AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ತೆಲಂಗಾಣ ಸರ್ಕಾರದಿಂದ ಭರ್ಜರಿ ತಯಾರಿ

ಕೆ.ಕೇಶವ ರಾವ್ ನೇತೃತ್ವದ ಸಮಿತಿ ಹಾಗೂ ಇತರ ಉನ್ನತಾಧಿಕಾರಿಗಳೊಂದಿಗೆ ಪ್ರಗತಿ ಭವನದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿಗಳು, ಆಗಸ್ಟ್ 15 ರಂದು ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜಾರೋಹಣ ಹಾಕುವ ಮೂಲಕ ಈ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಯಶಸ್ವಿಗೊಳಿಸಲು ಎಲ್ಲ ಕ್ರಮಕೈಗೊಳ್ಳುವಂತೆ ಸೂಚಿಸಿದರು.

Azadi Ka Amrit Mahotsav: ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ತೆಲಂಗಾಣ ಸರ್ಕಾರದಿಂದ ಭರ್ಜರಿ ತಯಾರಿ
KCR
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 03, 2022 | 3:16 PM

Share

ತೆಲಂಗಾಣ: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಮಂಗಳವಾರದಂದು ಆಜಾದಿ ಕಾ ಅಮೃತ್ ಮಹೋತ್ಸವವನ್ನು ವೈಭವ ಮತ್ತು ಅದ್ಧೂರಿಯಾಗಿ ಆಚರಣೆ ಮಾಡಲು ಮತ್ತು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು, ಇದು ದೇಶಭಕ್ತಿಯ ಕಾರ್ಯಕ್ರಮ ಹಾಗಾಗಿ ಜನರು ಇದನ್ನು ಉತ್ಸಾಹದಿಂದ ಆಚರಣೆ ಮಾಡಬೇಕು ಎಂದಿದ್ದಾರೆ. ರಾಷ್ಟ್ರಧ್ವಜಗಳನ್ನು ಜನರಿಗೆ ಉಚಿತವಾಗಿ ವಿತರಿಸುವಂತೆ ಕೆಸಿಆರ್ ಸೂಚನೆ ನೀಡಿದರು . ಆಜಾದಿ ಅಮೃತ ಮಹೋತ್ಸವದ ಆಚರಣೆಯನ್ನು ರಾಜ್ಯ ಸರ್ಕಾರವು ಆಗಸ್ಟ್ 8 ರಿಂದ 22 ರವರೆಗೆ ಆಯೋಜಿಸಿದೆ.

ಕೆ.ಕೇಶವ ರಾವ್ ನೇತೃತ್ವದ ಸಮಿತಿ ಹಾಗೂ ಇತರ ಉನ್ನತಾಧಿಕಾರಿಗಳೊಂದಿಗೆ ಪ್ರಗತಿ ಭವನದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿಗಳು, ಆಗಸ್ಟ್ 15 ರಂದು ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜಾರೋಹಣ ಹಾಕುವ ಮೂಲಕ ಈ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಯಶಸ್ವಿಗೊಳಿಸಲು ಎಲ್ಲ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಆಗಸ್ಟ್ 9ರಿಂದ ಧ್ವಜ ವಿತರಣೆ ಆರಂಭಿಸುವಂತೆ ಸಿಎಂ ಕೆಸಿಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯಾರ್ಥಿಗಳು, ನೌಕರರು, ಉನ್ನತ ಅಧಿಕಾರಿಗಳು, ಜನಪ್ರತಿನಿಧಿಗಳು, ಯುವಕರು ಮತ್ತು ಇಡೀ ತೆಲಂಗಾಣ ಸಮುದಾಯವು ಸಂಭ್ರಮದಿಂದ ಆಚರಣೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

‘ಹೈದರಾಬಾದ್‌ನ ಎಚ್‌ಐಸಿಸಿಯಲ್ಲಿ ವಜ್ರೋತ್ಸವದ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ಸ್ವಾತಂತ್ರ್ಯ ಸ್ಪೂರ್ತಿ, ದೇಶಭಕ್ತಿ ರಾಷ್ಟ್ರೀಯ ಗೀತೆಗಳು ಮತ್ತು ಸೇನೆ ಮತ್ತು ಪೊಲೀಸ್ ಬ್ಯಾಂಡ್‌ಗಳೊಂದಿಗೆ ರಾಷ್ಟ್ರೀಯ ಸೆಲ್ಯೂಟ್‌ನೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಸಿಎಂ ಹೇಳಿದರು. ನಂತರ ಉದ್ಘಾಟನಾ ಭಾಷಣ, ಸಭಾಪತಿಗಳ ಭಾಷಣ ಮತ್ತು ಸಿಎಂ ಕೆಸಿಆರ್ ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ವಿಶೇಷ ಭಾಷಣ ಮತ್ತು ಧನ್ಯವಾದಗಳನ್ನು ಈ ಕಾರ್ಯಕ್ರಮದಲ್ಲಿ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಕರ್ನಾಟಕ 75 ಲಕ್ಷ ಮನೆಗಳ ಮೇಲೆ ರಾಷ್ಟ್ರಧ್ವಜ, ಎಲ್ಲೆಡೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ: ಬಿಜೆಪಿ ಸಂಕಲ್ಪ
Image
Narendra Modi: ಬದಲಾಯ್ತು ನರೇಂದ್ರ ಮೋದಿ ಪ್ರೊಫೈಲ್ ಚಿತ್ರ; ಎದ್ದು ಕಾಣುತ್ತಿದೆ ತ್ರಿವರ್ಣ ಧ್ವಜ
Image
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸರಣಿ ಸಭೆ-ಸುದ್ದಿಗೋಷ್ಟಿ : ಏನ್ ಹೇಳಿದ್ರು ಜೋಶಿ? ಇಲ್ಲಿದೆ ಡೀಟೈಲ್ಸ್
Image
ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಕಾರ್ಯದರ್ಶಿ ಕರೆ

ಸಭೆಯಲ್ಲಿ ತೆಗೆದುಕೊಂಡ ಇತರ ನಿರ್ಧಾರಗಳಲ್ಲಿ ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಆಸ್ಪತ್ರೆಗಳು ಮತ್ತು ಶಾಪಿಂಗ್ ಮಾಲ್‌ಗಳಂತಹ ಸಾರ್ವಜನಿಕ ಸ್ಥಳಗಳ ಅಲಂಕಾರಿಸಬೇಕು ಎಂದು ಹೇಳಿದ್ದಾರೆ. ಎಲ್ಲಾ ಸರ್ಕಾರಿ ಕಟ್ಟಡಗಳು ಮತ್ತು ಐತಿಹಾಸಿಕ ಕಟ್ಟಡಗಳು ವರ್ಣರಂಜಿತ ದೀಪಗಳಿಂದ ಬೆಳಗಲಿವೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!