ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಬಾಬ್ರಿ ಮಸೀದಿ ಪರ ಹೋರಾಟಗಾರ ಇಕ್ಬಾಲ್​ ಅನ್ಸಾರಿಗೆ ಆಮಂತ್ರಣ

ಅಯೋಧ್ಯೆ( Ayodhya)ಯಲ್ಲಿ ಇದೇ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ(Ram Mandir) ಉದ್ಘಾಟನಾ ಕಾರ್ಯಕ್ರಮಕ್ಕೆ ಬಾಬ್ರಿ ಮಸೀದಿ(Babri Mosque) ಪರ ಹೋರಾಟಗಾರ ಇಕ್ಬಾಲ್ ಅನ್ಸಾರಿ(Iqbal Ansari)ಗೆ ಆಮಂತ್ರಣ ನೀಡಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಆಹ್ವಾನ ನೀಡಲಾಗಿದೆ. 2020ರ ಆಗಸ್ಟ್​ 5ರಂದು ನಡೆದ ರಾಮಮಂದಿರದ ‘ಭೂಮಿಪೂಜೆ’ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನವನ್ನು ನೀಡಲಾಗಿತ್ತು.

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಬಾಬ್ರಿ ಮಸೀದಿ ಪರ ಹೋರಾಟಗಾರ ಇಕ್ಬಾಲ್​ ಅನ್ಸಾರಿಗೆ ಆಮಂತ್ರಣ
ಇಕ್ಬಾಲ್ ಅನ್ಸಾರಿ Image Credit source: Hindustan Times
Follow us
|

Updated on:Jan 05, 2024 | 3:24 PM

ಅಯೋಧ್ಯೆ( Ayodhya)ಯಲ್ಲಿ ಇದೇ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ(Ram Mandir) ಉದ್ಘಾಟನಾ ಕಾರ್ಯಕ್ರಮಕ್ಕೆ ಬಾಬ್ರಿ ಮಸೀದಿ(Babri Mosque) ಪರ ಹೋರಾಟಗಾರ ಇಕ್ಬಾಲ್ ಅನ್ಸಾರಿ(Iqbal Ansari)ಗೆ ಆಮಂತ್ರಣ ನೀಡಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಆಹ್ವಾನ ನೀಡಲಾಗಿದೆ. 2020ರ ಆಗಸ್ಟ್​ 5ರಂದು ನಡೆದ ರಾಮಮಂದಿರದ ‘ಭೂಮಿಪೂಜೆ’ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನವನ್ನು ನೀಡಲಾಗಿತ್ತು.

ಡಿಸೆಂಬರ್ 30 ರಂದು ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸರತಿ ಸಾಲಿನಲ್ಲಿ ನಿಲ್ಲಿಸಿ ಸ್ವಾಗತಿಸಿದ ನೂರಾರು ಜನರಲ್ಲಿ ಅನ್ಸಾರಿ ಕೂಡ ಒಬ್ಬರು. ಒಂದು ವಿಡಿಯೋದಲ್ಲಿ ಇಕ್ಬಾಲ್ ಪ್ರಧಾನಿಯವರ ಬೆಂಗಾವಲು ಪಡೆಯ ಮೇಲೆ ಪುಷ್ಪವೃಷ್ಟಿ ಮಾಡುವುದನ್ನು ಸಹ ನೋಡಬಹುದಾಗಿದೆ.

ಇಕ್ಬಾಲ್ ಅವರ ತಂದೆ, ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಹಿರಿಯ ದಾವೆದಾರ ಹಾಶಿಮ್ ಅನ್ಸಾರಿ ಅವರು 2016 ರಲ್ಲಿ 95 ನೇ ವಯಸ್ಸಿನಲ್ಲಿ ನಿಧನರಾದರು, ನಂತರ ಇಕ್ಬಾಲ್ ನ್ಯಾಯಾಲಯದಲ್ಲಿ ಪ್ರಕರಣವನ್ನು ಮುಂದುವರೆಸಲು ಪ್ರಾರಂಭಿಸಿದರು.

ಮತ್ತಷ್ಟು ಓದಿ: Video Viral: ಮೋದಿಯನ್ನು ಅಯೋಧ್ಯೆಗೆ ಸ್ವಾಗತಿಸಿದ ಬಾಬರಿ ಮಸೀದಿಯ ಮುಖ್ಯ ಅರ್ಜಿದಾರ ಇಕ್ಬಾಲ್​​​​ ಅನ್ಸಾರಿ

2019ರ ನವೆಂಬರ್ 9ರಂದು ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ಸರ್ಕಾರಿ ಟ್ರಸ್ಟ್‌ನಿಂದ ರಾಮಮಂದಿರ ನಿರ್ಮಾಣವನ್ನು ಸುಪ್ರೀಂ ಕೋರ್ಟ್ ಬೆಂಬಲಿಸಿತು ಮತ್ತು ಹಿಂದೂ ಪವಿತ್ರ ಪಟ್ಟಣದಲ್ಲಿ ಮಸೀದಿಗಾಗಿ ಪರ್ಯಾಯ ಐದು ಎಕರೆ ಜಾಗವನ್ನು ನೀಡಬೇಕೆಂದು ತೀರ್ಪು ನೀಡಿತು.

ಜನವರಿ 22ರಂದು ಕ್ರಿಕೆಟಿಗರು ಮತ್ತು ಬಾಲಿವುಡ್ ತಾರೆಯರು ಸೇರಿದಂತೆ 7,000 ಅತಿಥಿಗಳು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾದ ರಾಮ ಮಂದಿರ ಸಂಕೀರ್ಣವು 380 ಅಡಿ ಉದ್ದ (ಪೂರ್ವ-ಪಶ್ಚಿಮ ದಿಕ್ಕು), 250 ಅಡಿ ಅಗಲ ಮತ್ತು 161 ಅಡಿ ಎತ್ತರ ಇರಲಿದೆ. ದೇವಾಲಯದ ಪ್ರತಿಯೊಂದು ಮಹಡಿಯು 20 ಅಡಿ ಎತ್ತರವಿದ್ದು ಒಟ್ಟು 392 ಕಂಬಗಳು ಮತ್ತು 44 ದ್ವಾರಗಳನ್ನು ಹೊಂದಿರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:06 pm, Fri, 5 January 24

ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​