ಅಯೋಧ್ಯೆ ಹೋರಾಟದ ಬಗ್ಗೆ ಹೆಮ್ಮೆ ಇದೆ; ನೇಣಿಗೇರಲು ಬಯಸುತ್ತೇನೆ: ಉಮಾಭಾರತಿ

ಲಖನೌ: ಇನ್ನೇನು ಕೆಲವೇ ಕ್ಷಣಗಳಲ್ಲಿ ಮಹತ್ವದ, ದೂರಗಾಮಿ ಪರಿಣಾಮ ಬೀರಬಹುದಾದಂತಹ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ತೀರ್ಪು ಪ್ರಕಟವಾಗಲಿದೆ. ಲಖನೌನ ಹೈಕೋರ್ಟ್ ಹಳೆಯ ಕಟ್ಟಡದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್‌ ತೀರ್ಪು ನೀಡಲಿದ್ದಾರೆ. ಈ ಮಧ್ಯೆ, ಪ್ರಕರಣದ ಪ್ರಮುಖ ಆರೋಪಿಯಲ್ಲಿ ಒಬ್ಬರಾದ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಪ್ರತಿಕ್ರಿಯೆ ನೀಡಿದ್ದು, ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪು ಏನಾಗುತ್ತೆ ಗೊತ್ತಿಲ್ಲ. ಆದ್ರೆ ಈ ಪ್ರಕರಣದಲ್ಲಿ ಜಾಮೀನು ಪಡೆದರೆ […]

ಅಯೋಧ್ಯೆ ಹೋರಾಟದ ಬಗ್ಗೆ ಹೆಮ್ಮೆ ಇದೆ;  ನೇಣಿಗೇರಲು ಬಯಸುತ್ತೇನೆ: ಉಮಾಭಾರತಿ
ಸಾಧು ಶ್ರೀನಾಥ್​

Updated on: Sep 30, 2020 | 9:58 AM

ಲಖನೌ: ಇನ್ನೇನು ಕೆಲವೇ ಕ್ಷಣಗಳಲ್ಲಿ ಮಹತ್ವದ, ದೂರಗಾಮಿ ಪರಿಣಾಮ ಬೀರಬಹುದಾದಂತಹ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ತೀರ್ಪು ಪ್ರಕಟವಾಗಲಿದೆ. ಲಖನೌನ ಹೈಕೋರ್ಟ್ ಹಳೆಯ ಕಟ್ಟಡದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್‌ ತೀರ್ಪು ನೀಡಲಿದ್ದಾರೆ.

ಈ ಮಧ್ಯೆ, ಪ್ರಕರಣದ ಪ್ರಮುಖ ಆರೋಪಿಯಲ್ಲಿ ಒಬ್ಬರಾದ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಪ್ರತಿಕ್ರಿಯೆ ನೀಡಿದ್ದು, ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪು ಏನಾಗುತ್ತೆ ಗೊತ್ತಿಲ್ಲ. ಆದ್ರೆ ಈ ಪ್ರಕರಣದಲ್ಲಿ ಜಾಮೀನು ಪಡೆದರೆ ನನ್ನ ಘನತೆಗೆ ಧಕ್ಕೆ. ಹೀಗಾಗಿ ಜಾಮೀನಿನ ಬದಲು ನಾನು ನೇಣಿಗೇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಈ ಸಂಬಂಧ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾಗೆ ಉಮಾಭಾರತಿ ಪತ್ರ ಬರೆದಿದ್ದಾರೆ. ಪ್ರಸ್ತುತ ಉಮಾಭಾರತಿ ಋಷಿಕೇಶದ ಏಮ್ಸ್‌ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬಾಬ್ರಿ ಮಸೀದಿ ಧ್ವಂಸ ಕೇಸ್​ನ ಫೈನಲ್ ತೀರ್ಪು!

Published On - 9:46 am, Wed, 30 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us