AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bahraich violence: ಉತ್ತರ ಪ್ರದೇಶದ ಬಹ್ರೈಚ್​​ನಲ್ಲಿ ಹಿಂಸಾಚಾರ: ಇಂಟರ್ನೆಟ್ ಸ್ಥಗಿತ; ಆಸ್ಪತ್ರೆ, ಅಂಗಡಿಗಳಿಗೆ ಬೆಂಕಿ

ಅಕ್ಟೋಬರ್ 13 ರಂದು ಮೆರವಣಿಗೆಯು ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಎರಡು ಗುಂಪುಗಳ ನಡುವೆ ವಾಗ್ವಾದ ನಡೆಯಿತು. "ಹಿಂದೂ ಸಮುದಾಯದ ವ್ಯಕ್ತಿಯೊಬ್ಬರು ಗುಂಡಿಗೆ ಬಲಿಯಾದ ನಂತರ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು" ಎಂದು ಬಹ್ರೈಚ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವೃಂದಾ ಶುಕ್ಲಾ ಹೇಳಿದ್ದಾರೆ.

Bahraich violence: ಉತ್ತರ ಪ್ರದೇಶದ ಬಹ್ರೈಚ್​​ನಲ್ಲಿ ಹಿಂಸಾಚಾರ: ಇಂಟರ್ನೆಟ್ ಸ್ಥಗಿತ; ಆಸ್ಪತ್ರೆ, ಅಂಗಡಿಗಳಿಗೆ ಬೆಂಕಿ
ಬಹ್ರೈಚ್‌ ಹಿಂಸಾಚಾರ
ರಶ್ಮಿ ಕಲ್ಲಕಟ್ಟ
|

Updated on:Oct 14, 2024 | 2:42 PM

Share

ಲಕ್ನೋ ಅಕ್ಟೋಬರ್ 14: ಭಾನುವಾರ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಮಹಾಸಿ (Mahasi )ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ (Bahraich Violence) ಆಸ್ಪತ್ರೆ ಮತ್ತು ಕೆಲವು ಅಂಗಡಿಗಳಿಗೆ ಸೋಮವಾರ ಬೆಂಕಿ ಹಚ್ಚಲಾಗಿದೆ. ಸ್ಥಳೀಯ ಆಡಳಿತವು ಇಂಟರ್ನೆಟ್ ಸ್ಥಗಿತಗೊಳಿಸಿದೆ. ಭಾನುವಾರ ಮಹಾಸಿ ಪ್ರದೇಶದಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

ಸೋಮವಾರ ಬೆಳಗ್ಗೆ, ಕೊಲೆಯ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಅಶ್ರುವಾಯು ಶೆಲ್‌ ಎಸೆದಿದ್ದಾರೆ. “ನಾವು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಬಹ್ರೈಚ್ ಡಿಎಂ ಮೋನಿಕಾ ರಾಣಿ ಹೇಳಿದ್ದಾರೆ.

ಬಹ್ರೈಚ್‌ನಲ್ಲಿ ಏನಾಯಿತು?

ಅಕ್ಟೋಬರ್ 13 ರಂದು ಮೆರವಣಿಗೆಯು ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಎರಡು ಗುಂಪುಗಳ ನಡುವೆ ವಾಗ್ವಾದ ನಡೆಯಿತು. “ಹಿಂದೂ ಸಮುದಾಯದ ವ್ಯಕ್ತಿಯೊಬ್ಬರು ಗುಂಡಿಗೆ ಬಲಿಯಾದ ನಂತರ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು” ಎಂದು ಬಹ್ರೈಚ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವೃಂದಾ ಶುಕ್ಲಾ ಹೇಳಿದ್ದಾರೆ.

ವಿವಿಧೆಡೆ ವಿಸರ್ಜನೆ ಮೆರವಣಿಗೆ ತಡೆದಿದ್ದು, ಕೆಲ ಕಿಡಿಗೇಡಿಗಳು ಇದರ ಲಾಭ ಪಡೆದು ಗಲಾಟೆ ಸೃಷ್ಟಿಸಲು ಯತ್ನಿಸಿದ್ದಾರೆ. ಮಹಾರಾಜ್‌ಗಂಜ್‌ನಲ್ಲಿ ವ್ಯಕ್ತಿಯೊಬ್ಬನಿಗೆ ಗುಂಡು ಹಾರಿಸಿದ ಘಟನೆಯಲ್ಲಿ 30 ಜನರನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬಹ್ರೈಚ್ ಹಿಂಸಾಚಾರದ ಬಗ್ಗೆ ಯೋಗಿ ಆದಿತ್ಯನಾಥ್ ಹೇಳಿದ್ದೇನು?

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಸ್ಥಿತಿಯನ್ನು ಅರಿತುಕೊಂಡು ಬಹ್ರೈಚ್‌ನಲ್ಲಿ ವಾತಾವರಣವನ್ನು ಹಾಳುಮಾಡಲು ಬಯಸುವವರನ್ನು ಬಿಡಲಾಗುವುದಿಲ್ಲ ಎಂದು ಒತ್ತಿ ಹೇಳಿದ್ದಾರೆ. ಬಹ್ರೈಚ್ ಜಿಲ್ಲೆಯ ಮಹಾಸಿಯಲ್ಲಿ ವಾತಾವರಣವನ್ನು ಹಾಳು ಮಾಡುವವರನ್ನು ಬಿಡಲಾಗುವುದಿಲ್ಲ. ಎಲ್ಲರಿಗೂ ಸುರಕ್ಷತೆಯನ್ನು ಖಾತರಿಪಡಿಸಲಾಗಿದೆ, ಆದರೆ ಗಲಭೆಕೋರರನ್ನು ಮತ್ತು ಅವರ ನಿರ್ಲಕ್ಷ್ಯದಿಂದ ಘಟನೆಗೆ ಕಾರಣವಾದವರನ್ನು ಗುರುತಿಸಲು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಯೋಗಿ ಆದಿತ್ಯನಾಥ್ ಭಾನುವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಗ್ರಹಗಳ ವಿಸರ್ಜನೆ ಮುಂದುವರಿಯಲಿದೆ. ವಿಗ್ರಹಗಳ ವಿಸರ್ಜನೆ ಸಮಯಕ್ಕೆ ಸರಿಯಾಗಿ ಮಾಡಲಾಗುತ್ತದೆ ಎಂದು ಖಚಿತಪಡಿಸಿಕೊಳ್ಳಲು ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಹಾಜರಾಗಲು ಮತ್ತು ಧಾರ್ಮಿಕ ಸಂಸ್ಥೆಗಳೊಂದಿಗೆ ಸಂವಹನ ನಡೆಸಲು ಸೂಚಿಸಲಾಗಿದೆ, ”ಎಂದು ಅವರು ಹೇಳಿದರು.

ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸೋಮವಾರ ಜನಸಾಮಾನ್ಯರಿಗೆ ಶಾಂತಿ ಮತ್ತು ತಾಳ್ಮೆಯನ್ನು ಕಾಪಾಡುವಂತೆ ಮನವಿ ಮಾಡಿದರು.

ಉತ್ತರ ಪ್ರದೇಶದ ಶಾಂತಿ-ಸೌಹಾರ್ದತೆ ಕದಡುವ ಯಾವುದೇ ಷಡ್ಯಂತ್ರ ಯಶಸ್ವಿಯಾಗುವುದಿಲ್ಲ, ಗಲಭೆಕೋರರಿಗೆ ರಕ್ಷಣೆ ನೀಡುವವರು ಮತ್ತೊಮ್ಮೆ ಸಕ್ರಿಯರಾಗುತ್ತಿದ್ದಾರೆ, ಆದರೆ ನಾವು ಜಾಗೃತರಾಗಿ ಮತ್ತು ಎಚ್ಚರದಿಂದಿರಬೇಕು, ರಾಜ್ಯದ ಉಜ್ವಲ ಭವಿಷ್ಯಕ್ಕೆ ಅವಕಾಶ ನೀಡುವುದಿಲ್ಲ. ತಪ್ಪಿತಸ್ಥರನ್ನು ಕಾನೂನಿನ ವ್ಯಾಪ್ತಿಗೆ ತರಲಾಗುವುದು ಮತ್ತು ಕಠಿಣ ಶಿಕ್ಷೆಯನ್ನು ನೀಡಲಾಗುವುದು ಮತ್ತು ಸಂತ್ರಸ್ತರಿಗೆ ಸಂಪೂರ್ಣ ನ್ಯಾಯ ಸಿಗುತ್ತದೆ. ಎಲ್ಲಾ ನಾಗರಿಕರು ಶಾಂತಿ ಮತ್ತು ತಾಳ್ಮೆಯಿಂದಿರಿ ಎಂದು ಅವರು ಹೇಳಿದ್ದಾರೆ. ಬಹ್ರೈಚ್ ಹಿಂಸಾಚಾರದ ಬಗ್ಗೆ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಇದನ್ನೂ ಓದಿ: ಮುಂಬೈನಲ್ಲಿ ಟೋಲ್ ಇಲ್ಲ; ಮಹಾರಾಷ್ಟ್ರ ಸರ್ಕಾರದಿಂದ ಘೋಷಣೆ; ಲಕ್ಷಾಂತರ ವಾಹನ ಸವಾರರಿಗೆ ಅನುಕೂಲ

ಏತನ್ಮಧ್ಯೆ, ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಫಕ್ರುಲ್ ಹಸನ್ ಚಾಂದ್ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಯುಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿ ಇಲ್ಲ. ಬಹ್ರೈಚ್ ಘಟನೆಯಲ್ಲಿ, ಆಡಳಿತದ ಲೋಪಗಳು ಬಹಿರಂಗವಾಗಿವೆ. ಇದು ಪೊಲೀಸರ ವೈಫಲ್ಯ, ಇದು ಗುಪ್ತಚರ ವೈಫಲ್ಯ. ಇದು ಬಹ್ರೈಚ್ ಆಗಿರಲಿ ಅಥವಾ ಗಾಜಿಯಾಬಾದ್ ಆಗಿರಲಿ ಅದು ಯಾರಿಂದಲೂ ಮರೆಮಾಡಲ್ಪಟ್ಟಿಲ್ಲ”ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Mon, 14 October 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ