AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಹಂದಿಗಾಗಿ ಇಟ್ಟಿದ್ದ ದೇಶಿ ಬಾಂಬ್ ಕಚ್ಚಿ ಆನೆ ಮರಿ ದಾರುಣ ಸಾವು

ತಮಿಳುನಾಡಿನ ಈರೋಡ್‌ನಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಆನೆ ಮರಿಯೊಂದು ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ರೈತನನ್ನು ಬಂಧಿಸಲಾಗಿದೆ. ತಮಿಳುನಾಡಿನ ಕಾಡಿನಲ್ಲಿ ಕಾಡುಹಂದಿಗಳಿಗಾಗಿ ಇಟ್ಟಿದ್ದ ದೇಶಿ ನಿರ್ಮಿತ ಬಾಂಬ್ ಅನ್ನು ಆಕಸ್ಮಿಕವಾಗಿ ಕಚ್ಚಿ ಹೆಣ್ಣು ಆನೆ ಮರಿ ಸಾವನ್ನಪ್ಪಿದೆ. ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಕಡಂಬೂರು ಅರಣ್ಯ ವ್ಯಾಪ್ತಿಯ ಪೂತಿಕಾಡು ಅರಣ್ಯ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ದಿನನಿತ್ಯದ ಗಸ್ತು ತಿರುಗುತ್ತಿದ್ದಾಗ ಆ ಪ್ರದೇಶದಲ್ಲಿ ಕೆಟ್ಟ ವಾಸನೆ ಬರುತ್ತಿದುದರಿಂದಾಗಿ ಆನೆ ಮರಿ ಸತ್ತಿರುವುದು ಬೆಳಕಿಗೆ ಬಂದಿತ್ತು.

ಕಾಡು ಹಂದಿಗಾಗಿ ಇಟ್ಟಿದ್ದ ದೇಶಿ ಬಾಂಬ್ ಕಚ್ಚಿ ಆನೆ ಮರಿ ದಾರುಣ ಸಾವು
Elephant Died In Erode
ಸುಷ್ಮಾ ಚಕ್ರೆ
|

Updated on: Jan 13, 2026 | 6:54 PM

Share

ಈರೋಡ್, ಜನವರಿ 13: ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಅಭಯಾರಣ್ಯದಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಹೆಣ್ಣು ಆನೆ ಮರಿ (Baby Elephant) ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ರೈತನೊಬ್ಬನನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಗುಥಿಯಾಲತ್ತೂರ್ ಮೀಸಲು ಅರಣ್ಯಕ್ಕೆ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ 2 ವರ್ಷದ ಆನೆ ಮರಿ ಸತ್ತಿರುವುದನ್ನು ಕಂಡು ಅರಣ್ಯ ಇಲಾಖೆಯ ಪಶುವೈದ್ಯರಿಗೆ ಮಾಹಿತಿ ನೀಡಿದರು.

ಆನೆ ಮರಿಯ ಸೊಂಡಿಲು ಮತ್ತು ಬಾಯಿಯಲ್ಲಿ ರಕ್ತಸ್ರಾವದ ಗಾಯಗಳು ಕಂಡುಬಂದಿತ್ತು. ಪಶುವೈದ್ಯರು ಶವಪರೀಕ್ಷೆ ನಡೆಸಿ ದೇಶಿ ನಿರ್ಮಿತ ಬಾಂಬ್ ಸೇವಿಸಿದ ನಂತರ ಆನೆ ಸಾವನ್ನಪ್ಪಿದೆ ಎಂದು ಘೋಷಿಸಿದ್ದಾರೆ. ಕಾಡು ಹಂದಿಗಳು ಹೊಲಗಳಿಗೆ ಪ್ರವೇಶಿಸದಂತೆ ತಡೆಯಲು ರೈತರು ಆ ಬಾಂಬ್ ಅನ್ನು ಅಲ್ಲಿಗೆ ಎಸೆದಿರಬಹುದು ಎಂದು ಅರಣ್ಯ ಅಧಿಕಾರಿಗಳು ಶಂಕಿಸಿದ್ದಾರೆ.

ಇದನ್ನೂ ಓದಿ: Train Accident: ಅಸ್ಸಾಂನಲ್ಲಿ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ರೈಲು, 8 ಆನೆಗಳು ಸಾವು, ಹಳಿ ತಪ್ಪಿದ ಬೋಗಿಗಳು

ಈ ಘಟನೆಯ ನಂತರ, ಅರಣ್ಯ ಪ್ರದೇಶದಲ್ಲಿ ಬಾಂಬ್ ಇಟ್ಟವರು ಯಾರು ಎಂಬುದನ್ನು ಕಂಡುಹಿಡಿಯಲು ಅರಣ್ಯ ಇಲಾಖೆ ತನಿಖೆ ಆರಂಭಿಸಿತು. ಹತ್ತಿರದ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳ ವಿವರವಾದ ಪರಿಶೀಲನೆಯಿಂದ ಈ ಕೃತ್ಯಕ್ಕೆ ಕಾರಣ ಯಾರು ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಿದ ನಂತರ, ಆ ಪ್ರದೇಶದ ರೈತ ಕಾಳಿಮುತ್ತು (43) ಎಂಬುವವರನ್ನು ಬಂಧಿಸಲಾಗಿದೆ. ಆನೆ ಮರಿಯ ಮೃತದೇಹವನ್ನು ಅದೇ ಪ್ರದೇಶದಲ್ಲಿ ಹೂಳಲಾಗಿದೆ.

ವಿಚಾರಣೆಯ ಸಮಯದಲ್ಲಿ, ಕಾಳಿಮುತ್ತು ಮತ್ತು ಇನ್ನೊಬ್ಬ ವ್ಯಕ್ತಿ ಕಾಡುಹಂದಿಗಳನ್ನು ಬೇಟೆಯಾಡಲು ದೇಶೀಯ ಬಾಂಬ್ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸರೊಂದಿಗೆ ಅರಣ್ಯ ಅಧಿಕಾರಿಗಳು, ಪ್ರಸ್ತುತ ಪರಾರಿಯಾಗಿರುವ ಇತರ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ