AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಗತಿಯಲ್ಲಿ ಗರ್ಭಪಾತ: ಕೊಠಡಿಯೊಳಕ್ಕೆ ನುಗ್ಗಿ ಬಾಗಿಲು ಹಾಕಿಕೊಂಡ ಬಿ ಟೆಕ್ ವಿದ್ಯಾರ್ಥಿನಿ, ತೀವ್ರ ರಕ್ತಸ್ರಾವದಿಂದ ಸಾವು

Nellore: ತರಗತಿಯಲ್ಲಿಯೇ ಗರ್ಭಪಾತವಾಯಿತಾ? ಅಥವಾ YouTube ವೀಡಿಯೊ ಮೂಲಕ ತನಗೆ ತಾನೇ ಸ್ವಯಂ ಅಬಾರ್ಷನ್ ಮಾಡಿಕೊಂಡಳಾ? ಪೊಲೀಸರು ಈ ಬಗ್ಗೆ ವಿವರ ಸಂಗ್ರಹಿಸುತ್ತಿದ್ದಾರೆ.

ತರಗತಿಯಲ್ಲಿ ಗರ್ಭಪಾತ: ಕೊಠಡಿಯೊಳಕ್ಕೆ ನುಗ್ಗಿ ಬಾಗಿಲು ಹಾಕಿಕೊಂಡ ಬಿ ಟೆಕ್ ವಿದ್ಯಾರ್ಥಿನಿ, ತೀವ್ರ ರಕ್ತಸ್ರಾವದಿಂದ ಸಾವು
ತರಗತಿಯಲ್ಲಿಯೇ ಗರ್ಭಪಾತವಾಯಿತಾ?
Follow us
ಸಾಧು ಶ್ರೀನಾಥ್​
|

Updated on:Apr 15, 2023 | 1:33 PM

ನೆಲ್ಲೂರು: ನೆಲ್ಲೂರಿನಲ್ಲಿ (Nellore) ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಖಾಸಗಿ ಕಾಲೇಜಿನಲ್ಲಿ ಬಿ. ಟೆಕ್ ಓದುತ್ತಿದ್ದ ಯುವತಿ ಗರ್ಭಪಾತಕ್ಕೆ ಒಳಗಾಗಿ ತರಗತಿಯ ಕೊಠಡಿಯಲ್ಲೇ ಸಾವನ್ನಪ್ಪಿದ್ದಾಳೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಬಹಿರಂಗಪಡಿಸಿದ ವಿವರಗಳ ಪ್ರಕಾರ, ಮರ್ರಿಪಾಡು ಮಂಡಲದ 19 ವರ್ಷದ ಯುವತಿ ನೆಲ್ಲೂರಿನಲ್ಲಿ ಬಿ. ಟೆಕ್ ದ್ವಿತೀಯ ವರ್ಷ ಓದುತ್ತಿದ್ದಳು (B Tech student). ಇದೇ ತಿಂಗಳ 11ರಂದು ತನ್ನ ಸಹಪಾಠಿಗಳೆಲ್ಲ ಹೊರಗಡೆ ಇರುವಾಗ… ತಾನು ಒಬ್ಬಳು ಮಾತ್ರ ತರಗತಿಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾಳೆ. ಬಹಳ ಹೊತ್ತಾದರೂ ಹೊರಗೆ ಬಾರದೇ ಇದ್ದ ಕಾರಣ ಸ್ನೇಹಿತೆಯರು ಬಾಗಿಲು ಒಡೆದು ನೋಡಿದಾಗ ಯುವತಿ ತೀವ್ರ ರಕ್ತಸ್ರಾವವಾಗಿ ತರಗತಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ (Abortion). ಇನ್ನೂ ಆಘಾತಕಾರಿ ಸಂಗತಿಯೆಂದರೆ ಆ ವಿದ್ಯಾರ್ಥಿನಿಯ ಪಕ್ಕದಲ್ಲಿ 6 ತಿಂಗಳ ಭ್ರೂಣವಿತ್ತು!

ಕೂಡಲೇ ಸಹಪಾಠಿಗಳೆಲ್ಲ ಸೇರಿ ತಾಯಿ ಹಾಗೂ ಭ್ರೂಣವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಾಯಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ. ಮಾಹಿತಿ ಪಡೆದ ನೆಲ್ಲೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿವರ ಸಂಗ್ರಹಿಸಿದ್ದಾರೆ. ಬಾಲಕಿಯ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ನರ್ಸ್​ ನಿಗೂಢ ಹತ್ಯೆ! ಹಂತಕ ಆ ಒಂದು ಸುಳಿವು ನೀಡಿದ ತಕ್ಷಣ, ಚಾಣಾಕ್ಷ ಗದಗ ಪೊಲೀಸರು ಆರೋಪಿಯನ್ನು ಲಾಕ್​ ಮಾಡಿಯೇ ಬಿಟ್ರು!

ತರಗತಿಯಲ್ಲಿಯೇ ಗರ್ಭಪಾತವಾಯಿತಾ? ಅಥವಾ YouTube ವೀಡಿಯೊ ಮೂಲಕ ತನಗೆ ತಾನೇ ಸ್ವಯಂ ಅಬಾರ್ಷನ್ ಮಾಡಿಕೊಂಡಳಾ? ಪೊಲೀಸರು ಈ ಬಗ್ಗೆ ವಿವರ ಸಂಗ್ರಹಿಸುತ್ತಿದ್ದಾರೆ. ಯುವತಿಯ ಸೆಲ್‌ ಫೋನ್ ವಶಪಡಿಸಿಕೊಂಡ ಪೊಲೀಸರು, ಅದರಲ್ಲಿನ ಡೇಟಾ ಕಲೆಹಾಕಿದ್ದಾರೆ. ಅದರ ಆಧಾರದ ಮೇಲೆ ಆಕೆ ಅನಂತಸಾಗರ ಪ್ರದೇಶದ ಕಾರು ಚಾಲಕನೊಂದಿಗೆ ನಿಕಟ ಸಂಪರ್ಕ ಹೊಂದಿದ್ದಳು ಎಂದು ತಿಳಿದುಬಂದಿದೆ. ಮುಂದಿನ ತನಿಖೆ ನಡೆಯಬೇಕಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Sat, 15 April 23

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!