AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electrocution: ಮೊಬೈಲ್​​ ಚಾರ್ಜರ್ ಪಿನ್ ಬಾಯಿಗೆ ಹಾಕಿಕೊಂಡ ಮಗು, ಶಾಕ್ ಹೊಡೆದು…

Mobile charger Electrocution: ಗ್ರಾಮಸ್ಥರ ಪ್ರಕಾರ ಆರಾಧ್ಯ ಕೊಟ್ಟಮಡ್ಡಿಪಾಡಿಗದ ದುರ್ಗಂ ರಾಜಲಿಂಗು ಮತ್ತು ಸುಶೀಲಾ ದಂಪತಿಯ ಎರಡನೇ ಪುತ್ರಿ. ಗುರುವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗು ವಿದ್ಯುತ್ ಬೋರ್ಡ್‌ಗೆ ನೇತಾಡುತ್ತಿದ್ದ ಸೆಲ್ ಫೋನ್ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿದ್ದು ವಿದ್ಯುತ್​​ ಆಘಾತದಿಂದ ಪ್ರಜ್ಞೆ ತಪ್ಪಿದೆ.

Electrocution: ಮೊಬೈಲ್​​ ಚಾರ್ಜರ್ ಪಿನ್ ಬಾಯಿಗೆ ಹಾಕಿಕೊಂಡ ಮಗು, ಶಾಕ್ ಹೊಡೆದು...
ಚಾರ್ಜರ್ ಪಿನ್ ಬಾಯಿಗೆ ಹಾಕಿಕೊಂಡ ಮಗು, ಶಾಕ್ ಹೊಡೆದು...
TV9 Web
| Updated By: ಸಾಧು ಶ್ರೀನಾಥ್​|

Updated on: Aug 02, 2024 | 1:45 PM

Share

ಆಧುನಿಕ ತಂತ್ರಜ್ಞಾನದಲ್ಲಿ ದಿನನಿತ್ಯ ಬಳಕೆಯ ವಸ್ತುವಾಗಿರುವ ಸೆಲ್ ಫೋನ್ ಚಾರ್ಜರ್ ಆಕಸ್ಮಿಕ/ ಅಚಾತುರ್ಯದ ಘಟನೆಯೊಂದರಲ್ಲಿ ಮೃತ್ಯುಪಾಶವಾಗಿ ಮಾರ್ಪಟ್ಟಿದೆ. ಕಂದಮ್ಮನ ಜೀವವನ್ನೇ ತೆಗೆದುಕೊಂಡಿದೆ. ನಿರ್ಮಲ್ ಜಿಲ್ಲೆಯ ಕಡಂ ಮಂಡಲದ ಕೋಟ ಮಡ್ಡಿಪಡಗ ಗ್ರಾಮದಲ್ಲಿ ಈ ದುರಂತ ನಡೆದಿದೆ.

ಒಂದೂವರೆ ವರ್ಷದ ಬಾಲಕಿ ದುರ್ಗಂ ಆರಾಧ್ಯ ವಿದ್ಯುತ್ ಬೋರ್ಡ್‌ಗೆ ನೇತಾಡುತ್ತಿದ್ದ ಸೆಲ್‌ಫೋನ್ ಚಾರ್ಜಿಂಗ್ ಕೇಬಲ್ ಅನ್ನು ಬಾಯಿಗೆ ಹಾಕಿಕೊಂಡಿದ್ದಾಳೆ. ತಕ್ಷಣ ಹುಡುಗಿ ಆಘಾತಕ್ಕೊಳಗಾಗಿದ್ದಾಳೆ. ಮಗುವಿಗೆ ವಿದ್ಯುತ್ ಆಘಾತವನ್ನು ತಡೆದುಕೊಳ್ಳಲು ಸಾಧ್ಯವಾಗಿಲ್ಲ. ಅವಳನ್ನು ಖಾನಾಪುರ ಸರ್ಕಾರಿ ಆಸ್ಪತ್ರೆಗೆ ತಕ್ಷಣವೇ ಕರೆದೊಯ್ಯಲಾಗಿದೆ. ಆದರೆ ಮಗು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ. ಇದರಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಮತ್ತಷ್ಟು ಓದಿ: ಗುಡಿಸಲಿಗೆ ನುಗ್ಗಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ವೃದ್ಧೆಯ ಕಚ್ಚಿ ಕೊಂದ ಬೀದಿ ನಾಯಿಗಳು

ಗ್ರಾಮಸ್ಥರ ಪ್ರಕಾರ ಆರಾಧ್ಯ ಕೊಟ್ಟಮಡ್ಡಿಪಾಡಿಗದ ದುರ್ಗಂ ರಾಜಲಿಂಗು ಮತ್ತು ಸುಶೀಲಾ ದಂಪತಿಯ ಎರಡನೇ ಪುತ್ರಿ. ಗುರುವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗು ವಿದ್ಯುತ್ ಬೋರ್ಡ್‌ಗೆ ನೇತಾಡುತ್ತಿದ್ದ ಸೆಲ್ ಫೋನ್ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿದ್ದು ವಿದ್ಯುತ್​​ ಆಘಾತದಿಂದ ಪ್ರಜ್ಞೆ ತಪ್ಪಿದೆ. ಕೂಡಲೇ ಪೋಷಕರು ಆಕೆಯನ್ನು ಖಾನಾಪುರ ಆಸ್ಪತ್ರೆಗೆ ಕರೆದೊಯ್ದರು. ಆದರೆ ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ