಾಮ
ನಯನಾ ರಾಜೀವ್
|

Updated on:Jan 22, 2024 | 1:58 PM

Share

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರ(Ram Mandir)ದ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ. ಅಯೋದ್ಯಾನಗರಿಯಲ್ಲಿ ಮರ್ಯಾದಾ ಪುರುಷೋತ್ತಮ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದಾರೆ. ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ, ಈ ಮಹತ್ವದ ಸಮಾರಂಭವನ್ನು ಜಾಗತೀಕರಣಗೊಳಿಸುವ ನಿಟ್ಟಿನಲ್ಲಿ ವಿವಿಧ 50 ದೇಶಗಳನ್ನು ಪ್ರತಿನಿಧಿಸುವ 92 ವಿಶೇಷ ಆಹ್ವಾನಿತರು ಈ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿದ್ದಾರೆ.

ಮಧ್ಯಾಹ್ನ 12.20 ಕ್ಕೆ ಸರಿಯಾಗಿ ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭವಾಗಿದ್ದು 12, 45ರವರೆಗೆ ನಡೆದಿದೆ. ಸುಮಾರು 2 ಗಂಟೆಗಳ ಕಾಲ 25 ರಾಜ್ಯದಗಳ ವಿವಿಧ ಸಂಗೀತ ವಾದ್ಯಗಳ ಮಂಗಲ ಧ್ವನಿ ಕಾರ್ಯಕ್ರಮವೂ ನೆರವೇರಿದೆ. ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ಹಿನ್ನೆಲೆ ಅಯೋಧ್ಯೆಯ ಇಡೀ ನಗರವನ್ನು 2500 ಕ್ವಿಂಟಾಲ್‌ಗೂ ಹೆಚ್ಚು ಹೂವಿನಿಂದ ಅಲಂಕರಿಸಲಾಗಿದ್ದು, ಪ್ರಾಣ ಪ್ರತಿಷ್ಠೆಯ ನಂತರ ಭಕ್ತರಿಗೆ ದೇವಾಲಯದ ಬಾಗಿಲು ತೆರೆಯಲಾಗುತ್ತದೆ.

ಆದರೆ ಜನಸಂದಣಿ ಕಡಿಮೆಯಾದ ನಂತರ ಜನವರಿ 27ರ ನಂತರವೇ ದೇವಾಲಯಕ್ಕೆ ಭೇಟಿ ನೀಡುವಂತೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಭಕ್ತರಲ್ಲಿ ವಿನಂತಿ ಮಾಡಿದೆ.

ಮತ್ತಷ್ಟು ಓದಿ: Ram Mandir Inauguration: ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಬಳಿಕ ರಾಮಭಕ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

ಸಮಾರಂಭದಲ್ಲಿ ಎನ್‌ಎಸ್‌ಜಿ ಸ್ನೈಪರ್‌ಗಳ ಎರಡು ತಂಡಗಳು, ಆ್ಯಂಟಿ ಡ್ರೋನ್ ತಂತ್ರಜ್ಞಾನ ಹೊಂದಿದ ಎಟಿಎಸ್ ಕಮಾಂಡೋಗಳ ಆರು ತಂಡಗಳು ಮತ್ತು ಯುಪಿ ಮತ್ತು ಅರೆಸೇನಾ ಪಡೆಗಳ 15,000 ಪೊಲೀಸ್ ಸಿಬ್ಬಂದಿಯನ್ನು ಅಯೋಧ್ಯೆಯ ಭದ್ರತೆಗಾಗಿ ನಿಯೋಜಿಸಲಾಗಿದೆ. ಆರ್​ಎಸ್​ಎಸ್​ನ ಸರಸಂಘ ಚಾಲಕ ಮೋಹನ್ ಭಾಗವತ್​, ರಾಜ್ಯಪಾಲೆ ಆನಂದಿ ಬೆನ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಪಾಲ್ಗೊಂಡಿದ್ದರು.

ಇಡೀ ಅಯೋಧ್ಯೆಯೇ ರಾಮನ ಭಕ್ತಿಯಲ್ಲಿ ಮುಳುಗಿದೆ, ದೇಶದ ಬೇರೆ ಬೇರೆಕಡೆಗಳಿಂದ ಬಂದ ಸಾಧುಗಳು ಭಜನೆ, ತುಳಿಸೀದಾಸರ ರಾಮಚರಿತ ಮಾನಸದ ಸಾಲುಗಳನ್ನು ಹಾಡುತ್ತಿದ್ದಾರೆ. ಅಯೋಧ್ಯೆಯ ಸುಮಾರು ಕಡೆ ಸ್ವಾಗತ ಕಮಾನುಗಳನ್ನು ನೀವು ಕಾಣಬಹುದು, ಅಲ್ಲಲ್ಲಿ ಬೇರೆ ಬೇರೆ ಬಗೆಯ ರಂಗೋಲಿಗಳು ಕಾಣಸಿಗುವುದು.

ಮಾಧುರಿ ದೀಕ್ಷಿತ್, ಆಲಿಯಾ ಭಟ್, ಕತ್ರೀನಾ ಕೈಫ್ ತಮ್ಮ ಪತಿಯಂದಿರ ಜೊತೆಗೆ ಬಂಧಿದ್ದಾರೆ,  ಅಯೋಧ್ಯೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಬಾಲಿವುಡ್ ನಟ ಅನುಪಮ್ ಖೇರ್ ಭೇಟಿಯಾಗಿದ್ದಾರೆ. ಚಿರಂಜೀವಿ-ರಾಮ್ ಚರಣ್ ಅವರೂ ಜೊತೆಯಾಗಿ ಅಯೋಧ್ಯೆಗೆ ಬಂದಿದ್ದಾರೆ. ಕಂಗನಾ ರಣಾವತ್ ಅವರು ಒಂದು ದಿನ ಮೊದಲೇ ಅಯೋಧ್ಯೆಗೆ ಬಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:31 pm, Mon, 22 January 24