AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಗೆದ್ದಿದ್ದಕ್ಕೆ ಯೋಗಿ ಆದಿತ್ಯನಾಥ್​​​ರಿಗೆ ಅಭಿನಂದನೆ ಹೇಳಿದ ಸೈನಾ ನೆಹ್ವಾಲ್​; ಪ್ರತಿಪಕ್ಷಗಳಿಂದ ಕಟು ಟೀಕೆ

ಸ್ಥಳೀಯ ಸಂಸ್ಥೆ ಚುನಾವಣೆಗಳು ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗಳಿಗಾಗಲೀ, 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗಾಗಲೀ ಸಂಬಂಧಪಡುವುದಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

ಬಿಜೆಪಿ ಗೆದ್ದಿದ್ದಕ್ಕೆ ಯೋಗಿ ಆದಿತ್ಯನಾಥ್​​​ರಿಗೆ ಅಭಿನಂದನೆ ಹೇಳಿದ ಸೈನಾ ನೆಹ್ವಾಲ್​; ಪ್ರತಿಪಕ್ಷಗಳಿಂದ ಕಟು ಟೀಕೆ
ಸೈನಾ ನೆಹ್ವಾಲ್​
Follow us
TV9 Web
| Updated By: Lakshmi Hegde

Updated on:Jul 04, 2021 | 5:37 PM

ದೆಹಲಿ: ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಬಿಜೆಪಿ ನಾಯಕರು ಯೋಗಿ ಆದಿತ್ಯನಾಥ್​ರಿಗೆ ಅಭಿನಂದನೆ ಸಲ್ಲಿಸಿ, ಅವರನ್ನು ಹೊಗಳಿದ್ದಾರೆ. ಈ ಮಧ್ಯೆ ಖ್ಯಾತ ಬ್ಯಾಡ್ಮಿಂಟನ್​ ಆಟಗಾರ್ತಿ ಸೈನಾ ನೆಹ್ವಾಲ್​​ ಕೂಡ ಯೋಗಿ ಆದಿತ್ಯನಾಥ್​​ ಅವರಿಗೆ ಅಭಿನಂದನೆ ಸಲ್ಲಿಸಿ ಸಿಕ್ಕಾಪಟೆ ಟ್ರೋಲ್​​ಗೆ ಗುರಿಯಾಗಿದ್ದಾರೆ. ರಾಷ್ಟ್ರೀಯ ಲೋಕ ದಳದ ಮುಖಂಡ ಜಯಂತ್​ ಚೌಧರಿ ಟ್ವೀಟ್​ ಮಾಡಿ, ಸೈನಾರನ್ನು ಸರ್ಕಾರಿ ಶಟ್ಲರ್​ ಎಂದು ಕರೆದಿದ್ದಾರೆ.

ಉತ್ತರಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳ ಬಗ್ಗೆ ಸಹಜವಾಗಿಯೇ ಕುತೂಹಲ ಇತ್ತು. ಅದರಲ್ಲೀಗ ಯೋಗಿ ನೇತೃತ್ವದ ಬಿಜೆಪಿ ಅಮೋಘ ಜಯ ಗಳಿಸಿದೆ. 75 ಜಿಲ್ಲಾ ಪಂಚಾಯತ್​ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 67 ಸೀಟ್​​ಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಅಖಿಲೇಶ್​ ಯಾದವ್​​ರ ಸಮಾಜವಾದಿ ಪಕ್ಷ ಕೇವಲ 5 ಸೀಟ್​ ಗೆದ್ದರೆ, ರಾಷ್ಟ್ರೀಯ ಲೋಕ ದಳಕ್ಕೆ ಒಂದು ಸ್ಥಾನವಷ್ಟೇ ಲಭ್ಯವಾಗಿದೆ. ಇನ್ನು ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಾರ್ಟಿ ಈ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. 2016ರಲ್ಲಿ ಜಿಲ್ಲಾಪಂಚಾಯತ್ ಅಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಖಿಲೇಶ್ ಯಾದವ್​​ರ ಪಕ್ಷ 75 ಸೀಟ್​​ಗಳಲ್ಲಿ 60 ಸೀಟುಗಳನ್ನು ಗೆದ್ದಿತ್ತು. ಅದಕ್ಕೆ ಹೋಲಿಸಿದರೆ ಇದು ಅತ್ಯಂತ ಕಳಪೆಯಾಗಿದೆ.

ಬಿಜೆಪಿಯ ಈ ಭರ್ಜರಿ ಗೆಲುವಿಗೆ ಸೈನಾ ನೆಹ್ವಾಲ್​ ಕೂಡ ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್​​ ಅವರನ್ನು ಟ್ವಿಟರ್​​ನಲ್ಲಿ ಟ್ಯಾಗ್​ ಮಾಡಿದ ಸೈನಾ, ಜಿಲ್ಲಾ ಪಂಚಾಯತ್​ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದಿದ್ದಾರೆ. ಸೈನಾ ಕಳೆದ ವರ್ಷ ಜನವರಿಯಲ್ಲಿಯೇ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅದೇ ಕಾರಣಕ್ಕೆ ಈಗ ಯೋಗಿ ಆದಿತ್ಯನಾಥ್​​ರಿಗೆ ಅಭಿನಂದನೆಯನ್ನೂ ಸಲ್ಲಿಸಿದ್ದಾರೆ.

ಆದರೆ ಪ್ರತಿಪಕ್ಷಗಳು ಸೈನಾ ವಿರುದ್ಧ ತಿರುಗಿಬಿದ್ದಿವೆ. ಅವರನ್ನು ಸರ್ಕಾರಿ ಶಟ್ಲರ್​ ಎಂದು ರಾಷ್ಟ್ರೀಯ ಲೋಕದಳದ ಜಯಂತ್ ಚೌಧರಿ ಕರೆದಿದ್ದರೆ,  ತಮಿಳುನಾಡಿನ ಕಾಂಗ್ರೆಸ್​ನ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಡಾ. ಅಸ್ಲಾಂ ಭಾಷಾ, ಸೆಕ್ಯೂಲರಿಸಂ ಎಂಬುದು ನಿಮ್ಮ ಅಭಿಮಾನಿಗಳಲ್ಲೇ ವಿಭಜನೆ ಉಂಟು ಮಾಡಬಹುದು ಎಂದಿದ್ದಾರೆ. ಹಾಗೇ, ನೀವ್ಯಾಕೆ ಆಟವನ್ನು ನಿಲ್ಲಿಸಬಾರದು ಎಂದೂ ಕೇಳಿದ್ದಾರೆ. ಇವರ ಹೊರತಾಗಿಯೂ ಕೆಲವು ನೆಟ್ಟಿಗರು ಸೈನಾ ವಿರುದ್ಧ ತಮ್ಮ ಸೋಷಿಯಲ್​ ಮೀಡಿಯಾ ಅಕೌಂಟ್​​ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೆ ರಾಜಕೀಯ ವಿಶ್ಲೇಷಕರು ಈ ಸ್ಥಳೀಯ ಸಂಸ್ಥೆ ಚುನಾವಣೆಗಳು ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗಳಿಗಾಗಲೀ, 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗಾಗಲೀ ಸಂಬಂಧಪಡುವುದಿಲ್ಲ. ಇಲ್ಲಿ ಗೆದ್ದ ಪಕ್ಷವೇ ಆಗಲೂ ಗೆಲ್ಲುತ್ತದೆ ಎಂದೆಲ್ಲ ಭಾವಿಸುವುದು ಸರಿಯಲ್ಲ ಎಂದಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಗೆದ್ದ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಇದು ಜನರು ಅಭಿವೃದ್ಧಿಗೆ ನೀಡಿದ ಆಶೀರ್ವಾದ. ಈ ಗೆಲುವಿನ ಸಂಪೂರ್ಣ ಕ್ರೆಡಿಟ್​​ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ರಿಗೆ ಸಂದುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆಯದವರ ದೇಹದಲ್ಲೇ ವೈರಾಣು ರೂಪಾಂತರ ಸಾಧ್ಯತೆ: ತಜ್ಞರ ಎಚ್ಚರಿಕೆ

Badminton champion Saina Nehwal congratulated Yogi Adityanath for Victory in local body elections of Uttar Pradesh

Published On - 5:23 pm, Sun, 4 July 21

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ