AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ಸಿದ್ದಿಕಿ ಭೀಕರ ಹತ್ಯೆ: 3ನೇ ಆರೋಪಿ ಪ್ರವೀಣ್ ಲೋನಕರ ಬಂಧಿಸಿದ ಮುಂಬೈ ಪೊಲೀಸ್​

Baba Siddique Shot Dead: ಮಹಾರಾಷ್ಟ್ರ ಚುನಾವಣೆ ಹೊತ್ತಲ್ಲೇ ಎನ್​ಸಿಪಿ ನಾಯಕ ಬಾಬಾ ಸಿದ್ದಿಕ್ಕಿ ಕಗ್ಗೊಲೆ ಬೆಚ್ಚಿಬೀಳುವಂತೆ ಮಾಡಿದೆ. ಬಾಬಾ ಸಿದ್ದಿಕ್ಕಿಯ ಮೇಲೆ ಗುಂಡಿನ ಸುರಿಮಳೆಯನ್ನೇ ಸುರಿಸೋ ಮೂಲಕ ಗ್ಯಾಂಗ್​ ಅಟ್ಟಹಾಸವನ್ನೇ ಮೆರೆದಿದೆ. ಸದ್ಯ ಪ್ರಕರಣದಲ್ಲಿ 3ನೇ ಆರೋಪಿ ಪ್ರವೀಣ್ ಲೋನಕರ ಎಂಬಾತನನ್ನು ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರು ಬಂಧಿಸಿದ್ದಾರೆ.

ಬಾಬಾ ಸಿದ್ದಿಕಿ ಭೀಕರ ಹತ್ಯೆ: 3ನೇ ಆರೋಪಿ ಪ್ರವೀಣ್ ಲೋನಕರ ಬಂಧಿಸಿದ ಮುಂಬೈ ಪೊಲೀಸ್​
ಬಾಬಾ ಸಿದ್ದಿಕಿ ಭೀಕರ ಹತ್ಯೆ: 3ನೇ ಆರೋಪಿ ಪ್ರವೀಣ್ ಲೋನಕರ ಬಂಧಿಸಿದ ಮುಂಬೈ ಪೊಲೀಸ್​
ಗಂಗಾಧರ​ ಬ. ಸಾಬೋಜಿ
|

Updated on:Oct 13, 2024 | 11:09 PM

Share

ಮುಂಬೈ, ಅಕ್ಟೋಬರ್​ 13: ಎನ್​ಸಿಪಿ ನಾಯಕ, ಮಾಜಿ ಮಿನಿಸ್ಟರ್‌ ಬಾಬಾ ಸಿದ್ದಿಕಿಯನ್ನ (Baba Siddique) ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ 3ನೇ ಆರೋಪಿ ಪ್ರವೀಣ್ ಲೋನಕರ ಎಂಬಾತನನ್ನು ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರು ಬಂಧಿಸಿದ್ದಾರೆ.

ಮಾಹಿತಿ ಪ್ರಕಾರ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಸುಬು ಲೋನಕರ ಪ್ರಮುಖ ಆರೋಪಿ ಎನ್ನಲಾಗುತ್ತಿದ್ದು, ಸದ್ಯ ತಲೆಮರೆಸಿಕೊಂಡಿದ್ದಾರೆ. ಸದ್ಯ ಈಗಾಗಲೇ ಬಂಧಿನಕೊಳ್ಳಗಾಗಿರುವ ಧರ್ಮರಾಜ್ ಕಶ್ಯಪ್ ಮತ್ತು ಶಿವ ಗೌತಮ್ ಕೆಲಸ ಮಾಡುತ್ತಿದ್ದ ಸ್ಕ್ರ್ಯಾಪ್ ಅಂಗಡಿಯ ಪಕ್ಕದಲ್ಲೇ ಪ್ರವೀಣ್ ಲೋನಕರ ಕೂಡ ಸ್ವಂತ ಕಿರಾಣಿ ಅಂಗಡಿ ಹೊಂದಿದ್ದರು.

ಇದನ್ನೂ ಓದಿ: Baba Siddique: ಬಾಬಾ ಸಿದ್ದಿಕಿ ಕೊಲೆ ಹಿಂದಿದೆಯಾ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್ ಕೈವಾಡ?

ಪ್ರಕರಣದಲ್ಲಿ ಇನ್ನು ಮೂರನೇ ಆರೋಪಿಯ ಗುರುತು ಪತ್ತೆ ಮಾಡಲಾಗಿದ್ದು, ನಾಲ್ಕನೇ ಆರೋಪಿಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ. ಇನ್ನು ಪೊಲೀಸರ ತನಿಖೆಯಲ್ಲಿ, ಆರೋಪಿಗಳು ಸುಪಾರಿ ಪಡೆದೇ ಹತ್ಯೆ ಮಾಡಿರುವುದು ಬಯಲಾಗಿದೆ.

ಇದನ್ನೂ ಓದಿ: Baba Siddique: ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿಗೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹತ್ಯೆ

ಬಾಬಾ ಸಿದ್ದಿಕಿಯ ಕೊಲೆಗೆ ಇದೀಗ ದೊಡ್ಡ ಟ್ವಿಸ್ಟೇ ಸಿಕ್ಕಿದೆ. ನಾವೇ ಕೊಲೆ ಮಾಡಿರೋದು ಅಂತಾ ಲಾರೆನ್ಸ್ ಬಿಣ್ಣೋಯ್​ ಗ್ಯಾಂಗ್ ಹೊಣೆ ಹೊತ್ತುಕೊಂಡಿದೆ. ಬಾಬಾ ಸಿದ್ದಿಕಿಯ ಕೊಲೆಯಲ್ಲಿ ಭಾಗಿಯಾಗಿರೋದಾಗಿ ಬಿಷ್ಣೋಯ್​ ಗ್ಯಾಂಗ್ ಒಪ್ಪಿಕೊಂಡಿದೆ. ಯಾಕಂದ್ರೆ 15 ದಿನಗಳ ಹಿಂದೆ ಸಿದ್ದಿಕೆಗೆ ಬೆದರಿಕೆಯೊಂದು ಬಂದಿತ್ತು ಅಂತಾ ಪೊಲೀಸ್​ ಮೂಲಗಳು ತಿಳಿಸಿವೆ. ಅಲ್ದೇ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ತುಂಬಾ ಆಪ್ತರಾಗಿದ್ದರು. ಹೀಗಾಗಿ ಸಲ್ಮಾನ್​ ಖಾನ್​ಗೆ ಪದೇಪದೆ ಜೀವ ಬೆದರಿಕೆ ಹಾಕ್ತಿರೋ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದಲೇ ಹತ್ಯೆ ಮಾಡಿರೋದು ಬಯಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:58 pm, Sun, 13 October 24

Follow Us
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು