AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದಿಕ ವಿಧಿ ವಿಧಾನಗಳೊಂದಿಗೆ ಅಯೋಧ್ಯಾ ರಾಮ ಮಂದಿರದ ತಳಪಾಯ ನಿರ್ಮಾಣ ಆರಂಭ

ಎಲ್ಲವೂ ಅಂದುಕೊಂಡಂತೆಯೇ ಆದರೆ 2023 ರ ಹೊತ್ತಿಗೆ ಪವಿತ್ರ ಶ್ರೀ ರಾಮ ಮಂದಿರ ನಿರ್ಮಾಣ ಮುಕ್ತಾಯವಾಗಲಿದ್ದು, ಭಕ್ತರಿಗೆ ದರ್ಶನ ಭಾಗ್ಯ ಲಭ್ಯವಾಗಲಿದೆ ಎಂದು ಟ್ರಸ್ಟ್ ತಿಳಿಸಿದೆ.

ವೈದಿಕ ವಿಧಿ ವಿಧಾನಗಳೊಂದಿಗೆ ಅಯೋಧ್ಯಾ ರಾಮ ಮಂದಿರದ ತಳಪಾಯ ನಿರ್ಮಾಣ ಆರಂಭ
ಶ್ರೀರಾಮ ಮಂದಿರ ನಿರ್ಮಾಣದ ಫೌಂಡೇಶನ್ ಕಾಮಗಾರಿ ಆರಂಭಿಸಲಾಯಿತು.
Follow us
guruganesh bhat
| Updated By: Skanda

Updated on: Mar 16, 2021 | 1:02 PM

ಅಯೋಧ್ಯಾ: ಐತಿಹಾಸಿಕ ಶ್ರೀ ರಾಮ ಮಂದಿರದ ತಳಪಾಯ (ಫೌಂಡೇಶನ್) ನಿರ್ಮಾಣ ಕಾರ್ಯ ನಿನ್ನೆಯಿಂದ (ಮಾರ್ಚ್ 15) ಆರಂಭವಾಗಿದೆ. ರಾಮ ಮಂದಿರ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನ ಸದಸ್ಯರ ಸಮ್ಮುಖದಲ್ಲಿ ವೈದಿಕ ವಿಧಿ ವಿಧಾನ ಮತ್ತು ಮಂತ್ರಘೋಷಗಳೊಂದಿಗೆ ತಳಪಾಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಶ್ರೀ ರಾಮ ಜನ್ಮಭೂಮಿ ನಿರ್ಮಾಣ ಟ್ರಸ್ಟ್​​ನ ಸಮಿತಿಯ ಸದಸ್ಯರಾದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಟ್ರಸ್ಟಿಗಳಾದ ಅನಿಲ್ ಮಿಶ್ರಾ, ರಾಜ ವಿಮಲೇಂದರ್ ಮೋಹನ್ ಪ್ರತಾಪ್ ಮಿಶ್ರಾ ಮತ್ತು ಮಹಾಂತ್ ದಿನೇಂದ್ರ ದಾಸ್, ಜಿಲ್ಲಾ ನ್ಯಾಯಾಧೀಶ ಅನುಜ್ ಝಾ ಅವರುಗಳು ಅಯೋಧ್ಯಾ ಶ್ರೀ ರಾಮ ಮಂದಿರದ ತಳಪಾಯ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದರು.

ಶುಭ ಮುಹೂರ್ತದಲ್ಲಿ ಶ್ರೀ ರಾಮ ಮಂದಿರದ ನಿರ್ಮಾಣವನ್ನು ಆರಂಭಿಸಲಾಗಿದೆ. ಈ ಕ್ಷಣಕ್ಕೆ ನಾವೆಲ್ಲರೂ ಸಾಕ್ಷಿಯಾಗಿರುವುದು ಸಂತಸ ತಂದಿದೆ ಎಂದು ರಾಮ ಮಂದಿರ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಟ್ವೀಟ್ ಮಾಡಿದೆ. ಮುಂದಿನ ಆಗಸ್ಟ್ ತಿಂಗಳಲ್ಲಿ ಫೌಂಡೇಶನ್ ನಿರ್ಮಾಣ ಮುಕ್ತಾಯವಾಗಲಿದ್ದು, ಆಗಸ್ಟ್​ ನಂತರ ನಿಜವಾದ ರಾಮ ಮಂದಿರದ ನಿರ್ಮಾಣ ಆರಂಭವಾಗಲಿದೆ ಎಂದು ಟ್ರಸ್ಟ್​ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ಧಾರೆ.

ಎಲ್ಲವೂ ಅಂದುಕೊಂಡಂತೆಯೇ ಆದರೆ 2023 ರ ಹೊತ್ತಿಗೆ ಪವಿತ್ರ ಶ್ರೀ ರಾಮ ಮಂದಿರ ನಿರ್ಮಾಣ ಮುಕ್ತಾಯವಾಗಲಿದ್ದು, ಭಕ್ತರಿಗೆ ದರ್ಶನ ಭಾಗ್ಯ ಲಭ್ಯವಾಗಲಿದೆ ಎಂದು ಟ್ರಸ್ಟ್ ತಿಳಿಸಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರ (Ram Mandir, Ayodhya, Uttar Pradesh) ನಿರ್ಮಾಣದ ಪೂರ್ವ ತಯಾರಿ ಕಾರ್ಯಗಳು ಭರದಿಂದ ಸಾಗುತ್ತಿವೆ. ರಾಮ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ನಿಧಿ ಸಂಗ್ರಹ ಕಾರ್ಯಕ್ರಮವೂ ನಡೆಯುತ್ತಿದೆ. ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಇದುವರೆಗೆ 1,511 ಕೋಟಿ ರೂ. ಮೊತ್ತವನ್ನು ಸಂಗ್ರಹಿಸಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್​ನ ಖಜಾಂಜಿ, ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ ತಿಳಿಸಿದ್ದಾರೆ. (Sri Ram Janmabhoomi Tirth Trust) ರಾಮ ಕ್ಷೇತ್ರದ ನಿರ್ಮಾಣ ಹಾಗೂ ವ್ಯವಸ್ಥೆಯ ಉಸ್ತುವಾರಿ ವಹಿಸಿರುವ ಟ್ರಸ್ಟ್ ಪರವಾಗಿ, ಸ್ವಾಮಿಗಳು ಶುಕ್ರವಾರ ಈ ಮಾಹಿತಿ ನೀಡಿದ್ದಾರೆ.

ಮಕರ ಸಂಕ್ರಾಂತಿಯಂದು ನಿಧಿ ಸಂಗ್ರಹ ಅಭಿಯಾನವನ್ನು ವಿಶ್ವ ಹಿಂದೂ ಪರಿಷತ್ (VHP) ಶುರು ಮಾಡಿತ್ತು. ಬಳಿಕ, 30 ದಿನಗಳ ಅವಧಿಯಲ್ಲಿ ದೇಶವ್ಯಾಪಿಯಾಗಿ 1,511 ಕೋಟಿ ರೂ. ಮೊತ್ತ ಸಂಗ್ರಹವಾಗಿದೆ. ಫೆಬ್ರವರಿ 11ರ ದಾಖಲೆಯಂತೆ ಒಟ್ಟು 1,511 ಕೋಟಿ ರೂ. ಹಣ ಸಂಗ್ರಹವಾಗಿದೆ ಎಂದು ಸ್ವಾಮಿ ಗೋವಿಂದ್ ದೇವ್ ಗಿರಿ ಹೇಳಿದ್ದರು.

4 ಲಕ್ಷ ಹಳ್ಳಿಗಳು ಹಾಗೂ 11 ಕೋಟಿ ಕುಟುಂಬಗಳು ಸಂಪೂರ್ಣ ಭಾರತವು ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಧನ ಸಹಾಯ ಮಾಡುತ್ತಿದೆ. ನಾವು ನಿಧಿ ಸಂಗ್ರಹಕ್ಕಾಗಿ, 4 ಲಕ್ಷ ಹಳ್ಳಿಗಳನ್ನು ಹಾಗೂ 11 ಕೋಟಿ ಕುಟುಂಬಗಳನ್ನು ತಲುಪಿದ್ದೇವೆ. ಜನವರಿ 15 ರಿಂದ ಈ ಅಭಿಯಾನ ನಡೆಸುತ್ತಿದ್ದೇವೆ. ಫೆಬ್ರವರಿ 27 ರ ವರೆಗೆ ಅಭಿಯಾನ ಮುಂದುವರಿಸುತ್ತೇವೆ. ನಿಧಿ ಸಂಗ್ರಹ ಯೋಜನೆಗಾಗಿ ಈಗ ಸೂರತ್​ಗೆ ಭೇಟಿ ನೀಡಿದ್ದೇನೆ. ಜನರು ದೇಣಿಗೆ ನೀಡುತ್ತಿದ್ದಾರೆ. 492 ವರ್ಷಗಳ ಬಳಿಕ, ಧರ್ಮಕ್ಕಾಗಿ ಕೆಲಸ ಮಾಡಲು ಜನತೆಗೆ ಅವಕಾಶ ಲಭಿಸಿದೆ ಎಂದು ದೇವ್ ಗಿರಿ ಸ್ವಾಮಿ ತಿಳಿಸಿದ್ದಾರೆ.

30 ದಿನಗಳಲ್ಲಿ 1,511 ಕೋಟಿ ರೂ. ಸಂಗ್ರಹ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ 30 ದಿನಗಳ ಅವಧಿಯಲ್ಲಿ ಬಹುದೊಡ್ಡ ಮೊತ್ತವನ್ನು ನಿಧಿ ಸಂಗ್ರಹ ಅಭಿಯಾನದ ಮೂಲಕ ಪಡೆದುಕೊಂಡಿದೆ. 2019 ನವೆಂಬರ್​ನಲ್ಲಿ, ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್​ನ ಐದು ನ್ಯಾಯಾಧೀಶರು ರಾಮ ಮಂದಿರ ಸಂಬಂಧ ತೀರ್ಪು ನೀಡಿದರು. ವಿವಾದಾತ್ಮಕವಾಗಿದ್ದ ಸಂಪೂರ್ಣ 2.7 ಎಕರೆಗಳ ಭೂಮಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನೀಡಲಾಯಿತು. ಬಳಿಕ, ಮಂದಿರ ನಿರ್ಮಾಣಕ್ಕೆ ಟ್ರಸ್ಟ್ ರಚನೆ ಮಾಡಲಾಗಿತ್ತು.

ಇದನ್ನೂ ಓದಿ: ರಾಮ ಮಂದಿರಕ್ಕೆ ದೇಣಿಗೆ ನೀಡದವರು ಬಾಯಿಗೆ ಬಂದ ಹಾಗೆ ಮಾತನಾಡಬಾರದು; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Photos | ಸಿದ್ದರಾಮನಹುಂಡಿಯಲ್ಲಿ ಈ ಬಾರಿ ರಾಮನವಮಿ ಬಲುಜೋರು! ಮಾಜಿ CM ಸಿದ್ದರಾಮಯ್ಯ ಹೇಳಿದಂತೆ ಅಲ್ಲಿ ನಿರ್ಮಾಣವಾಗ್ತಿದೆ ರಾಮ ಮಂದಿರ..

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು