AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ಗೆ ಅಲೋಪತಿ ಚಿಕಿತ್ಸೆ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪ: ಬಾಬಾ ರಾಮ್​ದೇವ್ ವಿರುದ್ಧ ಎಫ್​ಐಆರ್ ದಾಖಲು

ಕೊವಿಡ್-19ರ ಚಿಕಿತ್ಸೆಗೆ ಬಳಸುವ ಔಷಧಿಗಳ ಬಗ್ಗೆ ಬಾಬಾ ರಾಮದೇವ್ ಆಧಾರರಹಿತರಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊವಿಡ್​ಗೆ ಅಲೋಪತಿ ಚಿಕಿತ್ಸೆ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪ: ಬಾಬಾ ರಾಮ್​ದೇವ್ ವಿರುದ್ಧ ಎಫ್​ಐಆರ್ ದಾಖಲು
ಯೋಗಗುರು ಬಾಬಾ ರಾಮ್​ದೇವ್ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 17, 2021 | 5:12 PM

ರಾಯಪುರ: ಅಲೊಪತಿ ವೈದ್ಯಕೀಯ ಪದ್ಧತಿ ಕುರಿತು ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಛತ್ತೀಸಗಡ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಕೊವಿಡ್-19ರ ಚಿಕಿತ್ಸೆಗೆ ಬಳಸುವ ಔಷಧಿಗಳ ಬಗ್ಗೆ ಬಾಬಾ ರಾಮದೇವ್ ಆಧಾರರಹಿತರಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್​ನ (Indian Medical Association – IMA) ಛತ್ತೀಸಗಡ ಘಟಕ ನೀಡಿದ ದೂರು ಆಧರಿಸಿ ರಾಮಕೃಷ್ಣ ಯಾದವ್ ಅಲಿಯಾಸ್ ಬಾಬಾ ರಾಮದೇವ್ ಅವರ ಮೇಲೆ ಬುಧವಾರ ಪ್ರಕರಣ ದಾಖಲಿಸಲಾಯಿತು ಎಂದು ರಾಯಪುರದ ಹಿರಿಯ ಪೊಲೀಸ್ ಅಧಿಕಾರಿ ಅಜಯ್ ಯಾದವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ರಾಮದೇವ್ ವಿರುದ್ಧ ಭಾರತೀಯ ದಂಡಸಂಹಿತೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ 188 (ಸರ್ಕಾರಿ ಆದೇಶ ಉಲ್ಲಂಘನೆ), 269 (ಸಾಂಕ್ರಾಮಿಕ ರೋಗ ಹರಡುವಂಥ ನಿರ್ಲಕ್ಷ್ಯ), 504 (ಶಾಂತಿಭಂಗಕ್ಕೆ ಉದ್ದೇಶಪೂರ್ವಕ ಯತ್ನ) ಮತ್ತು ಇತರ ವಿಧಿಗಳ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು. ಐಎಂಎ ಆಸ್ಪತ್ರೆ ಮಂಡಳಿಯ ಅಧ್ಯಕ್ಷ ಡಾ.ರಾಕೇಶ್​ ಗುಪ್ತ, ರಾಯಪುರ ಘಟಕದ ಅಧ್ಯಕ್ಷ ವಿಕಾಸ್ ಅಗರ್​ವಾಲ್ ಸೇರಿದಂತೆ ಇತರರು ದೂರುಪತ್ರಕ್ಕೆ ಸಹಿಹಾಕಿದ್ದಾರೆ.

ದೂರಿನ ಪ್ರಕಾರ ಕಳೆದ ಒಂದು ವರ್ಷದಿಂದ ರಾಮದೇವ್​ ಅಲೊಪತಿ ಔಷಧಿಗಳ ವಿರುದ್ಧ ತಪ್ಪು ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿದ್ದಾರೆ. ಭಾರತ ಸರ್ಕಾರ ಸರ್ಕಾರ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಕೊರೊನಾ ಸೋಂಕು ತಡೆಗೆ ಶ್ರಮಿಸುತ್ತಿರುವ ಇತರ ಮುಂಚೂಣಿ ಸಂಘಟನೆಗಳ ವಿರುದ್ಧ ಬಾಬಾ ರಾಮದೇವ್ ಆರೋಪಗಳನ್ನು ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಕೊವಿಡ್-19ರ ವಿರುದ್ಧ ಸರ್ಕಾರದ ಎಲ್ಲ ಘಟಕಗಳು, ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ಶ್ರಮಿಸುತ್ತಿರುವಾಗ ರಾಮದೇವ್​ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಪ್ರಸ್ತುತ ಚಾಲ್ತಿಯಲ್ಲಿರುವ ಮತ್ತು ಸರ್ಕಾರದ ಅಂಗೀಕಾರ ಸಿಕ್ಕಿರುವ ಚಿಕಿತ್ಸಾ ಪದ್ಧತಿಗಳ ಬಗ್ಗೆ ರಾಮದೇವ್​ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ದೂರು ಉಲ್ಲೇಖಿಸಿದೆ. ಅಲೋಪತಿ ಚಿಕಿತ್ಸಾ ಪದ್ಧತಿ ಕುರಿತು ಬಾಬಾ ರಾಮದೇವ್​ ನೀಡಿರುವ ಹೇಳಿಕೆಗಳು ಜನರನ್ನು ತಪ್ಪುದಾರಿಗೆ ಎಳೆಯುವಂತಿವೆ. ಮಾತ್ರವಲ್ಲದೆ ಜನರ ಜೀವವನ್ನು ಅಪಾಯಕ್ಕೀಡುಮಾಡುವಂತಿವೆ ಎಂದು ಆರೋಪಿಸಲಾಗಿದೆ.

ದೂರಿನ ಕುರಿತು ಪ್ರಾಥಮಿಕ ವಿಚಾರಣೆ ನಡೆಸಿದೆವು. ಬಾಬಾ ರಾಮದೇವ್ ಅವರ ಹಲವು ಹೇಳಿಕೆಗಳು ಛತ್ತೀಸಗಡ ಸರ್ಕಾರವು ಕಳೆದ ವರ್ಷ ಮಾರ್ಚ್​ 13ರಂದು ಬಿಡುಗಡೆ ಮಾಡಿರುವ ಅಧಿಸೂಚನೆಯನ್ನು ಉಲ್ಲಂಘಿಸಿರುವುದು ತಿಳಿದುಬಂತು. ಯಾವುದೇ ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮವು ಕೊವಿಡ್-19ರ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯ ಪೂರ್ವಾನುಮತಿಯಿಲ್ಲದೆ ಯಾವುದೇ ಮಾಹಿತಿ ಬಳಸುವಂತಿಲ್ಲ ಎಂದು ಸರ್ಕಾರದ ಅಧಿಸೂಚನೆ ತಿಳಿಸುತ್ತದೆ. ಕೊವಿಡ್-19ರ ಬಗ್ಗೆ ತಪ್ಪು ಮಾಹಿತಿ ಹರಡಬಾರದು ಎನ್ನುವ ಉದ್ದೇಶದಿಂದ ಛತ್ತೀಸಗಡ ಸರ್ಕಾರ ಈ ಆದೇಶ ಹೊರಡಿಸಿತ್ತು.

(Baba Ramdev to Face Enquiry of police FIR against Ramdev for spreading fake information on allopathy)

ಇದನ್ನೂ ಓದಿ: Ramdev ವೈದ್ಯರು ಭೂಮಿಯ ಮೇಲಿನ ದೇವದೂತರು, ಕೊವಿಡ್ ಲಸಿಕೆ ತೆಗೆದುಕೊಳ್ಳುವೆ: ಬಾಬಾ ರಾಮ್‌ದೇವ್

ಇದನ್ನೂ ಓದಿ: ಯೋಗ ಗುರು ಬಾಬಾ ರಾಮ್​ದೇವ್ ಹೇಳಿಕೆ ಖಂಡಿಸಿ ವೈದ್ಯರ ಪ್ರತಿಭಟನೆ

‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್