AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಗತಿಯಲ್ಲಿ ಗರ್ಭಪಾತ: ಕೊಠಡಿಯೊಳಕ್ಕೆ ನುಗ್ಗಿ ಬಾಗಿಲು ಹಾಕಿಕೊಂಡ ಬಿ ಟೆಕ್ ವಿದ್ಯಾರ್ಥಿನಿ, ತೀವ್ರ ರಕ್ತಸ್ರಾವದಿಂದ ಸಾವು

Nellore: ತರಗತಿಯಲ್ಲಿಯೇ ಗರ್ಭಪಾತವಾಯಿತಾ? ಅಥವಾ YouTube ವೀಡಿಯೊ ಮೂಲಕ ತನಗೆ ತಾನೇ ಸ್ವಯಂ ಅಬಾರ್ಷನ್ ಮಾಡಿಕೊಂಡಳಾ? ಪೊಲೀಸರು ಈ ಬಗ್ಗೆ ವಿವರ ಸಂಗ್ರಹಿಸುತ್ತಿದ್ದಾರೆ.

ತರಗತಿಯಲ್ಲಿ ಗರ್ಭಪಾತ: ಕೊಠಡಿಯೊಳಕ್ಕೆ ನುಗ್ಗಿ ಬಾಗಿಲು ಹಾಕಿಕೊಂಡ ಬಿ ಟೆಕ್ ವಿದ್ಯಾರ್ಥಿನಿ, ತೀವ್ರ ರಕ್ತಸ್ರಾವದಿಂದ ಸಾವು
ತರಗತಿಯಲ್ಲಿಯೇ ಗರ್ಭಪಾತವಾಯಿತಾ?
ಸಾಧು ಶ್ರೀನಾಥ್​
|

Updated on:Apr 15, 2023 | 1:33 PM

Share

ನೆಲ್ಲೂರು: ನೆಲ್ಲೂರಿನಲ್ಲಿ (Nellore) ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಖಾಸಗಿ ಕಾಲೇಜಿನಲ್ಲಿ ಬಿ. ಟೆಕ್ ಓದುತ್ತಿದ್ದ ಯುವತಿ ಗರ್ಭಪಾತಕ್ಕೆ ಒಳಗಾಗಿ ತರಗತಿಯ ಕೊಠಡಿಯಲ್ಲೇ ಸಾವನ್ನಪ್ಪಿದ್ದಾಳೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಬಹಿರಂಗಪಡಿಸಿದ ವಿವರಗಳ ಪ್ರಕಾರ, ಮರ್ರಿಪಾಡು ಮಂಡಲದ 19 ವರ್ಷದ ಯುವತಿ ನೆಲ್ಲೂರಿನಲ್ಲಿ ಬಿ. ಟೆಕ್ ದ್ವಿತೀಯ ವರ್ಷ ಓದುತ್ತಿದ್ದಳು (B Tech student). ಇದೇ ತಿಂಗಳ 11ರಂದು ತನ್ನ ಸಹಪಾಠಿಗಳೆಲ್ಲ ಹೊರಗಡೆ ಇರುವಾಗ… ತಾನು ಒಬ್ಬಳು ಮಾತ್ರ ತರಗತಿಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾಳೆ. ಬಹಳ ಹೊತ್ತಾದರೂ ಹೊರಗೆ ಬಾರದೇ ಇದ್ದ ಕಾರಣ ಸ್ನೇಹಿತೆಯರು ಬಾಗಿಲು ಒಡೆದು ನೋಡಿದಾಗ ಯುವತಿ ತೀವ್ರ ರಕ್ತಸ್ರಾವವಾಗಿ ತರಗತಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ (Abortion). ಇನ್ನೂ ಆಘಾತಕಾರಿ ಸಂಗತಿಯೆಂದರೆ ಆ ವಿದ್ಯಾರ್ಥಿನಿಯ ಪಕ್ಕದಲ್ಲಿ 6 ತಿಂಗಳ ಭ್ರೂಣವಿತ್ತು!

ಕೂಡಲೇ ಸಹಪಾಠಿಗಳೆಲ್ಲ ಸೇರಿ ತಾಯಿ ಹಾಗೂ ಭ್ರೂಣವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಾಯಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ. ಮಾಹಿತಿ ಪಡೆದ ನೆಲ್ಲೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿವರ ಸಂಗ್ರಹಿಸಿದ್ದಾರೆ. ಬಾಲಕಿಯ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ನರ್ಸ್​ ನಿಗೂಢ ಹತ್ಯೆ! ಹಂತಕ ಆ ಒಂದು ಸುಳಿವು ನೀಡಿದ ತಕ್ಷಣ, ಚಾಣಾಕ್ಷ ಗದಗ ಪೊಲೀಸರು ಆರೋಪಿಯನ್ನು ಲಾಕ್​ ಮಾಡಿಯೇ ಬಿಟ್ರು!

ತರಗತಿಯಲ್ಲಿಯೇ ಗರ್ಭಪಾತವಾಯಿತಾ? ಅಥವಾ YouTube ವೀಡಿಯೊ ಮೂಲಕ ತನಗೆ ತಾನೇ ಸ್ವಯಂ ಅಬಾರ್ಷನ್ ಮಾಡಿಕೊಂಡಳಾ? ಪೊಲೀಸರು ಈ ಬಗ್ಗೆ ವಿವರ ಸಂಗ್ರಹಿಸುತ್ತಿದ್ದಾರೆ. ಯುವತಿಯ ಸೆಲ್‌ ಫೋನ್ ವಶಪಡಿಸಿಕೊಂಡ ಪೊಲೀಸರು, ಅದರಲ್ಲಿನ ಡೇಟಾ ಕಲೆಹಾಕಿದ್ದಾರೆ. ಅದರ ಆಧಾರದ ಮೇಲೆ ಆಕೆ ಅನಂತಸಾಗರ ಪ್ರದೇಶದ ಕಾರು ಚಾಲಕನೊಂದಿಗೆ ನಿಕಟ ಸಂಪರ್ಕ ಹೊಂದಿದ್ದಳು ಎಂದು ತಿಳಿದುಬಂದಿದೆ. ಮುಂದಿನ ತನಿಖೆ ನಡೆಯಬೇಕಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Sat, 15 April 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ