AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ರಾಜಕೀಯದಲ್ಲಿ ಬಾಹುಬಲಿ ಪೋಸ್ಟರ್ ಪ್ರತ್ಯಕ್ಷ, ಗದ್ದಾರ್​ ಎಂದು ಜರಿದರು! ಆದರೆ ಇಲ್ಲಿ ಕಟ್ಟಪ್ಪ ಯಾರು?

Maharashtra Crisis: ಬಂಡಾಯ ಶಾಸಕರ ಮೇಲೆ ಶಿವಸೇನೆ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ. ಮರಾಠವಾಡ ಪ್ರದೇಶದಲ್ಲಿ ಶಿವಸೇನೆ ಬಂಡಾಯ ಶಾಸಕರ ವಿರುದ್ಧ ಪೋಸ್ಟರ್‌ಗಳು ಮತ್ತು ಪ್ರತಿಕೃತಿ ದಹನದಂತಹ ಘಟನೆಗಳು ಮುಂದುವರಿದಿವೆ.

ಮಹಾರಾಷ್ಟ್ರ ರಾಜಕೀಯದಲ್ಲಿ ಬಾಹುಬಲಿ ಪೋಸ್ಟರ್ ಪ್ರತ್ಯಕ್ಷ, ಗದ್ದಾರ್​ ಎಂದು ಜರಿದರು! ಆದರೆ ಇಲ್ಲಿ ಕಟ್ಟಪ್ಪ ಯಾರು?
ಮಹಾರಾಷ್ಟ್ರ ರಾಜಕೀಯದಲ್ಲಿ ಬಾಹುಬಲಿ ಪೋಸ್ಟರ್ ಪ್ರತ್ಯಕ್ಷ! ದೇಶದ್ರೋಹಿ ಎಂದು ಜರಿದರು: ಆದರೆ ಇಲ್ಲಿ ಕಟ್ಟಪ್ಪ ಯಾರು?
TV9 Web
| Edited By: |

Updated on: Jun 28, 2022 | 5:47 PM

Share

ಮಹಾರಾಷ್ಟ್ರದ ರಾಜಕೀಯ ಮತ್ತಷ್ಟು ಗೊಂದಲಮಯವಾಗಿದೆ. ಒಂದೆಡೆ ಸರ್ಕಾರವನ್ನು ರಕ್ಷಿಸಲು ಶಿವಸೇನೆ ಹವಣಿಸುತ್ತಿದ್ದರೆ ಇನ್ನೊಂದೆಡೆ ಬಿಜೆಪಿ ಬಂಡಾಯ ನಾಯಕರ ಜೊತೆಗೂಡಿ ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿದೆ. ಈ ವಿಚಾರವಾಗಿ ಬಂಡಾಯ ಶಾಸಕರ ವಿರುದ್ಧ ಶಿವಸೇನೆ ಕಾರ್ಯಕರ್ತರು ಕಿಡಿಕಾರಿದ್ದಾರೆ. ಮರಾಠವಾಡ ಪ್ರದೇಶದಲ್ಲಿ ಶಿವಸೇನೆ ಬಂಡಾಯ ಶಾಸಕರ ವಿರುದ್ಧ ಪೋಸ್ಟರ್‌ಗಳು ಮತ್ತು ಪ್ರತಿಕೃತಿ ದಹನದಂತಹ ಘಟನೆಗಳು ಮುಂದುವರಿದಿವೆ. ಜತೆಗೆ ಬಂಡಾಯ ಶಾಸಕರನ್ನು ಗುರಿಯಾಗಿಸಿಕೊಂಡು ಪೋಸ್ಟರ್ ಗಳನ್ನು ಹಾಕಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಏಕನಾಥ್ ಶಿಂಧೆ ಅವರ ಅನುಯಾಯಿಗಳೂ ಶಿವಸೇನೆ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಆದರೆ, ಬಂಡಾಯ ಶಾಸಕರ ವಿರುದ್ಧ ಶಿವಸೇನೆ ಕಾರ್ಯಕರ್ತರು ಹಾಕಿರುವ ‘ಬಾಹುಬಲಿ’ ಪೋಸ್ಟರ್ ಗಳು ಈಗ ವೈರಲ್ ಆಗುತ್ತಿವೆ. ಕಟ್ಟಪ್ಪ ಬಾಹುಬಲಿ ಬೆನ್ನಿಗೆ ಚೂರಿ ಇರಿದ ದೃಶ್ಯದಂತೆಯೇ ಶಿವಸೇನೆ ಕಾರ್ಯಕರ್ತರು ಪೋಸ್ಟರ್ ಹಾಕಿದ್ದರು. ಗುವಾಹಟಿಯಲ್ಲಿ ದೇಶದ್ರೋಹಿಗಳನ್ನು ಅಡಗಿಸಿಟ್ಟಿರುವುದನ್ನು ಇಡೀ ದೇಶವೇ ನೋಡುತ್ತಿದೆ.. ಇಂತಹವರನ್ನು ಜನ ಕ್ಷಮಿಸುವುದಿಲ್ಲ.. ಎಂಬ ದೊಡ್ಡ ದೊಡ್ಡ ಶಬ್ದಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಲಾಗಿತ್ತು.

Assam | A poster that reads “Sara desh dekh raha hai, Guwahati mein chhupe gaddaron ko, maaf nahi karegi janta aise farzi makkaron ko” put up by Rashtravadi Yuvak Congress in Guwahati. Rebel Maharashtra MLAs are staying at Radisson Blu hotel in the city. #MaharashtraCrisis

ಮಹಾರಾಷ್ಟ್ರ ಸರ್ಕಾರದಲ್ಲಿ ಒಡಕು ಮೂಡಿದ ಬೆನ್ನಲ್ಲೇ ಶಿವಸೇನೆಯ ಹಿರಿಯ ನಾಯಕ ಹಾಗೂ ಸಂಪುಟ ಸಚಿವ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಮಂದಿ ಶಿವಸೇನೆ ಬಂಡಾಯ ಶಾಸಕರು ಜೂನ್ 22ರಿಂದ ಅಸ್ಸಾಂ ರಾಜಧಾನಿ ಗುವಾಹಟಿಯ ಹೋಟೆಲ್‌ನಲ್ಲಿ ಬೀಡುಬಿಟ್ಟಿದ್ದಾರೆ. ಶಿವಸೇನೆಯ 40 ಶಾಸಕರನ್ನು ಹೊರತುಪಡಿಸಿ ಒಟ್ಟು 50 ಶಾಸಕರ ಬೆಂಬಲವಿದೆ ಎಂದು ಏಕನಾಥ್ ಶಿಂಧೆ ಘೋಷಿಸಿದ್ದಾರೆ. ಇದಕ್ಕೂ ಮುನ್ನ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯ ಶಾಸಕರು ಸೂರತ್‌ನ ಹೋಟೆಲ್‌ನಲ್ಲಿ ತಂಗಿದ್ದರು.

ರಾಜ್ಯದಲ್ಲಿ ನಡೆಯುತ್ತಿರುವ ಅಶಾಂತಿಗೆ ಬಿಜೆಪಿಯೇ ಕಾರಣ ಎಂದು ಶಿವಸೇನೆ ಮತ್ತೊಮ್ಮೆ ಮಗದೊಮ್ಮೆ ಆರೋಪಿಸುತ್ತಲೇದೆ. ಸಾಮ್ನಾದಲ್ಲಿ ರಾವ್ ಸಾಹೇಬ್ ದಾನ್ವೆ ಹೇಳಿಕೆಯಲ್ಲಿ ಎಲ್ಲವೂ ಸ್ಪಷ್ಟವಾಗಿದೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಗೊಂದಲದಲ್ಲಿ ತನ್ನ ಕೈವಾಡವಿಲ್ಲ ಎಂದು ಬಿಜೆಪಿ ಹೇಳುತ್ತಿದ್ದರೆ, ರಾವ್ ಸಾಹೇಬ್ ದಾನ್ವೆ ಅವರ ಹೇಳಿಕೆಯಿಂದ ಎಲ್ಲವೂ ಸ್ಪಷ್ಟವಾಗಿದೆ. ಜೊತೆಗೆ, ದೆಹಲಿಯಲ್ಲಿ ಕುಳಿತಿರುವ ಬಿಜೆಪಿ ನಾಯಕರು ಮಹಾರಾಷ್ಟ್ರವನ್ನು ಮೂರು ಭಾಗಗಳಾಗಿ ವಿಭಜಿಸಲು ಅಪಾಯಕಾರಿ ಸಂಚು ರೂಪಿಸಿದ್ದಾರೆ ಎಂದು ಶಿವಸೇನೆ ಸಾಮ್ನಾದಲ್ಲಿ ಆರೋಪಿಸಿದೆ. ಒಟ್ಟಿನಲ್ಲಿ ಮಹಾರಾಷ್ಟ್ರದಲ್ಲಿ ರಾಜಕೀಯ ಗಂಟೆಗಂಟೆಗೂ ಬದಲಾಗುತ್ತಿದೆ.

To read in Telugu click here

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ