ಬೆಂಗಳೂರಿನಿಂದ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ಹೆರಿಗೆ; ಆಗಸದಲ್ಲಿ ಹುಟ್ಟಿದ ಪುಟ್ಟ ಮಗುವಿನ ಫೋಟೋ ಶೇರ್​ ಮಾಡಿದ ಇಂಡಿಗೋ

IndiGo: ಕಳೆದ ಅಕ್ಟೋಬರ್​​ನಲ್ಲಿ ಕೂಡ ಮಹಿಳೆಯೊಬ್ಬರು ಇಂಡಿಗೋ ಫ್ಲೈಟ್​​ನಲ್ಲಿ ಗಂಡುಮಗುವಿಗೆ ಜನ್ಮನೀಡಿದ್ದರು. ಅಂದು ವಿಮಾನ ದೆಹಲಿಯಿಂದ ಬೆಳಗಾವಿಗೆ ಬರುತ್ತಿತ್ತು. ಅಂದು ಆ ಮಹಿಳೆಗೆ ಇನ್ನೂ 9 ತಿಂಗಳು ಪೂರ್ತಿ ತುಂಬಿರಲಿಲ್ಲ.

ಬೆಂಗಳೂರಿನಿಂದ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ಹೆರಿಗೆ; ಆಗಸದಲ್ಲಿ ಹುಟ್ಟಿದ ಪುಟ್ಟ ಮಗುವಿನ ಫೋಟೋ ಶೇರ್​ ಮಾಡಿದ ಇಂಡಿಗೋ
ಇಂಡಿಗೋ ಫ್ಲೈಟ್​​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆಯೊಂದಿಗೆ ಸಿಬ್ಬಂದಿ
Follow us
|

Updated on: Mar 17, 2021 | 2:49 PM

ಬೆಂಗಳೂರಿನಿಂದ ಜೈಪುರಕ್ಕೆ ತೆರಳುರುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಾರ್ಗ ಮಧ್ಯೆಯೇ ಮಹಿಳೆಯೊಬ್ಬರು ಹೆಣ್ಣುಮಗುವಿಗೆ ಜನ್ಮನೀಡಿದ್ದಾರೆ. ಇಂಡಿಗೋ ವಿಮಾನ 6E-469ದಲ್ಲಿ ಈ ಮಹಿಳೆ ಪ್ರಯಾಣ ಮಾಡುತ್ತಿದ್ದರು. ಫ್ಲೈಟ್​ನಲ್ಲಿದ್ದ ವೈದ್ಯ ಡಾ. ಸುಬಾಹಾನಾ ನಜೀರ್​ ಮತ್ತು ವಿಮಾನ ಸಿಬ್ಬಂದಿ ಸೇರಿ ಅವರಿಗೆ ಸುಲಲಿತವಾಗಿ ಹೆರಿಗೆಯಾಗುವಂತೆ ನೋಡಿಕೊಂಡಿದ್ದಾರೆ. ಜೈಪುರಕ್ಕೆ ಬರುತ್ತಿದ್ದಂತೆ ಆ್ಯಂಬುಲೆನ್ಸ್​ ವ್ಯವಸ್ಥೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಇಂಡಿಗೋ ಏರ್​ಲೈನ್​ ತಿಳಿಸಿದೆ. ಇನ್ನು ಮಹಿಳೆಯ ಹೆರಿಗೆ ಮಾಡಿಸಿದ ಡಾ. ನಜೀರ್​ ಅವರು ಜೈಪುರ ಏರ್​​ಪೋರ್ಟ್​​ನಲ್ಲಿ ಇಳಿಯುತ್ತಿದ್ದಂತೆ ಅಲ್ಲಿನ ಇಂಡಿಗೋ ಸಿಬ್ಬಂದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. Thank You ಎಂದು ಬರೆಯಲಾಗಿದ್ದ ದೊಡ್ಡ ಕಾರ್ಡ್​ನ್ನೂ ನೀಡಿದ್ದಾರೆ. ಈ ಚಿತ್ರವನ್ನೂ ಇಂಡಿಗೋ ಬಿಡುಗಡೆ ಮಾಡಿದೆ. ಹಾಗೇ ತಾಯಿ-ಮಗು ಹಾಗೂ ಅವರೊಂದಿಗೆ ಸಿಬ್ಬಂದಿ, ವೈದ್ಯೆ ಇರುವ ಫೋಟೋವನ್ನೂ ಶೇರ್​ ಮಾಡಿದೆ.

ಇದೇ ಮೊದಲಲ್ಲ ಕಳೆದ ಅಕ್ಟೋಬರ್​​ನಲ್ಲಿ ಕೂಡ ಮಹಿಳೆಯೊಬ್ಬರು ಇಂಡಿಗೋ ಫ್ಲೈಟ್​​ನಲ್ಲಿ ಗಂಡುಮಗುವಿಗೆ ಜನ್ಮನೀಡಿದ್ದರು. ಅಂದು ವಿಮಾನ ದೆಹಲಿಯಿಂದ ಬೆಳಗಾವಿಗೆ ಬರುತ್ತಿತ್ತು. ಅಂದು ಆ ಮಹಿಳೆಗೆ ಇನ್ನೂ 9 ತಿಂಗಳು ಪೂರ್ತಿ ತುಂಬಿರಲಿಲ್ಲ. ಆಗ ಕೂಡ ಸುಲಲಿತವಾಗಿ ಹೆರಿಗೆಯಾಗಿತ್ತು ಮತ್ತು ತಾಯಿ-ಮಗು ಆರೋಗ್ಯವಾಗಿದ್ದಿದ್ದಾಗಿ ಇಂಡಿಗೋ ಪ್ರಕಟಣೆಯಲ್ಲಿ ತಿಳಿಸಿತ್ತು. ಆ ಮಹಿಳೆಗೆ ವಿಮಾನದ ಪ್ರಥಮ ಚಿಕಿತ್ಸೆ ವಿಭಾಗದ ಸಿಬ್ಬಂದಿ ಹೆರಿಗೆ ಮಾಡಿಸಿದ್ದರು. ಅಂದು ಪೈಲಟ್​ ತುರ್ತು ಭೂಸ್ಪರ್ಶಕ್ಕೆ ಮುಂದಾಗಿದ್ದರೂ, ಅಷ್ಟರಲ್ಲಾಗಲೇ ಆಕೆಯ ಹೆರಿಗೆಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರೂ ಸಹ ಈ ಬಗ್ಗೆ ಚರ್ಚಿಸಿದ್ದರು.

Indigo Flight

ಹೆರಿಗೆ ಮಾಡಿಸಿದ ವೈದ್ಯೆಗೆ ಧನ್ಯವಾದ ಸಲ್ಲಿಸಿದ ಇಂಡಿಗೋ ಸಿಬ್ಬಂದಿ

ಇದನ್ನೂ ಓದಿ: ಪ್ಲಾಸ್ಟಿಕ್ ತ್ಯಜಿಸಿದರೆ ಅದೇ ಪರಿಸರ ಸಂರಕ್ಷಣೆಗೆ ದೊಡ್ಡ ಕೊಡುಗೆ; ಸತ್ರ ನ್ಯಾಯಾಧೀಶ ಉಮೇಶ್ ಅಡಿಗ ಅನಿಸಿಕೆ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!