AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಗೀತಾ ಪ್ರೆಸ್​​ನ ರಾಮಚರಿತ ಮಾನಸ, ರಾಮನ ಕೃತಿಗಳಿಗೆ ಭರ್ಜರಿ ಬೇಡಿಕೆ

ಗೋರಖ್​​ಪುರದ ಗೀತಾ ಪ್ರೆಸ್​​ನ ‘ರಾಮಾಚರಿತ ಮಾನಸ’ಕ್ಕೆ 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಬೇಡಿಕೆ ವ್ಯಕ್ತವಾಗಿದೆ ಎಂಬ ಸಂದೇಶ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ‘ಸುಂದರಕಾಂಡ’ ಮತ್ತು ‘ಹನುಮಾನ್ ಚಾಲೀಸ’ಕ್ಕೂ ಬಹಳಷ್ಟು ಬೇಡಿಕೆ ವ್ಯಕ್ತವಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಸಂದೇಶಗಳಲ್ಲಿ ಉಲ್ಲೇಖವಾಗಿದೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಗೀತಾ ಪ್ರೆಸ್​​ನ ರಾಮಚರಿತ ಮಾನಸ, ರಾಮನ ಕೃತಿಗಳಿಗೆ ಭರ್ಜರಿ ಬೇಡಿಕೆ
ಗೀತಾ ಪ್ರೆಸ್
Follow us
TV9 Web
| Updated By: Ganapathi Sharma

Updated on: Jan 13, 2024 | 6:46 PM

ನವದೆಹಲಿ, ಜನವರಿ 13: ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಪ್ರಾಣ ಪ್ರತಿಷ್ಠೆಗೆ ದಿನಗಳಲ್ಲಿ ಆರಂಭವಾಗಿದೆ. ಈ ಮಧ್ಯೆ ದೇಶದ ಮೂಲೆ ಮೂಲೆಯಲ್ಲಿ ಶ್ರೀರಾಮನಿಗೆ ಸಂಬಂಧಿಸಿದ ವಿವಿಧ ವಿಚಾರಗಳು, ಐತಿಹ್ಯಗಳು ಬೆಳಕಿಗೆ ಬರುತ್ತಿವೆ. ಎಲ್ಲೆಡೆ ಭಗವಾನ್ ರಾಮನಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದೀಗ ರಾಮ ಮಂದಿರ ಉದ್ಘಾಟನೆ ದಿನಾಂಕ ಸಮೀಪಿಸುತ್ತಿದ್ದಂತೆಯೇ ರಾಮಾಚರಿತ ಮಾನಸದ ಪುಸ್ತಕ ಪ್ರತಿಗಳಿಗೆ ಭಾರಿ ಬೇಡಿಕೆ ಕಂಡುಬಂದಿದೆ. ಗೋರಖ್​​ಪುರದ ಗೀತಾ ಪ್ರೆಸ್​​ನ ‘ರಾಮಾಚರಿತ ಮಾನಸ’ಕ್ಕೆ 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಬೇಡಿಕೆ ವ್ಯಕ್ತವಾಗಿದೆ ಎಂಬ ಸಂದೇಶ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಭಗವಾನ್ ರಾಮನಿಗೆ ಸಂಬಂಧಿಸಿದ ಕೃತಿಗಳಿಗೆ ಬೇಡಿಕೆ ಬಹಳ ಹೆಚ್ಚಾಗಿದ್ದು ಪೂರೈಸುವುದು ಗೀತಾ ಪ್ರೆಸ್​​​ಗೆ ಕಷ್ಟಕರವಾಗಿ ಪರಿಣಮಿಸಿದೆ.

‘ಸುಂದರಕಾಂಡ’ ಮತ್ತು ‘ಹನುಮಾನ್ ಚಾಲೀಸ’ಕ್ಕೂ ಬಹಳಷ್ಟು ಬೇಡಿಕೆ ವ್ಯಕ್ತವಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಸಂದೇಶಗಳಲ್ಲಿ ಉಲ್ಲೇಖವಾಗಿದೆ.

ಮತ್ತೊಂಡೆ, ದೇಶದ ವಿವಿಧ ಕಡೆಗಳಲ್ಲಿ ಭಗವಾನ್ ಶ್ರೀ ರಾಮನ ಚಿತ್ರ ಹಾಗೂ ಸಂದೇಶಗಳುಳ್ಳ ಕಟೌಟ್​​ಗಳು, ಬ್ಯಾನರ್​​​ಗಳು ರಾರಾಜಿಸುತ್ತಿವೆ. ಗುಜರಾತ್ ರಾಜ್ಯದ ಸೂರತ್ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ 35 ಮೀಟರ್ ಉದ್ದ ಹಾಗೂ 6.5 ಮೀಟರ್ ಅಗಲದ ಬೃಹದಾಕಾರದ ಬ್ಯಾನರ್ ಅಳವಡಿಸಿರುವುದು ಗಮನ ಸೆಳೆಯುತ್ತಿದೆ.

ಮತ್ತಷ್ಟು ಓದಿ: ಒಡಿಶಾದ ಜಗನ್ನಾಥ ದೇವಾಲಯದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಹಾಗೂ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬಾಲಿವುಡ್ ಸೆಲೆಬ್ರಿಟಿಗಳು, ಕ್ರಿಕೆಟ್ ತಾರೆಯರು ಸೇರಿದಂತೆ ವಿವಿಧ ಕ್ಷೇತ್ರಗಳ ನೂರಾರು ಗಣ್ಯರಿಗೆ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್