AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baba Ramdev: ಮೊದಲು ನಮಾಜ್ ಓದುವುದು, ನಂತರ ಹಿಂದೂ ಹೆಣ್ಣುಮಕ್ಕಳನ್ನು ಅಪಹರಿಸುವುದು, ಭಯೋತ್ಪಾದನೆ ಸೃಷ್ಟಿಸುವುದು: ಬಾಬಾ ರಾಮ್​ದೇವ್

ಮೊದಲು ನಮಾಜ್ ಓದುವುದು ಆಮೇಲೆ ಹಿಂದೂ ಹೆಣ್ಣುಮಕ್ಕಳನ್ನು ಅಪಹರಿಸುವುದು, ಭಯೋತ್ಪಾದನೆ ಸೃಷ್ಟಿಸುವುದು ಇಷ್ಟೇ ತಿಳಿದಿದೆ ಎಂದು ಮುಸ್ಲಿಂ ಧರ್ಮದ ಬಗ್ಗೆ ಯೋಗಗುರು ಬಾಬಾ ರಾಮ್​ದೇವ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

Baba Ramdev: ಮೊದಲು ನಮಾಜ್ ಓದುವುದು, ನಂತರ ಹಿಂದೂ ಹೆಣ್ಣುಮಕ್ಕಳನ್ನು ಅಪಹರಿಸುವುದು, ಭಯೋತ್ಪಾದನೆ ಸೃಷ್ಟಿಸುವುದು: ಬಾಬಾ ರಾಮ್​ದೇವ್
ಯೋಗಗುರು ಬಾಬಾ ರಾಮ್​ದೇವ್
ನಯನಾ ರಾಜೀವ್
|

Updated on: Feb 03, 2023 | 3:42 PM

Share

ಮೊದಲು ನಮಾಜ್ ಓದುವುದು ಆಮೇಲೆ ಹಿಂದೂ ಹೆಣ್ಣುಮಕ್ಕಳನ್ನು ಅಪಹರಿಸುವುದು, ಭಯೋತ್ಪಾದನೆ ಸೃಷ್ಟಿಸುವುದು ಇಷ್ಟೇ ತಿಳಿದಿದೆ ಎಂದು ಮುಸ್ಲಿಂ ಧರ್ಮದ ಬಗ್ಗೆ ಯೋಗಗುರು ಬಾಬಾ ರಾಮ್​ದೇವ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯೋಗ ಗುರು, ಒಬ್ಬ ಮುಸಲ್ಮಾನ ಭಯೋತ್ಪಾದಕನಾಗಿದ್ದರೂ ಖಂಡಿತ ನಮಾಜ್ ಮಾಡುತ್ತಾನೆ ಎಂದು ಹೇಳಿದ್ದಾರೆ. ಅಂತಹವರಿಗೆ ಇಸ್ಲಾಮಿನ ಅರ್ಥವು ನಮಾಜ್ ತನಕ ಮಾತ್ರ ಅರ್ಥವಾಗುತ್ತದೆ. ನಮಾಜ್ ಅನ್ನು ಐದು ಬಾರಿ ಓದಿ ಮತ್ತು ನೀವು ಯಾವ ಪಾಪವನ್ನು ಮಾಡಬೇಕೆಂದು ಬಯಸುತ್ತೀರೋ ಅದನ್ನು ಮಾಡಿ ಎಂದು ವ್ಯಂಗ್ಯವಾಗಿ ನುಡಿದರು.

ನೀವು ಹಿಂದೂಗಳ ಹುಡುಗಿಯರನ್ನು ಅಪಹರಿಸಿಕೊಂಡು ಹೋಗುತ್ತೀರಿ ಅಥವಾ ಜಿಹಾದ್ ಹೆಸರಿನಲ್ಲಿ ಭಯೋತ್ಪಾದಕರಾಗುತ್ತೀರಿ, ನಿಮ್ಮ ಮನಸ್ಸಿಗೆ ಬಂದದ್ದನ್ನು ಮಾಡುತ್ತೀರಿ, ಆದರೆ, ಹಿಂದೂ ಧರ್ಮದಲ್ಲಿ ಹಾಗಲ್ಲ.

ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದಂತೆ ಬಾಬಾ ರಾಮದೇವ್ ಅವರು, ಚರ್ಚ್‌ಗೆ ಹೋಗಿ ಮೇಣದಬತ್ತಿಯನ್ನು ಬೆಳಗಿಸುವುದು ಕ್ರಿಶ್ಚಿಯನ್ ಧರ್ಮದ ತತ್ವವಾಗಿದೆ ಎಂದು ಹೇಳಿದರು. ಯೇಸುಕ್ರಿಸ್ತನ ಮುಂದೆ ನಿಂತರೆ, ಎಲ್ಲಾ ಪಾಪಗಳು ನಾಶವಾಗುತ್ತವೆ.

ಕೆಲವರು ಇಡೀ ಜಗತ್ತನ್ನು ಇಸ್ಲಾಂಗೆ ಪರಿವರ್ತಿಸುತ್ತಾರೆ ಎಂದು ಹೇಳುತ್ತಾರೆ. ಇಡೀ ಜಗತ್ತು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತನೆಯಾಗುತ್ತದೆ ಎಂದು ಕೆಲವರು ಹೇಳುತ್ತಾರೆ. ಇದನ್ನು ಮಾಡುವುದರಿಂದ ಏನಾಗುತ್ತದೆ ಎಂದು ನಾನು ಹೇಳುತ್ತೇನೆ.

ಅಂತಹ ಸ್ವರ್ಗ ನರಕಕ್ಕಿಂತ ಕೆಟ್ಟದು ಈ ಜನರ (ಮುಸ್ಲಿಮರು) ಪ್ರಕಾರ ಸ್ವರ್ಗ ಎಂದರೆ ಪೈಜಾಮ ಧರಿಸುವುದು, ನಿಮ್ಮ ಮೀಸೆಯನ್ನು ಕತ್ತರಿಸಿ, ಉದ್ದನೆಯ ಗಡ್ಡವನ್ನು ಬೆಳೆಸಿಕೊಳ್ಳಿ. ಟೋಪಿ ಮಾತ್ರ ಧರಿಸಿ. ಇದನ್ನೇ ಇಸ್ಲಾಂ ಹೇಳುತ್ತದೆ ಅಥವಾ ಕುರಾನ್ ಹೇಳುತ್ತದೆ. ಜನ್ನತ್ ಸಿಗಲಿ ಎಂದು ಸುಮ್ಮನೆ ಮಾಡುತ್ತಿದ್ದಾರೆ.

ಜಗಳ ಮತ್ತು ಪಾಪದಿಂದ ದೂರವಿರಬೇಕು ಎಂದು ಹಿಂದೂ ಧರ್ಮ ಕಲಿಸುತ್ತದೆರಾಮದೇವ್ ಅಂತಿಮವಾಗಿ ಹಿಂದೂ ಧರ್ಮದ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡಿದರು. ಬೆಳಗ್ಗೆ ಬ್ರಹ್ಮ ಮುಹೂರ್ತದಲ್ಲಿ ಏಳಬೇಕು ಎಂದು ಸನಾತನ ಧರ್ಮ ಹೇಳುತ್ತದೆ ಎಂದರು.

ಮುಂಜಾನೆ ದೇವರ ನಾಮಸ್ಮರಣೆ ಮಾಡಿ ಯೋಗಾಸನ ಮಾಡಬೇಕು. ಹಿಂದೂ ಧರ್ಮವು ನಮಗೆ ಜೀವನವನ್ನು ಹೇಗೆ ಉತ್ತಮ ರೀತಿಯಲ್ಲಿ ಬದುಕಬೇಕೆಂದು ಕಲಿಸುತ್ತದೆ.

ನಾವು ಸದ್ಗುಣವನ್ನು ಹೊಂದಿರಬೇಕು. ನಮ್ಮ ನಡವಳಿಕೆಯೂ ಹೀಗಿರಬೇಕು. ಜನರು ಹಿಂಸಾಚಾರ ಮತ್ತು ಸುಳ್ಳುಗಳಿಂದ ದೂರವಿರಬೇಕು. ವ್ಯಕ್ತಿಯು ಜಗಳ, ಪಾಪ ಮತ್ತು ಅಪರಾಧದಿಂದ ದೂರವಿರಬೇಕು ಎಂದು ಹಿಂದೂ ಧರ್ಮ ಬೋಧಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​