AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದರಿನಾಥಕ್ಕೆ ದಾಖಲೆ ಸಂಖ್ಯೆಯಲ್ಲಿ ಯಾತ್ರಿಕರ ಆಗಮನ, ಒಂದು ತಿಂಗಳಲ್ಲಿ 5 ಲಕ್ಷ ಮಂದಿ ಭೇಟಿ

ಚಾರ್​ ಧಾಮ್ ಯಾತ್ರೆ ಆರಂಭಗೊಂಡಿದೆ, ಬದರಿನಾಥಕ್ಕೆ ದಾಖಲೆ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ. ಒಂದು ತಿಂಗಳಲ್ಲಿ ಬರೋಬ್ಬರು 5 ಲಕ್ಷ ಮಂದಿ ಆಗಮಿಸಿದ್ದಾರೆ.

ಬದರಿನಾಥಕ್ಕೆ ದಾಖಲೆ ಸಂಖ್ಯೆಯಲ್ಲಿ ಯಾತ್ರಿಕರ ಆಗಮನ, ಒಂದು ತಿಂಗಳಲ್ಲಿ 5 ಲಕ್ಷ ಮಂದಿ ಭೇಟಿ
ಬದರಿನಾಥ
ನಯನಾ ರಾಜೀವ್
|

Updated on:Jun 11, 2024 | 11:07 AM

Share

ಬದರಿನಾಥ(Badrinath)ಕ್ಕೆ ದಾಖಲೆ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ. ಒಂದೇ ತಿಂಗಳಲ್ಲಿ 5 ಲಕ್ಷ ಮಂದಿ ಭೇಟಿ ನೀಡಿದ್ದಾರೆ. ಕಳೆದ ವರ್ಷ ಮೊದಲ ತಿಂಗಳಲ್ಲಿ ಧಾಮಕ್ಕೆ ಭೇಟಿ ನೀಡಿದ 4.5 ಲಕ್ಷ ಭಕ್ತರಿಗೆ ಹೋಲಿಸಿದರೆ ಈ ವರ್ಷ ಬದರಿನಾಥ ಧಾಮವು 50,000 ಭಕ್ತರ ಹೆಚ್ಚಳಕ್ಕೆ ಸಾಕ್ಷಿಯಾಗಿದೆ.

55,000 ಕ್ಕೂ ಹೆಚ್ಚು ಭಕ್ತರು ಸಿಖ್ಖರ ಪವಿತ್ರ ಯಾತ್ರಾಸ್ಥಳವಾದ ಹೇಮಕುಂಡ್ ಸಾಹಿಬ್‌ಗೆ ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ. ಈ ವರ್ಷ, ಬದರಿನಾಥ, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಯನ್ನು ಒಳಗೊಂಡಿರುವ ಚಾರ್ ಧಾಮ್ ಯಾತ್ರಾ ಸರ್ಕ್ಯೂಟ್‌ನಲ್ಲಿ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಬದರಿನಾಥದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದು, ಈ ಬಾರಿ ಯಾತ್ರೆಯ ಹಿಂದಿನ ಎಲ್ಲ ದಾಖಲೆಗಳು ಮುರಿಯುವ ನಿರೀಕ್ಷೆ ಇದೆ.

ಮೇ 10ರಂದು ಚಾರ್​ ಧಾಮ್ ಯಾತ್ರೆ ಶುರುವಾಗಿತ್ತು, ಚಾರ್ ಧಾಮ್ ಯಾತ್ರೆಗೆ ಆನ್‌ಲೈನ್ ನೋಂದಣಿಯನ್ನು ಏಪ್ರಿಲ್ 15 ರಿಂದ ಮೇ 3 ರವರೆಗೆ ನಡೆಸಲಾಗಿತ್ತು. ಬಳಿಕ ಮೇ 8 ರಿಂದ ಆಫ್​ಲೈನ್ ನೋಂದಣಿ ಶುರು ಮಾಡಲಾಗಿತ್ತು.

ಬದರಿನಾಥವನ್ನು ವಿಶಾಲಪುರಿ ಎಂದೂ ಕರೆಯುತ್ತಾರೆ. ಬದರಿನಾಥ ಧಾಮದಲ್ಲಿ ವಿಷ್ಣುವನ್ನು ಪೂಜಿಸಲಾಗುತ್ತದೆ, ಆದ್ದರಿಂದ ಇದನ್ನು ವಿಷ್ಣುಧಾಮ ಎಂದೂ ಕರೆಯುತ್ತಾರೆ. ಬದರಿನಾಥ್ ಸುಮಾರು 3,100 ಮೀಟರ್ ಎತ್ತರದಲ್ಲಿದೆ. ಗರ್ವಾಲ್ ಹಿಮಾಲಯದ ಅಲಕನಂದಾ ನದಿಯ ದಡದಲ್ಲಿ ನೆಲೆಗೊಂಡಿರುವ ಈ ನಗರವು ನಾರ್ ಮತ್ತು ನಾರಾಯಣ ಪರ್ವತ ಶ್ರೇಣಿಗಳ ನಡುವೆ ನೆಲೆಗೊಂಡಿದೆ.

ಮತ್ತಷ್ಟು ಓದಿ: Chardham Yatra 2024: ಇಂದಿನಿಂದ ಚಾರ್​ಧಾಮ್ ಯಾತ್ರೆ ಇಂದಿನಿಂದ ಶುರು

ಬದರಿನಾಥಕ್ಕೆ ಹತ್ತಿರದ ವಿಮಾನ ನಿಲ್ದಾಣವೆಂದರೆ ಡೆಹ್ರಾಡೂನ್‌ನಲ್ಲಿರುವ ಜಾಲಿ ಗ್ರಾಂಟ್ ವಿಮಾನ ನಿಲ್ದಾಣ, ಇದು ಬದರಿನಾಥದಿಂದ ಸುಮಾರು 317 ಕಿ.ಮೀ. ದೂರದಲ್ಲಿದೆ. ಡೆಹ್ರಾಡೂನ್ ವಿಮಾನ ನಿಲ್ದಾಣದಿಂದ ಬದರಿನಾಥಕ್ಕೆ ಟ್ಯಾಕ್ಸಿ ಮತ್ತು ಬಸ್ ಸೇವೆಗಳು ಲಭ್ಯವಿದೆ.

ರಿಷಿಕೇಶ, ಹರಿದ್ವಾರ ಮತ್ತು ಡೆಹ್ರಾಡೂನ್ ಎಲ್ಲಾ ರೈಲು ನಿಲ್ದಾಣಗಳನ್ನು ಹೊಂದಿದೆ. ಬದರಿನಾಥಕ್ಕೆ ಹತ್ತಿರದ ರೈಲು ನಿಲ್ದಾಣವೆಂದರೆ ಋಷಿಕೇಶ. ರಿಷಿಕೇಶದಿಂದ ಬಸ್ ಮತ್ತು ಟ್ಯಾಕ್ಸಿ ಮೂಲಕ ಬದರಿನಾಥ ತಲುಪಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:01 am, Tue, 11 June 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ