AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಅತ್ಯಾಚಾರ ಪ್ರಕರಣ; ಯೋಗಿ ಸರ್ಕಾರದಿಂದ ಆರೋಪಿ ಮೊಯಿದ್ ಖಾನ್ ಶಾಪಿಂಗ್ ಕಾಂಪ್ಲೆಕ್ಸ್ ನೆಲಸಮ

ಅಯೋಧ್ಯೆಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿ ಎಸ್​ಪಿ ನಾಯಕ ಮೊಯಿದ್ ಖಾನ್ ಮಾಲೀಕತ್ವದ ಶಾಪಿಂಗ್ ಕಾಂಪ್ಲೆಕ್ಸ್‌ನ ಒಂದು ಭಾಗವನ್ನು ಅಯೋಧ್ಯೆ ಜಿಲ್ಲಾಡಳಿತವು ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿದ ಕಾರಣದಿಂದಾಗಿ ನೆಲಸಮಗೊಳಿಸಿದೆ.

ಅಯೋಧ್ಯೆ ಅತ್ಯಾಚಾರ ಪ್ರಕರಣ; ಯೋಗಿ ಸರ್ಕಾರದಿಂದ ಆರೋಪಿ ಮೊಯಿದ್ ಖಾನ್ ಶಾಪಿಂಗ್ ಕಾಂಪ್ಲೆಕ್ಸ್ ನೆಲಸಮ
ಯೋಗಿ ಆದಿತ್ಯನಾಥ್
ಸುಷ್ಮಾ ಚಕ್ರೆ
|

Updated on: Aug 22, 2024 | 3:37 PM

Share

ನವದೆಹಲಿ: ಅಯೋಧ್ಯೆಯಲ್ಲಿ ಕಾನೂನುಬಾಹಿರವಾಗಿ ನಿರ್ಮಿಸಲಾಗಿದೆ ಎಂದು ಹೇಳಲಾದ ಅತ್ಯಾಚಾರದ ಆರೋಪಿಯ ಬೇಕರಿಯನ್ನು ನೆಲಸಮಗೊಳಿಸಿದ ಕೆಲವು ದಿನಗಳ ನಂತರ, ಅಯೋಧ್ಯೆ ಜಿಲ್ಲಾಡಳಿತವು ಎಸ್‌ಪಿ ನಾಯಕ ಮತ್ತು ಅಯೋಧ್ಯೆ ಅತ್ಯಾಚಾರದ ಆರೋಪಿ ಮೊಯಿದ್ ಖಾನ್ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಂಡಿದೆ. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಅವರ ಶಾಪಿಂಗ್ ಕಾಂಪ್ಲೆಕ್ಸ್‌ನ ಮೂರನೇ ಒಂದು ಭಾಗವನ್ನು ಯೋಗಿ ಆದಿತ್ಯನಾಥ್ ಸರ್ಕಾರದ ಅಧಿಕಾರಿಗಳು ಇಂದು ಕೆಡವಿದ್ದಾರೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಮೊಯಿದ್ ಖಾನ್ ಒಡೆತನದ ಶಾಪಿಂಗ್ ಕಾಂಪ್ಲೆಕ್ಸ್ ಅನ್ನು ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಆಕ್ರಮಿಸಿ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ಈ ಹಿಂದೆ ಹೇಳಿದ್ದರು. ಆದ್ದರಿಂದ, ಆ ಸಂಕೀರ್ಣದ ಮೂರನೇ ಒಂದು ಭಾಗವನ್ನು ಕೆಡವಲಾಗುತ್ತದೆ. ಸಂಕೀರ್ಣವನ್ನು ಖಾಲಿ ಮಾಡಲಾಗಿದ್ದು, ಇಂದು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡವನ್ನು ಬುಲ್ಡೋಜರ್ ಮೂಲಕ ಕೆಡವಲಾಗಿದೆ.

ಇದನ್ನೂ ಓದಿ: Crime News: ನಿಲ್ಲದ ಲೈಂಗಿಕ ದೌರ್ಜನ್ಯ; ಉತ್ತರಾಖಂಡದಲ್ಲಿ ಬಸ್​ನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಇದರ ನಡುವೆ, ಈ ಪ್ರಕರಣದ ಮತ್ತೊಂದು ಪ್ರಮುಖ ಬೆಳವಣಿಗೆಯಲ್ಲಿ ಅಯೋಧ್ಯೆಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದೀಗ ಲಕ್ನೋದ ಕೆಜಿಎಂಯುನಲ್ಲಿ ಗರ್ಭಧಾರಣೆಯ ವೈದ್ಯಕೀಯ ಮುಕ್ತಾಯದ ನಂತರ ಆಕೆಯ ಕುಟುಂಬವನ್ನು ಭದರ್ಸಾ ಪಟ್ಟಣದ ಮನೆಗೆ ಸ್ಥಳಾಂತರಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ಅಯೋಧ್ಯೆ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಮತ್ತು ಅವರ ಕುಟುಂಬದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮಹಿಳಾ ಕಾನ್‌ಸ್ಟೆಬಲ್‌ಗಳು ಸೇರಿದಂತೆ 30ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ