AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Health Day ಕೆಂಪು ಕೋಟೆಯಲ್ಲಿ ಯೋಗ ಉತ್ಸವ; ಲೋಕಸಭೆ ಸ್ಪೀಕರ್, ಕೇಂದ್ರ ಸಚಿವರು ಭಾಗಿ

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಕೇಂದ್ರ ಸಚಿವರಾದ ಸರ್ಬಾನಂದ ಸೋನೋವಾಲ್, ಮೀನಾಕ್ಷಿ ಲೇಖಿ, ಜಿ ಕಿಶನ್ ರೆಡ್ಡಿ ಮುಂತಾದವರು ಮೆಗಾ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೇಂದ್ರದ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ...

World Health Day ಕೆಂಪು ಕೋಟೆಯಲ್ಲಿ ಯೋಗ ಉತ್ಸವ; ಲೋಕಸಭೆ ಸ್ಪೀಕರ್, ಕೇಂದ್ರ ಸಚಿವರು ಭಾಗಿ
ಯೋಗ ಉತ್ಸವ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 07, 2022 | 2:20 PM

ದೆಹಲಿ: ವಿಶ್ವ ಆರೋಗ್ಯ ದಿನ(World Health Day) ಸಂದರ್ಭದಲ್ಲಿ, ಆಯುಷ್ ಸಚಿವಾಲಯವು ಗುರುವಾರ ಕೆಂಪು ಕೋಟೆಯಲ್ಲಿ ‘ಯೋಗ ಉತ್ಸವ’ (Yog Utsav) ಆಯೋಜಿಸಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಕೇಂದ್ರ ಸಚಿವರಾದ ಸರ್ಬಾನಂದ ಸೋನೋವಾಲ್, ಮೀನಾಕ್ಷಿ ಲೇಖಿ, ಜಿ ಕಿಶನ್ ರೆಡ್ಡಿ ಮುಂತಾದವರು ಮೆಗಾ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೇಂದ್ರದ ಆಜಾದಿ ಕಾ ಅಮೃತ್ ಮಹೋತ್ಸವದ (Azadi Ka Amrit Mahotsav) ಅಂಗವಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಮುಂಚಿತವಾಗಿ ಯೋಗ ಉತ್ಸವವನ್ನು ಆಯೋಜಿಸಲಾಗಿದೆ. ವಿಶ್ವ ಆರೋಗ್ಯ ದಿನದ ಸಂದರ್ಭದಲ್ಲಿ ನನ್ನ ಶುಭಾಶಯಗಳು. ಪ್ರಪಂಚದ ಆರೋಗ್ಯಕ್ಕಾಗಿ ಹಾರೈಕೆಗಳು. ಯೋಗವು ನಮ್ಮ ಪೂರ್ವಜರ ಜೀವನ ವಿಧಾನವಾಗಿದೆ. ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ಸಂಬಂಧಿಸಿದಂತೆ ನಾವು ಇಂದು ಅಂತರಾಷ್ಟ್ರೀಯ ಯೋಗ ದಿನದ ಮೊದಲು ಈ ಯೋಗಾಭ್ಯಾಸವನ್ನು ಇಟ್ಟುಕೊಂಡಿದ್ದೇವೆ” ಎಂದು ಸ್ಪೀಕರ್ ಹೇಳಿದರು. ಯೋಗವನ್ನು ಪ್ರತಿಯೊಬ್ಬರೂ ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳುವಂತೆ ಒತ್ತಾಯಿಸಿದರು. ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸುವ ಗುರಿಯನ್ನು ತಲುಪಲು ಪ್ರತಿಯೊಬ್ಬರೂ ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕೆಂದು ಲೋಕಸಭೆ ಸ್ಪೀಕರ್ ಒತ್ತಾಯಿಸಿದರು. “ಯೋಗ ಎಲ್ಲರಿಗೂ ಪ್ರಯೋಜನಕಾರಿಯಾಗಿದೆ. ಅದನ್ನು ಪ್ರತಿದಿನ ಅಭ್ಯಾಸ ಮಾಡುವುದು ಮುಖ್ಯ. ಭಾರತ ಮಾತ್ರವಲ್ಲ, ಇತರ ದೇಶಗಳು ಅದರ ಮಹತ್ವವನ್ನು ಅರ್ಥಮಾಡಿಕೊಂಡಿವೆ. ಇಂದು ನಾವು ಯೋಗ ಉತ್ಸವ ಆಚರಿಸುತ್ತಿದ್ದೇವೆ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಹೇಳಿದರು.

ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ತಮ್ಮ ಇತ್ತೀಚಿನ ಟ್ವೀಟ್‌ಗಳಲ್ಲಿ ಪ್ರತಿಯೊಬ್ಬರನ್ನು ಆಯುಷ್ ಆಂದೋಲನದ ಭಾಗವಾಗುವಂತೆ ಕರೆ ನೀಡಿದರ. “ಆಯುಷ್‌ ಪ್ರಾಚೀನ ಕಾಲದಿಂದಲೂ ಮಾನವೀಯತೆಗೆ ಸೇವೆ ಸಲ್ಲಿಸಿವೆ” ಎಂದು ಅವರು ಹೇಳಿದ್ದಾರೆ.

“ಕೈಗೆಟುಕುವ, ಪರಿಣಾಮಕಾರಿ ಮತ್ತು ತಳಮಟ್ಟವನ್ನು ತಲುಪುವ, ಭಾರತದ ಸಾಂಪ್ರದಾಯಿಕ ಔಷಧೀಯ ವ್ಯವಸ್ಥೆಗಳು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಕ್ಷೇಮ ಮತ್ತು ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತಿವೆ” ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಆರೋಗ್ಯ ದಿನದ ಅಂಗವಾಗಿ ತಮ್ಮ ಟ್ವೀಟ್‌ನಲ್ಲಿ ಆರೋಗ್ಯ ಕ್ಷೇತ್ರದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. “ಭಾರತದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಭಾರತ ಸರ್ಕಾರವು ಅವಿರತವಾಗಿ ಶ್ರಮಿಸುತ್ತಿದೆ. ನಮ್ಮ ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ರಕ್ಷಣೆಯನ್ನು ಖಾತರಿಪಡಿಸುವತ್ತ ಗಮನಹರಿಸಲಾಗಿದೆ, ”ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಮಹತ್ವವನ್ನು ಎತ್ತಿ ಹಿಡಿಯಲು ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ. ಇದನ್ನು ವಿಶ್ವ ಆರೋಗ್ಯ ಸಂಸ್ಥೆಯು 1950 ರಲ್ಲಿ ಜಾರಿಗೆ ತಂದಿತು.

ಇದನ್ನೂ ಓದಿ:World Health Day 2022: ನಿಮ್ಮಿಂದಾಗಿ ನಾವೆಲ್ಲ ಸುರಕ್ಷಿತ; ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್