AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ವಿಮಾನದಲ್ಲಿ ಉಸಿರಾಟ ಸಮಸ್ಯೆ ಎದುರಿಸಿದ ಮಗುವಿನ ಜೀವ ಉಳಿಸಿದ ವೈದ್ಯರು

ಹುಟ್ಟಿನಿಂದಲೇ ಹೃದ್ರೋಗ ಸಮಸ್ಯೆ ಹೊಂದಿದ್ದ ಮಗುವೊಂದು ಇಂಡಿಗೋ ವಿಮಾನದಲ್ಲಿ ಉಸಿರಾಟದ ಸಮಸ್ಯೆ ಎದುರಿಸಿತ್ತು. ಅಲ್ಲಿದ್ದ ಇಬ್ಬರು ವೈದ್ಯರು ಮಗುವಿನ ಜೀವ ಉಳಿಸಿದ್ದಾರೆ. ಐಎಎಸ್ ಅಧಿಕಾರಿ ಡಾ ನಿತಿನ್ ಕುಲಕರ್ಣಿ, ತರಬೇತಿಯಿಂದ ವೈದ್ಯರಾಗಿದ್ದಾರೆ ಮತ್ತು ರಾಂಚಿ ಸದರ್ ಆಸ್ಪತ್ರೆಯ ವೈದ್ಯರು ತುರ್ತು ವೈದ್ಯಕೀಯ ಸಹಾಯವಾಗಿ ಔಷಧಿ ಹಾಗೂ ಆಮ್ಲಜನಕವನ್ನು ಒದಗಿಸಿದರು. ಒಂದು ಗಂಟೆಯ ನಂತರ ವಿಮಾನ ಲ್ಯಾಂಡ್ ಆದ ನಂತರ, ವೈದ್ಯಕೀಯ ತಂಡವು ಮಗುವನ್ನು ತಮ್ಮ ಆರೈಕೆಯಲ್ಲಿ ತೆಗೆದುಕೊಂಡಿತು ಮತ್ತು ಆಮ್ಲಜನಕದ ಬೆಂಬಲವನ್ನು ನೀಡಿತು. ಮಗುವಿನ ಹೃದಯದ ಕಾಯಿಲೆಗೆ ಚಿಕಿತ್ಸೆ ನೀಡಲು ಪೋಷಕರು ಮಗುವನ್ನು ದೆಹಲಿಯ ಏಮ್ಸ್‌ಗೆ ಕರೆದೊಯ್ಯುತ್ತಿದ್ದರು.

ಇಂಡಿಗೋ ವಿಮಾನದಲ್ಲಿ ಉಸಿರಾಟ ಸಮಸ್ಯೆ ಎದುರಿಸಿದ ಮಗುವಿನ ಜೀವ ಉಳಿಸಿದ ವೈದ್ಯರು
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on: Oct 02, 2023 | 9:38 AM

Share

ಹುಟ್ಟಿನಿಂದಲೇ ಹೃದ್ರೋಗ ಸಮಸ್ಯೆ ಹೊಂದಿದ್ದ ಮಗುವೊಂದು ಇಂಡಿಗೋ ವಿಮಾನದಲ್ಲಿ ಉಸಿರಾಟದ ಸಮಸ್ಯೆ ಎದುರಿಸಿತ್ತು. ಅಲ್ಲಿದ್ದ ಇಬ್ಬರು ವೈದ್ಯರು ಮಗುವಿನ ಜೀವ ಉಳಿಸಿದ್ದಾರೆ. ಐಎಎಸ್ ಅಧಿಕಾರಿ ಡಾ ನಿತಿನ್ ಕುಲಕರ್ಣಿ, ತರಬೇತಿಯಿಂದ ವೈದ್ಯರಾಗಿದ್ದಾರೆ ಮತ್ತು ರಾಂಚಿ ಸದರ್ ಆಸ್ಪತ್ರೆಯ ವೈದ್ಯರು ತುರ್ತು ವೈದ್ಯಕೀಯ ಸಹಾಯವಾಗಿ ಔಷಧಿ ಹಾಗೂ ಆಮ್ಲಜನಕವನ್ನು ಒದಗಿಸಿದರು. ಒಂದು ಗಂಟೆಯ ನಂತರ ವಿಮಾನ ಲ್ಯಾಂಡ್ ಆದ ಬಳಿಕ, ವೈದ್ಯಕೀಯ ತಂಡವು ಮಗುವನ್ನು ತಮ್ಮ ಆರೈಕೆಯಲ್ಲಿ ತೆಗೆದುಕೊಂಡಿತು ಮತ್ತು ಆಮ್ಲಜನಕದ ಬೆಂಬಲವನ್ನು ನೀಡಿತು. ಮಗುವಿನ ಹೃದಯದ ಕಾಯಿಲೆಗೆ ಚಿಕಿತ್ಸೆ ನೀಡಲು ಪೋಷಕರು ಮಗುವನ್ನು ದೆಹಲಿಯ ಏಮ್ಸ್‌ಗೆ ಕರೆದೊಯ್ಯುತ್ತಿದ್ದರು.

ವಿಮಾನದಲ್ಲಿ ಮಗು ಉಸಿರಾಟದ ಸಮಸ್ಯೆ ಎದುರಿಸಿದಾಗ ವಿಮಾನ ಸಿಬ್ಬಂದಿಯು ತಕ್ಷಣವೇ ವಿಮಾನದಲ್ಲಿ ಯಾರಾದರೂ ವೈದ್ಯರಿದ್ದರೆ ತಕ್ಷಣ ನೆರವಿಗೆ ಬರುವಂತೆ ಕೇಳಿಕೊಂಡರು. ಕುಲಕರ್ಣಿ, ಪ್ರಸ್ತುತ ಜಾರ್ಖಂಡ್ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿ ಮತ್ತು ರಾಂಚಿಯ ಸದರ್ ಆಸ್ಪತ್ರೆಯ ಡಾ ಮೊಝಮ್ಮಿಲ್ ಫೆರೋಜ್ ಮಗುವನ್ನು ಉಳಿಸಲು ಮುಂದೆ ಬಂದರು.

ಮಗುವಿನ ಉಸಿರುಗಟ್ಟುತ್ತಿದೆ ಎಂದು ತಾಯಿ ಅಳುತ್ತಿದ್ದರು, ಬಳಿಕ ಮಾಸ್ಕ್​ ಮೂಲಕ ಆಮ್ಲಜನಕ ಸರಬರಾಜು ಮಾಡಲಾಯಿತು. ನಾವು ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ಮಗುವಿಗೆ ಜನ್ಮಜಾತ ಹೃದ್ರೋಗ ಇದೆ. ಪೇಟೆಂಟ್ ಡಕ್ಟಸ್ ಆರ್ಟೆರಿಯೊಸಸ್ (ಪಿಡಿಎ) ನಿಂದ ಬಳಲುತ್ತಿದ್ದರು. ಅದಕ್ಕಾಗಿ ಅವರು ಏಮ್ಸ್‌ಗೆ ಹೋಗುತ್ತಿದ್ದರು ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: Akasa Airlines: ವಾರಾಣಸಿಯಿಂದ ಮುಂಬೈಗೆ ತೆರಳಬೇಕಿದ್ದ ಆಕಾಶ ವಿಮಾನ 5 ಗಂಟೆ ವಿಳಂಬ

ಡ್ರಗ್ಸ್ ಕಿಟ್‌ನಿಂದ ಥಿಯೋಫಿಲಿನ್ ಚುಚ್ಚುಮದ್ದನ್ನು ನೀಡಲಾಯಿತು ಎಂದು ಅವರು ಹೇಳಿದರು. ಪೋಷಕರು ಡೆಕ್ಸೋನಾ ಚುಚ್ಚುಮದ್ದನ್ನು ಒಯ್ಯುತ್ತಿದ್ದರು, ಇದು ತುಂಬಾ ಸಹಾಯಕವಾಗಿದೆ ಎಂದು ಅವರು ಹೇಳಿದರು. ಮೊದಲ 15-20 ನಿಮಿಷಗಳು ಬಹಳ ನಿರ್ಣಾಯಕ ಮತ್ತು ಒತ್ತಡದಿಂದ ಕೂಡಿತ್ತು, ಬಳಿಕ ಮಗು ಸಹಜ ಸ್ಥಿತಿಗೆ ಮರಳಿತು. ಬೆಳಗ್ಗೆ 9.25ಕ್ಕೆ ವಿಮಾನ ಲ್ಯಾಂಡ್ ಆಗಿದ್ದು, ವೈದ್ಯ ತಂಡ ಧಾವಿಸಿ ಮಗುವಿಗೆ ಆಮ್ಲಜನಕದ ಬೆಂಬಲವನ್ನು ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ