ಆಯುಷ್ಮಾನ್ ಭವ: ಪ್ರಧಾನಿ ಮೋದಿ ಜನ್ಮದಿನವು ಆಚರಣೆಯಲ್ಲ, ಸಾರ್ವಜನಿಕ ಕಲ್ಯಾಣದ ದಿನ, ಈ ಬಾರಿ ಪ್ರಜೆಗಳಿಗೇನು ಸಿಗಲಿದೆ?

ಪ್ರಧಾನಿ ನರೇಂದ್ರ ಮೋದಿ ಅವರ 73 ನೇ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರ ಗಾಂಧಿ ಜಯಂತಿಯವರೆಗೆ 'ಸೇವಾ ಪಾಕ್ಷಿಕ' ಕಾರ್ಯಕ್ರಮದಡಿ ಹಲವಾರು ಆರೋಗ್ಯ ಕಾರ್ಯಕ್ರಮಗಳನ್ನು ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಅಭಿಯಾದನಡಿ 60 ಸಾವಿರಕ್ಕೂ ಹೆಚ್ಚು ಮಂದಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡುವ ಉದ್ದೇಶವನ್ನು ಇಟ್ಟುಕೊಳ್ಳಲಾಗಿದೆ.

ಆಯುಷ್ಮಾನ್ ಭವ: ಪ್ರಧಾನಿ ಮೋದಿ ಜನ್ಮದಿನವು ಆಚರಣೆಯಲ್ಲ, ಸಾರ್ವಜನಿಕ ಕಲ್ಯಾಣದ ದಿನ, ಈ ಬಾರಿ ಪ್ರಜೆಗಳಿಗೇನು ಸಿಗಲಿದೆ?
ನರೇಂದ್ರ ಮೋದಿImage Credit source: Sam Panthaky/AFP/Getty Images
Follow us
|

Updated on:Sep 16, 2023 | 1:39 PM

ಜಗ ಮೆಚ್ಚಿದ ನಾಯಕ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸೆ.17 ರಂದು 73ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಪ್ರಧಾನಿ ಮೋದಿಯವರ ಜನ್ಮದಿನವನ್ನು ಅಭಿಮಾನಿಗಳು ವಿಜ್ರಂಭನೆಯಿಂದ ಆಚರಿಸುವುದು ಒಂದಡೆಯಾದರೆ, ಸರ್ಕಾರ ಮಟ್ಟದಲ್ಲಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕ ಕಲ್ಯಾಣದ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರತಿವರ್ಷ ದೇಶವಾಸಿಗಳಿಗೆ ಏನಾದರೂ ವಿಶೇಷತೆ ಸಿಗುತ್ತದೆ. ಅದರಂತೆ ಮೋದಿ ಜನ್ಮದಿನಾಚರಣೆಯಿಂದ ಅ.2 ಗಾಂಧಿ ಜಯಂತಿವರೆಗೆ ಕೇಂದ್ರ ಸರ್ಕಾರವು ಆಯುಷ್ಮಾನ್ ಭವ ಅಭಿಯಾನವನ್ನು ಹಮ್ಮಿಕೊಂಡಿದ್ದು, 60 ಸಾವಿರಕ್ಕೂ ಹೆಚ್ಚು ಮಂದಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡುವ ಉದ್ದೇಶವನ್ನು ಹೊಂದಲಾಗಿದೆ.

ಮೋದಿ ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಆಯುಷ್ಮಾನ್ ಭವ ಅಭಿಯಾನದಡಿ ಉಳಿದ ಫಲಾನುಭವಿಗಳಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್​ಗಳನ್ನು ವಿತರಿಸಲಾಗುತ್ತಿದೆ. ಅಲ್ಲದೆ, ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ಸಾಪ್ತಾಹಿಕ ಆರೋಗ್ಯ ಮೇಳಗಳನ್ನು ನಡೆಸಲಾಗುತ್ತದೆ. ಇದರ ಜೊತೆಗೆ, ವಿವಿಧ ಆರೋಗ್ಯ ರಕ್ಷಣೆ ಯೋಜನೆಗಳು ಮತ್ತು ಸೇವೆಗಳ ಬಗ್ಗೆ ಅರಿವು ಹೆಚ್ಚಿಸಲು ಗ್ರಾಮ ಅಥವಾ ವಾರ್ಡ್ ಮಟ್ಟದಲ್ಲಿ ಆಯುಷ್ಮಾನ್ ಸಭೆ ನಡೆಸಲಾಗುತ್ತದೆ.

ಆಯುಷ್ಮಾನ್ ಭವ ಅಭಿಯಾನ

  • ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ವಿತರಣೆ
  • ದೇಶಾದ್ಯಂತ ಆನ್‌ಲೈನ್ ಅಂಗದಾನ ಪ್ರತಿಜ್ಞೆ ನೋಂದಣಿಯನ್ನು ಪ್ರಾರಂಭ
  • ಎಲ್ಲಾ ರಕ್ತನಿಧಿಗಳಿಂದ ಕನಿಷ್ಠ ಒಂದು ರಕ್ತದಾನ ಶಿಬಿರ ಆಯೋಜನೆ
  • ಪ್ರಾಥಮಿಕ, ಮಾಧ್ಯಮಿಕ ಮತ್ತು ತೃತೀಯ ಆರೋಗ್ಯ ರಕ್ಷಣಾ ಹಂತಗಳಲ್ಲಿ ಎಲ್ಲಾ ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿ ಸ್ವಚ್ಛತೆಗೆ ಚಾಲನೆ

ಈ ಹಿಂದೆ ಅಭಿಯಾನದ ಬಗ್ಗೆ ಮಾತನಾಡಿದ್ದ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ, ಸೆ.17 ರಿಂದ ಅ.2 ರವರೆಗೆ ಆರೋಗ್ಯ ಜಾಗೃತಿಗಾಗಿ ಹಲವು ಚಟುವಟಿಕೆಗಳನ್ನು, ಕಾರ್ಯಕ್ರಮಗಳನ್ನ ಆಯೋಜಿಸಲಾಗುತ್ತದೆ. ಆಯುಷ್ಮಾನ್ ಆಪ್ಕೆ ದ್ವಾರ 3.0 ಅಡಿ ಬರುವ ಆಯುಷ್ಮಾನ್ ಭವ ಅಭಿಯಾನವು ಬಾಕಿ ಉಳಿದಿರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಆಯುಷ್ಕಾನ್ ಕಾರ್ಡ್ ರಚನೆ ಮತ್ತು ವಿತರಣೆ ಮಾಡುವ ಗುರಿ ಹೊಂದಲಾಗಿದೆ ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿಯವರ ಜನ್ಮದಿನದಂದು ನಾಲ್ಕು ಪ್ರಮುಖ ಆರೋಗ್ಯ ಯೋಜನೆಗಳು ಪ್ರಾರಂಭ; ಇದರಿಂದ ನಿಮಗೇನು ಲಾಭ?

ಬಿಜೆಪಿ ಕೂಡ ರಾಷ್ಟ್ರಮಟ್ಟದಲ್ಲಿ ಮೋದಿ ಜನ್ಮದಿನಾಚರಣೆಯನ್ನು ಆಚರಿಸುತ್ತಿದೆ. ಬಿಜೆಪಿ ದೇಶಾದ್ಯಂತ ಸೇವಾ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಂಡು ವಿವಿಧ ಸೇವಾ ಕಾರ್ಯಗಳನ್ನು ನಡೆಸುವ ಮೂಲಕ ಜನರಿಗೆ

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:38 pm, Sat, 16 September 23

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ