Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ಆಂಧ್ರಪ್ರದೇಶದಲ್ಲಿ 300ಮೀ ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಬೃಹತ್ ರ‍್ಯಾಲಿ

ಶಾಖಪಟ್ಟಣಂನಲ್ಲಿ 300 ಮೀಟರ್ ಉದ್ದದ ರಾಷ್ಟ್ರಧ್ವಜವನ್ನು ಹಿಡಿದು ಭಾನುವಾರ ಬೃಹತ್ ಆಜಾದಿ ಕಾ ಅಮೃತ್ ಮಹೋತ್ಸವ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಹರ್ ಘರ್ ತಿರಂಗಾದ ಏಳನೇ ದಿನವನ್ನು ಗುರುತಿಸಿ, ವಿಕ್ಟರಿ ಅಟ್ ಸೀನಿಂದ ಪಾರ್ಕ್ ಹೋಟೆಲ್ ಜಂಕ್ಷನ್‌ವರೆಗೆ ನಡೆದ ರ್ಯಾಲಿಯಲ್ಲಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು

Azadi Ka Amrit Mahotsav: ಆಂಧ್ರಪ್ರದೇಶದಲ್ಲಿ 300ಮೀ ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಬೃಹತ್ ರ‍್ಯಾಲಿ
National Flag Rall
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 08, 2022 | 1:07 PM

ಆಂಧ್ರಪ್ರದೇಶ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 300 ಮೀಟರ್ ಉದ್ದದ ರಾಷ್ಟ್ರಧ್ವಜವನ್ನು ಹಿಡಿದು ಭಾನುವಾರ ಬೃಹತ್ ಆಜಾದಿ ಕಾ ಅಮೃತ್ ಮಹೋತ್ಸವ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಹರ್ ಘರ್ ತಿರಂಗಾದ ಏಳನೇ ದಿನವನ್ನು ಗುರುತಿಸಿ, ವಿಕ್ಟರಿ ಅಟ್ ಸೀನಿಂದ ಪಾರ್ಕ್ ಹೋಟೆಲ್ ಜಂಕ್ಷನ್‌ವರೆಗೆ ನಡೆದ ರ್ಯಾಲಿಯಲ್ಲಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು ಎಂದು ವರದಿಯಾಗಿದೆ. ಸುದ್ದಿ ಸಂಸ್ಥೆ ANI ಹಂಚಿಕೊಂಡ ಚಿತ್ರಗಳಲ್ಲಿ ಭಾಗವಹಿಸುವವರು ಮಾನವ ಸರಪಳಿಯನ್ನು ರಚಿಸುವುದನ್ನು ಕಾಣಬಹುದು.

ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಆಗಸ್ಟ್ 15 ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ವರೆಗೆ ಇಂತಹ ಹಲವಾರು ಕಾರ್ಯಕ್ರಮಗಳನ್ನು ದೇಶಾದ್ಯಂತ ನಡೆಸಲಾಗುತ್ತಿದೆ. ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 13 ಮತ್ತು 15 ರ ನಡುವೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಅಥವಾ ಪ್ರದರ್ಶಿಸುವ ಮೂಲಕ ಹರ್ ಘರ್ ತಿರಂಗಾ ಆಂದೋಲನವನ್ನು ಮಾಡುವಂತೆ ನಾಗರಿಕರಿಗೆ ಮನವಿ ಮಾಡಿದ್ದರು. ಜೊತೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮುಖಪುಟದ ಚಿತ್ರ (profile picture)ದಲ್ಲಿ ತಿರಂಗಾ ಧ್ವಜದ ಚಿತ್ರವನ್ನು ಹಾಕುವಂತೆ ಹೇಳಿದ್ದಾರೆ.

ಭಾರತದ 75ನೇ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಭಾಗದ ಆಚರಣೆಯನ್ನು ಪರಿಶೀಲಿಸಲು ಮೂರನೇ ರಾಷ್ಟ್ರೀಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಗಳು ಯುವಕರಿಗೆ ನೆಲದ ವಾಸ್ತವತೆಯನ್ನು ಪರಿಚಯಿಸುವ ಅವಕಾಶವಾಗಿದೆ ಎಂದು ಹೇಳಿದರು. ಆಜಾದಿ ಕಾ ಅಮೃತ್ ಮಹೋತ್ಸವದ ಯಶಸ್ಸಿಗೆ ದೇಶದ ಪ್ರತಿಯೊಬ್ಬ ನಾಗರಿಕನ ಕೊಡುಗೆ ಕಾರಣ, ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಮಿತಿಗಳು ಆಜಾದಿ ಕಾ ಅಮೃತ್ ಮಹೋತ್ಸವದ ಬಗ್ಗೆ ಜನಸಾಮಾನ್ಯರಿಗೆ ತಿಳಿಸಸಲು ಮತ್ತು ಅದರಲ್ಲಿ ಭಾಗವಹಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​