AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಶ್ರೀರಾಮ ಮಂದಿರ ಪ್ರವೇಶಕ್ಕೆ ಯಾವಾಗಿನಿಂದ ಅವಕಾಶ? -ಭಕ್ತರಿಗೊಂದು ಸಿಹಿ ಸುದ್ದಿ

Ayodhya Ram Temple: ಸದ್ಯ ಶ್ರೀರಾಮಮಂದಿರಕ್ಕೆ ಅಡಿಪಾಯ ಹಾಕುವ ಕಾರ್ಯ ಭರದಿಂದ ಸಾಗುತ್ತಿದ್ದು, ಮೊದಲ ಹಂತದ ಕೆಲಸ ಸೆಪ್ಟೆಂಬರ್​ನಲ್ಲಿ ಪೂರ್ಣಗೊಳ್ಳಲಿದೆ.

ಅಯೋಧ್ಯೆ ಶ್ರೀರಾಮ ಮಂದಿರ ಪ್ರವೇಶಕ್ಕೆ ಯಾವಾಗಿನಿಂದ ಅವಕಾಶ? -ಭಕ್ತರಿಗೊಂದು ಸಿಹಿ ಸುದ್ದಿ
ಅಯೋಧ್ಯಾ ಶ್ರೀರಾಮಮಂದಿರ
TV9 Web
| Edited By: |

Updated on: Aug 04, 2021 | 6:40 PM

Share

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ (Ram Temple) ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂಬುದು ಗೊತ್ತು. ಆದರೆ ಅದು ಯಾವಾಗ ಮುಗಿಯಬಹುದು? ಭಕ್ತರಿಗೆ ಪ್ರವೇಶಕ್ಕೆ ಯಾವಾಗಿನಿಂದ ಅವಕಾಶ ದೊರೆಯಬಹುದು-ಎಂಬಿತ್ಯಾದಿ ಕುತೂಹಲ ಇದ್ದೇ ಇದೆ. ಕಳೆದ ವರ್ಷ ಆಗಸ್ಟ್​ 5ರಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಶ್ರೀರಾಮಮಂದಿರ (Ayodhya Ram Mandir) ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಆಗಿನಿಂದಲೂ ಅಲ್ಲಿ ಕೆಲಸ ನಡೆಯುತ್ತಿದ್ದು, ಕೊವಿಡ್​ 19 ಸಂದರ್ಭದಲ್ಲೂ ನಿಲ್ಲಲಿಲ್ಲ. ಶ್ರೀರಾಮಂದಿರ ನಿರ್ಮಾಣದೊಟ್ಟಿಗೆ, ಅಯೋಧ್ಯೆಯ ಸಮಗ್ರ ಅಭಿವೃದ್ಧಿಗೆ ಸಂಬಂಧ ಉತ್ತರ ಪ್ರದೇಶ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಸ್ತಾವನೆ ಸಲ್ಲಿಸಿದೆ.

ಹೀಗಿರುವಾಗ ಅಯೋಧ್ಯೆ ಶ್ರೀರಾಮಂದಿರಕ್ಕೆ ಭಕ್ತರಿಗೆ ಪ್ರವೇಶ ಸಿಗಲು 2023ರವರೆಗೆ ಕಾಯಲೇಬೇಕು ಎಂದು ಇಂದು ಎಎನ್​ಐ ವರದಿ ಮಾಡಿದೆ. 2023ರ ಡಿಸೆಂಬರ್​​ನಿಂದ ರಾಮಮಂದಿರಕ್ಕೆ ಹೋಗಲು, ಪೂಜೆ ಸಲ್ಲಿಸಲು ಭಕ್ತರಿಗೆ ಅವಕಾಶ ಸಿಗಲಿದೆ. ಇನ್ನೂ ಒಂದೂವರೆ ವರ್ಷವಷ್ಟೇ ಬಾಕಿ ಇದ್ದು, ಶ್ರೀರಾಮನ ಭಕ್ತರಿಗೆ ಇದೊಂದು ಸಿಹಿ ಸುದ್ದಿಯೇ ಆಗಿದೆ. ಆದಾಗ್ಯೂ ದೇಗುಲದ ಸುತ್ತ ಸುಮಾರು 70 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣ ಆಗುತ್ತಿರುವ ಕ್ಯಾಂಪಸ್​​ 2025ರ ಹೊತ್ತಿಗೆ ಪೂರ್ಣಗೊಳ್ಳಲಿದೆ. ಇದು ಶ್ರೀರಾಮಮಂದಿರ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ ಮೂಲಗಳಿಂದಲೇ ಸಿಕ್ಕ ಮಾಹಿತಿ ಎಂದೂ ಎಎನ್​ಐ ತಿಳಿಸಿದೆ.

ಸದ್ಯ ಶ್ರೀರಾಮಮಂದಿರಕ್ಕೆ ಅಡಿಪಾಯ ಹಾಕುವ ಕಾರ್ಯ ಭರದಿಂದ ಸಾಗುತ್ತಿದ್ದು, ಮೊದಲ ಹಂತದ ಕೆಲಸ ಸೆಪ್ಟೆಂಬರ್​ನಲ್ಲಿ ಪೂರ್ಣಗೊಳ್ಳಲಿದೆ. ಹಾಗೇ, ಎರಡನೇ ಹಂತ ನವೆಂಬರ್​ನಿಂದ ಶುರುವಾಗಲಿದೆ.

ಇದನ್ನೂ ಓದಿ: Ravi Dahiya: ಮಗನಿಗಾಗಿ ನಿತ್ಯ 40 ಕಿ. ಮೀ ಪ್ರಯಾಣ ಮಾಡುತ್ತಿದ್ದ ತಂದೆ! ಕುಸ್ತಿಪಟು ರವಿ ದಹಿಯಾ ಬಗ್ಗೆ ನಿಮಗೆ ಗೊತ್ತಿರದ ವಿಚಾರಗಳಿವು

Follow Us
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!