AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಶ್ರೀರಾಮ ಮಂದಿರ ಪ್ರವೇಶಕ್ಕೆ ಯಾವಾಗಿನಿಂದ ಅವಕಾಶ? -ಭಕ್ತರಿಗೊಂದು ಸಿಹಿ ಸುದ್ದಿ

Ayodhya Ram Temple: ಸದ್ಯ ಶ್ರೀರಾಮಮಂದಿರಕ್ಕೆ ಅಡಿಪಾಯ ಹಾಕುವ ಕಾರ್ಯ ಭರದಿಂದ ಸಾಗುತ್ತಿದ್ದು, ಮೊದಲ ಹಂತದ ಕೆಲಸ ಸೆಪ್ಟೆಂಬರ್​ನಲ್ಲಿ ಪೂರ್ಣಗೊಳ್ಳಲಿದೆ.

ಅಯೋಧ್ಯೆ ಶ್ರೀರಾಮ ಮಂದಿರ ಪ್ರವೇಶಕ್ಕೆ ಯಾವಾಗಿನಿಂದ ಅವಕಾಶ? -ಭಕ್ತರಿಗೊಂದು ಸಿಹಿ ಸುದ್ದಿ
ಅಯೋಧ್ಯಾ ಶ್ರೀರಾಮಮಂದಿರ
TV9 Web
| Edited By: |

Updated on: Aug 04, 2021 | 6:40 PM

Share

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ (Ram Temple) ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂಬುದು ಗೊತ್ತು. ಆದರೆ ಅದು ಯಾವಾಗ ಮುಗಿಯಬಹುದು? ಭಕ್ತರಿಗೆ ಪ್ರವೇಶಕ್ಕೆ ಯಾವಾಗಿನಿಂದ ಅವಕಾಶ ದೊರೆಯಬಹುದು-ಎಂಬಿತ್ಯಾದಿ ಕುತೂಹಲ ಇದ್ದೇ ಇದೆ. ಕಳೆದ ವರ್ಷ ಆಗಸ್ಟ್​ 5ರಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಶ್ರೀರಾಮಮಂದಿರ (Ayodhya Ram Mandir) ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಆಗಿನಿಂದಲೂ ಅಲ್ಲಿ ಕೆಲಸ ನಡೆಯುತ್ತಿದ್ದು, ಕೊವಿಡ್​ 19 ಸಂದರ್ಭದಲ್ಲೂ ನಿಲ್ಲಲಿಲ್ಲ. ಶ್ರೀರಾಮಂದಿರ ನಿರ್ಮಾಣದೊಟ್ಟಿಗೆ, ಅಯೋಧ್ಯೆಯ ಸಮಗ್ರ ಅಭಿವೃದ್ಧಿಗೆ ಸಂಬಂಧ ಉತ್ತರ ಪ್ರದೇಶ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಸ್ತಾವನೆ ಸಲ್ಲಿಸಿದೆ.

ಹೀಗಿರುವಾಗ ಅಯೋಧ್ಯೆ ಶ್ರೀರಾಮಂದಿರಕ್ಕೆ ಭಕ್ತರಿಗೆ ಪ್ರವೇಶ ಸಿಗಲು 2023ರವರೆಗೆ ಕಾಯಲೇಬೇಕು ಎಂದು ಇಂದು ಎಎನ್​ಐ ವರದಿ ಮಾಡಿದೆ. 2023ರ ಡಿಸೆಂಬರ್​​ನಿಂದ ರಾಮಮಂದಿರಕ್ಕೆ ಹೋಗಲು, ಪೂಜೆ ಸಲ್ಲಿಸಲು ಭಕ್ತರಿಗೆ ಅವಕಾಶ ಸಿಗಲಿದೆ. ಇನ್ನೂ ಒಂದೂವರೆ ವರ್ಷವಷ್ಟೇ ಬಾಕಿ ಇದ್ದು, ಶ್ರೀರಾಮನ ಭಕ್ತರಿಗೆ ಇದೊಂದು ಸಿಹಿ ಸುದ್ದಿಯೇ ಆಗಿದೆ. ಆದಾಗ್ಯೂ ದೇಗುಲದ ಸುತ್ತ ಸುಮಾರು 70 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣ ಆಗುತ್ತಿರುವ ಕ್ಯಾಂಪಸ್​​ 2025ರ ಹೊತ್ತಿಗೆ ಪೂರ್ಣಗೊಳ್ಳಲಿದೆ. ಇದು ಶ್ರೀರಾಮಮಂದಿರ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ ಮೂಲಗಳಿಂದಲೇ ಸಿಕ್ಕ ಮಾಹಿತಿ ಎಂದೂ ಎಎನ್​ಐ ತಿಳಿಸಿದೆ.

ಸದ್ಯ ಶ್ರೀರಾಮಮಂದಿರಕ್ಕೆ ಅಡಿಪಾಯ ಹಾಕುವ ಕಾರ್ಯ ಭರದಿಂದ ಸಾಗುತ್ತಿದ್ದು, ಮೊದಲ ಹಂತದ ಕೆಲಸ ಸೆಪ್ಟೆಂಬರ್​ನಲ್ಲಿ ಪೂರ್ಣಗೊಳ್ಳಲಿದೆ. ಹಾಗೇ, ಎರಡನೇ ಹಂತ ನವೆಂಬರ್​ನಿಂದ ಶುರುವಾಗಲಿದೆ.

ಇದನ್ನೂ ಓದಿ: Ravi Dahiya: ಮಗನಿಗಾಗಿ ನಿತ್ಯ 40 ಕಿ. ಮೀ ಪ್ರಯಾಣ ಮಾಡುತ್ತಿದ್ದ ತಂದೆ! ಕುಸ್ತಿಪಟು ರವಿ ದಹಿಯಾ ಬಗ್ಗೆ ನಿಮಗೆ ಗೊತ್ತಿರದ ವಿಚಾರಗಳಿವು

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್