AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ಸಿದ್ದಿಕಿ ಭೀಕರ ಹತ್ಯೆ: 3ನೇ ಆರೋಪಿ ಪ್ರವೀಣ್ ಲೋನಕರ ಬಂಧಿಸಿದ ಮುಂಬೈ ಪೊಲೀಸ್​

Baba Siddique Shot Dead: ಮಹಾರಾಷ್ಟ್ರ ಚುನಾವಣೆ ಹೊತ್ತಲ್ಲೇ ಎನ್​ಸಿಪಿ ನಾಯಕ ಬಾಬಾ ಸಿದ್ದಿಕ್ಕಿ ಕಗ್ಗೊಲೆ ಬೆಚ್ಚಿಬೀಳುವಂತೆ ಮಾಡಿದೆ. ಬಾಬಾ ಸಿದ್ದಿಕ್ಕಿಯ ಮೇಲೆ ಗುಂಡಿನ ಸುರಿಮಳೆಯನ್ನೇ ಸುರಿಸೋ ಮೂಲಕ ಗ್ಯಾಂಗ್​ ಅಟ್ಟಹಾಸವನ್ನೇ ಮೆರೆದಿದೆ. ಸದ್ಯ ಪ್ರಕರಣದಲ್ಲಿ 3ನೇ ಆರೋಪಿ ಪ್ರವೀಣ್ ಲೋನಕರ ಎಂಬಾತನನ್ನು ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರು ಬಂಧಿಸಿದ್ದಾರೆ.

ಬಾಬಾ ಸಿದ್ದಿಕಿ ಭೀಕರ ಹತ್ಯೆ: 3ನೇ ಆರೋಪಿ ಪ್ರವೀಣ್ ಲೋನಕರ ಬಂಧಿಸಿದ ಮುಂಬೈ ಪೊಲೀಸ್​
ಬಾಬಾ ಸಿದ್ದಿಕಿ ಭೀಕರ ಹತ್ಯೆ: 3ನೇ ಆರೋಪಿ ಪ್ರವೀಣ್ ಲೋನಕರ ಬಂಧಿಸಿದ ಮುಂಬೈ ಪೊಲೀಸ್​
ಗಂಗಾಧರ​ ಬ. ಸಾಬೋಜಿ
|

Updated on:Oct 13, 2024 | 11:09 PM

Share

ಮುಂಬೈ, ಅಕ್ಟೋಬರ್​ 13: ಎನ್​ಸಿಪಿ ನಾಯಕ, ಮಾಜಿ ಮಿನಿಸ್ಟರ್‌ ಬಾಬಾ ಸಿದ್ದಿಕಿಯನ್ನ (Baba Siddique) ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ 3ನೇ ಆರೋಪಿ ಪ್ರವೀಣ್ ಲೋನಕರ ಎಂಬಾತನನ್ನು ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರು ಬಂಧಿಸಿದ್ದಾರೆ.

ಮಾಹಿತಿ ಪ್ರಕಾರ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಸುಬು ಲೋನಕರ ಪ್ರಮುಖ ಆರೋಪಿ ಎನ್ನಲಾಗುತ್ತಿದ್ದು, ಸದ್ಯ ತಲೆಮರೆಸಿಕೊಂಡಿದ್ದಾರೆ. ಸದ್ಯ ಈಗಾಗಲೇ ಬಂಧಿನಕೊಳ್ಳಗಾಗಿರುವ ಧರ್ಮರಾಜ್ ಕಶ್ಯಪ್ ಮತ್ತು ಶಿವ ಗೌತಮ್ ಕೆಲಸ ಮಾಡುತ್ತಿದ್ದ ಸ್ಕ್ರ್ಯಾಪ್ ಅಂಗಡಿಯ ಪಕ್ಕದಲ್ಲೇ ಪ್ರವೀಣ್ ಲೋನಕರ ಕೂಡ ಸ್ವಂತ ಕಿರಾಣಿ ಅಂಗಡಿ ಹೊಂದಿದ್ದರು.

ಇದನ್ನೂ ಓದಿ: Baba Siddique: ಬಾಬಾ ಸಿದ್ದಿಕಿ ಕೊಲೆ ಹಿಂದಿದೆಯಾ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್ ಕೈವಾಡ?

ಪ್ರಕರಣದಲ್ಲಿ ಇನ್ನು ಮೂರನೇ ಆರೋಪಿಯ ಗುರುತು ಪತ್ತೆ ಮಾಡಲಾಗಿದ್ದು, ನಾಲ್ಕನೇ ಆರೋಪಿಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ. ಇನ್ನು ಪೊಲೀಸರ ತನಿಖೆಯಲ್ಲಿ, ಆರೋಪಿಗಳು ಸುಪಾರಿ ಪಡೆದೇ ಹತ್ಯೆ ಮಾಡಿರುವುದು ಬಯಲಾಗಿದೆ.

ಇದನ್ನೂ ಓದಿ: Baba Siddique: ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿಗೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹತ್ಯೆ

ಬಾಬಾ ಸಿದ್ದಿಕಿಯ ಕೊಲೆಗೆ ಇದೀಗ ದೊಡ್ಡ ಟ್ವಿಸ್ಟೇ ಸಿಕ್ಕಿದೆ. ನಾವೇ ಕೊಲೆ ಮಾಡಿರೋದು ಅಂತಾ ಲಾರೆನ್ಸ್ ಬಿಣ್ಣೋಯ್​ ಗ್ಯಾಂಗ್ ಹೊಣೆ ಹೊತ್ತುಕೊಂಡಿದೆ. ಬಾಬಾ ಸಿದ್ದಿಕಿಯ ಕೊಲೆಯಲ್ಲಿ ಭಾಗಿಯಾಗಿರೋದಾಗಿ ಬಿಷ್ಣೋಯ್​ ಗ್ಯಾಂಗ್ ಒಪ್ಪಿಕೊಂಡಿದೆ. ಯಾಕಂದ್ರೆ 15 ದಿನಗಳ ಹಿಂದೆ ಸಿದ್ದಿಕೆಗೆ ಬೆದರಿಕೆಯೊಂದು ಬಂದಿತ್ತು ಅಂತಾ ಪೊಲೀಸ್​ ಮೂಲಗಳು ತಿಳಿಸಿವೆ. ಅಲ್ದೇ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ತುಂಬಾ ಆಪ್ತರಾಗಿದ್ದರು. ಹೀಗಾಗಿ ಸಲ್ಮಾನ್​ ಖಾನ್​ಗೆ ಪದೇಪದೆ ಜೀವ ಬೆದರಿಕೆ ಹಾಕ್ತಿರೋ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದಲೇ ಹತ್ಯೆ ಮಾಡಿರೋದು ಬಯಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:58 pm, Sun, 13 October 24

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ