AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ಸಿದ್ದಿಕಿ ಹತ್ಯೆ ಆರೋಪಿ ಅಪ್ರಾಪ್ತನಲ್ಲ, ಸತ್ಯ ಹೊರಬಿದ್ದಿದ್ಹೇಗೆ?

ಮುಂಬೈನಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿ  ಧರ್ಮರಾಜ್ ಕಶ್ಯಪ್ ಅಪ್ರಾಪ್ತನಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಮೂಳೆ ಪರೀಕ್ಷೆ(Bone Ossification Test)ಯಲ್ಲಿ ಆತ ಅಪ್ರಾಪ್ತನಲ್ಲ ಎಂಬುದು ದೃಢಪಟ್ಟಿದೆ. ನ್ಯಾಯಾಲಯದ ಆದೇಶದ ಮೇರೆಗೆ ಈ ಪರೀಕ್ಷೆ ನಡೆಸಲಾಗಿದ್ದು, ಭಾನುವಾರ ತಡರಾತ್ರಿ ವರದಿ ಹೊರಬಿದ್ದಿದೆ.

ಬಾಬಾ ಸಿದ್ದಿಕಿ ಹತ್ಯೆ ಆರೋಪಿ ಅಪ್ರಾಪ್ತನಲ್ಲ, ಸತ್ಯ ಹೊರಬಿದ್ದಿದ್ಹೇಗೆ?
ಧರ್ಮರಾಜ್ Image Credit source: India Today
ನಯನಾ ರಾಜೀವ್
|

Updated on: Oct 14, 2024 | 10:49 AM

Share

ಮುಂಬೈನಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿ  ಧರ್ಮರಾಜ್ ಕಶ್ಯಪ್ ಅಪ್ರಾಪ್ತನಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಮೂಳೆ ಪರೀಕ್ಷೆ(Bone Ossification Test)ಯಲ್ಲಿ ಆತ ಅಪ್ರಾಪ್ತನಲ್ಲ ಎಂಬುದು ದೃಢಪಟ್ಟಿದೆ. ನ್ಯಾಯಾಲಯದ ಆದೇಶದ ಮೇರೆಗೆ ಈ ಪರೀಕ್ಷೆ ನಡೆಸಲಾಗಿದ್ದು, ಭಾನುವಾರ ತಡರಾತ್ರಿ ವರದಿ ಹೊರಬಿದ್ದಿದೆ.

ನ್ಯಾಯಾಲಯಕ್ಕೆ ಹಾಜರಾದಾಗ, ಧರ್ಮರಾಜ್ ಕಶ್ಯಪ್ ತನ್ನ ವಕೀಲರ ಮೂಲಕ ತಾನು ಅಪ್ರಾಪ್ತ ಎಂದು ಹೇಳಿಕೊಂಡಿದ್ದ. ಆತನಿಗೆ 19 ವರ್ಷ, ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಲು, ನ್ಯಾಯಾಲಯವು ಧರ್ಮರಾಜ್​ನ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿತು.

ಭಾನುವಾರವೇ ಧರ್ಮರಾಜ್ ಪರೀಕ್ಷೆ ನಡೆದಿದ್ದು, ಅದರ ವರದಿಯೂ ತಡರಾತ್ರಿ ಬಂದಿತ್ತು. ಧರ್ಮರಾಜ್ ಅವರನ್ನು ಅಕ್ಟೋಬರ್ 21ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇವರೊಂದಿಗೆ ಗುರ್ಮೈಲ್ ಸಿಂಗ್ ಕೂಡ ಇದೇ 21ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.

ಮತ್ತಷ್ಟು ಓದಿ: ಬಾಬಾ ಸಿದ್ದಿಕಿ ಭೀಕರ ಹತ್ಯೆ: 3ನೇ ಆರೋಪಿ ಪ್ರವೀಣ್ ಲೋನಕರ ಬಂಧಿಸಿದ ಮುಂಬೈ ಪೊಲೀಸ್​

ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರನ್ನು ಶನಿವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಭದ್ರತೆಗೆ ನಿಯೋಜನೆಗೊಂಡಿದ್ದ ಮೂವರು ಕಾನ್‌ಸ್ಟೆಬಲ್‌ಗಳು ಇಬ್ಬರು ಶೂಟರ್‌ಗಳನ್ನು ಸ್ಥಳದಲ್ಲೇ ಹಿಡಿದಿದ್ದರು. ಹರಿಯಾಣ ನಿವಾಸಿ ಗುರ್ಮೆಲ್ ಬಲ್ಜೀತ್ ಸಿಂಗ್ (23) ಮತ್ತು ಉತ್ತರ ಪ್ರದೇಶದ ಧರ್ಮರಾಜ್ ರಾಜೇಶ್ ಕಶ್ಯಪ್ (19) ಎಂದು ಗುರುತಿಸಲಾಗಿದೆ.

ಮೂರನೇ ಆರೋಪಿ ಪ್ರವೀಣ್ ಲೋಂಕರ್‌ನನ್ನು ಭಾನುವಾರ ರಾತ್ರಿ ಪುಣೆಯಲ್ಲಿ ಬಂಧಿಸಲಾಗಿದೆ. ಪೊಲೀಸರು ಶುಭಂ ಲೋಂಕರ್, ಶಿವಕುಮಾರ್ ಗೌತಮ್ ಮತ್ತು ಜೀಶನ್ ಅಖ್ತರ್ ಅವರನ್ನು ಹುಡುಕುತ್ತಿದ್ದಾರೆ. ಪ್ರವೀಣ್ ಮತ್ತು ಶುಭಂ ಲೋಂಕರ್ ಸಹೋದರರು. ಲಾರೆನ್ಸ್ ಬಿಷ್ಣೋಯ್ ಮತ್ತು ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಟ್ಯಾಗ್ ಮಾಡುವ ಮೂಲಕ ಶುಭಂ ಲೋಂಕರ್ ಹೆಸರಿನಲ್ಲಿ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಬರೆದು ಬಾಬಾ ಸಿದ್ದಿಕಿ ಹತ್ಯೆಯ ಹೊಣೆಹೊತ್ತಿದ್ದಾರೆ.

ಮೂಲಗಳ ಪ್ರಕಾರ, ಪ್ರವೀಣ್ ಮತ್ತು ಶುಭಂ ಪ್ರಮುಖ ಸಂಚುಕೋರರು ಎಂದು ಪರಿಗಣಿಸಲಾಗಿದೆ. ಇಬ್ಬರೂ ಉಳಿದ 4 ಆರೋಪಿಗಳನ್ನು ಸೇರಿಸಿಕೊಂಡಿದ್ದರು. ಬಾಬಾ ಸಿದ್ದಿಕಿ ಮೇಲೆ ಆರು ಗುಂಡುಗಳನ್ನು ಹಾರಿಸಲಾಗಿತ್ತು ಅದರಲ್ಲಿ ಮೂರು ಗುಂಡುಗಳು ಅವರಿಗೆ ತಗುಲಿದ್ದವು.

ಗಾಯಗೊಂಡ ಸ್ಥಿತಿಯಲ್ಲಿ ಬಾಬಾ ಸಿದ್ದಿಕಿಯನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಪ್ರಾಥಮಿಕ ಪರೀಕ್ಷೆಯ ನಂತರ ವೈದ್ಯರು ಅವರು ಸಾವನ್ನಪ್ಪಿದ್ದಾರೆ.ಲಿವುಡ್ ಇಂಡಸ್ಟ್ರಿಯ ಅನೇಕ ಪ್ರಸಿದ್ಧ ವ್ಯಕ್ತಿಗಳು ಲೀಲಾವತಿ ಆಸ್ಪತ್ರೆಗೆ ಭೇಟಿ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ