AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಗೀತಾ ಪ್ರೆಸ್​​ನ ರಾಮಚರಿತ ಮಾನಸ, ರಾಮನ ಕೃತಿಗಳಿಗೆ ಭರ್ಜರಿ ಬೇಡಿಕೆ

ಗೋರಖ್​​ಪುರದ ಗೀತಾ ಪ್ರೆಸ್​​ನ ‘ರಾಮಾಚರಿತ ಮಾನಸ’ಕ್ಕೆ 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಬೇಡಿಕೆ ವ್ಯಕ್ತವಾಗಿದೆ ಎಂಬ ಸಂದೇಶ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ‘ಸುಂದರಕಾಂಡ’ ಮತ್ತು ‘ಹನುಮಾನ್ ಚಾಲೀಸ’ಕ್ಕೂ ಬಹಳಷ್ಟು ಬೇಡಿಕೆ ವ್ಯಕ್ತವಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಸಂದೇಶಗಳಲ್ಲಿ ಉಲ್ಲೇಖವಾಗಿದೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಗೀತಾ ಪ್ರೆಸ್​​ನ ರಾಮಚರಿತ ಮಾನಸ, ರಾಮನ ಕೃತಿಗಳಿಗೆ ಭರ್ಜರಿ ಬೇಡಿಕೆ
ಗೀತಾ ಪ್ರೆಸ್
TV9 Web
| Edited By: |

Updated on: Jan 13, 2024 | 6:46 PM

Share

ನವದೆಹಲಿ, ಜನವರಿ 13: ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಪ್ರಾಣ ಪ್ರತಿಷ್ಠೆಗೆ ದಿನಗಳಲ್ಲಿ ಆರಂಭವಾಗಿದೆ. ಈ ಮಧ್ಯೆ ದೇಶದ ಮೂಲೆ ಮೂಲೆಯಲ್ಲಿ ಶ್ರೀರಾಮನಿಗೆ ಸಂಬಂಧಿಸಿದ ವಿವಿಧ ವಿಚಾರಗಳು, ಐತಿಹ್ಯಗಳು ಬೆಳಕಿಗೆ ಬರುತ್ತಿವೆ. ಎಲ್ಲೆಡೆ ಭಗವಾನ್ ರಾಮನಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದೀಗ ರಾಮ ಮಂದಿರ ಉದ್ಘಾಟನೆ ದಿನಾಂಕ ಸಮೀಪಿಸುತ್ತಿದ್ದಂತೆಯೇ ರಾಮಾಚರಿತ ಮಾನಸದ ಪುಸ್ತಕ ಪ್ರತಿಗಳಿಗೆ ಭಾರಿ ಬೇಡಿಕೆ ಕಂಡುಬಂದಿದೆ. ಗೋರಖ್​​ಪುರದ ಗೀತಾ ಪ್ರೆಸ್​​ನ ‘ರಾಮಾಚರಿತ ಮಾನಸ’ಕ್ಕೆ 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಬೇಡಿಕೆ ವ್ಯಕ್ತವಾಗಿದೆ ಎಂಬ ಸಂದೇಶ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಭಗವಾನ್ ರಾಮನಿಗೆ ಸಂಬಂಧಿಸಿದ ಕೃತಿಗಳಿಗೆ ಬೇಡಿಕೆ ಬಹಳ ಹೆಚ್ಚಾಗಿದ್ದು ಪೂರೈಸುವುದು ಗೀತಾ ಪ್ರೆಸ್​​​ಗೆ ಕಷ್ಟಕರವಾಗಿ ಪರಿಣಮಿಸಿದೆ.

‘ಸುಂದರಕಾಂಡ’ ಮತ್ತು ‘ಹನುಮಾನ್ ಚಾಲೀಸ’ಕ್ಕೂ ಬಹಳಷ್ಟು ಬೇಡಿಕೆ ವ್ಯಕ್ತವಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಸಂದೇಶಗಳಲ್ಲಿ ಉಲ್ಲೇಖವಾಗಿದೆ.

ಮತ್ತೊಂಡೆ, ದೇಶದ ವಿವಿಧ ಕಡೆಗಳಲ್ಲಿ ಭಗವಾನ್ ಶ್ರೀ ರಾಮನ ಚಿತ್ರ ಹಾಗೂ ಸಂದೇಶಗಳುಳ್ಳ ಕಟೌಟ್​​ಗಳು, ಬ್ಯಾನರ್​​​ಗಳು ರಾರಾಜಿಸುತ್ತಿವೆ. ಗುಜರಾತ್ ರಾಜ್ಯದ ಸೂರತ್ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ 35 ಮೀಟರ್ ಉದ್ದ ಹಾಗೂ 6.5 ಮೀಟರ್ ಅಗಲದ ಬೃಹದಾಕಾರದ ಬ್ಯಾನರ್ ಅಳವಡಿಸಿರುವುದು ಗಮನ ಸೆಳೆಯುತ್ತಿದೆ.

ಮತ್ತಷ್ಟು ಓದಿ: ಒಡಿಶಾದ ಜಗನ್ನಾಥ ದೇವಾಲಯದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಹಾಗೂ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬಾಲಿವುಡ್ ಸೆಲೆಬ್ರಿಟಿಗಳು, ಕ್ರಿಕೆಟ್ ತಾರೆಯರು ಸೇರಿದಂತೆ ವಿವಿಧ ಕ್ಷೇತ್ರಗಳ ನೂರಾರು ಗಣ್ಯರಿಗೆ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ