AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿಗೆ ಮಾಧ್ಯಮಗಳು ಕಾರಣವೆಂದ ಮಾಯಾವತಿ; ಟಿವಿ ಡಿಬೇಟ್​ಗಳನ್ನು ಬಹಿಷ್ಕರಿಸಿದ ಬಹುಜನ ಸಮಾಜ ಪಕ್ಷ

ದೆಹಲಿ: ಬಹುಜನ ಸಮಾಜ ಪಾರ್ಟಿ ಮುಖ್ಯಸ್ಥೆ ಮಾಯಾವತಿ (BSP Chief Mayawati) ಸುದ್ದಿ ಮಾಧ್ಯಮಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಎಸ್​ಪಿ ನೆಲಕಚ್ಚಲು ಮಾಧ್ಯಮಗಳೇ ಕಾರಣ ಎಂದು ಆರೋಪಿಸಿರುವ ಅವರು, ತಮ್ಮ ಪಕ್ಷ ಟಿವಿ ಡಿಬೇಟ್​​ಗಳನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.  ಉತ್ತರ ಪ್ರದೇಶ ಚುನಾವಣೆ ಸಮಯದಲ್ಲಿ ಮಾಧ್ಯಮಗಳು ಜಾತಿ ಆಧಾರಿತ ವರದಿ ಮಾಡಿವೆ. ಇದು ಅಂಬೇಡ್ಕರ್​ ತತ್ವಗಳನ್ನು ಅಳವಡಿಸಿಕೊಂಡಿರುವ ಬಿಎಸ್​ಪಿಗೆ ತೀವ್ರ ಹಾನಿಯನ್ನುಂಟು ಮಾಡಿದೆ. ಹೀಗಾಗಿ ನಾವು ಇನ್ನು ಯಾವುದೇ ಟಿವಿ ಡಿಬೇಟ್​ (ಮಾಧ್ಯಮಗಳಲ್ಲಿ ನಡೆಯುವ […]

ಸೋಲಿಗೆ ಮಾಧ್ಯಮಗಳು ಕಾರಣವೆಂದ ಮಾಯಾವತಿ; ಟಿವಿ ಡಿಬೇಟ್​ಗಳನ್ನು ಬಹಿಷ್ಕರಿಸಿದ ಬಹುಜನ ಸಮಾಜ ಪಕ್ಷ
ಮಾಯಾವತಿ
TV9 Web
| Edited By: |

Updated on:Mar 12, 2022 | 12:38 PM

Share

ದೆಹಲಿ: ಬಹುಜನ ಸಮಾಜ ಪಾರ್ಟಿ ಮುಖ್ಯಸ್ಥೆ ಮಾಯಾವತಿ (BSP Chief Mayawati) ಸುದ್ದಿ ಮಾಧ್ಯಮಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಎಸ್​ಪಿ ನೆಲಕಚ್ಚಲು ಮಾಧ್ಯಮಗಳೇ ಕಾರಣ ಎಂದು ಆರೋಪಿಸಿರುವ ಅವರು, ತಮ್ಮ ಪಕ್ಷ ಟಿವಿ ಡಿಬೇಟ್​​ಗಳನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.  ಉತ್ತರ ಪ್ರದೇಶ ಚುನಾವಣೆ ಸಮಯದಲ್ಲಿ ಮಾಧ್ಯಮಗಳು ಜಾತಿ ಆಧಾರಿತ ವರದಿ ಮಾಡಿವೆ. ಇದು ಅಂಬೇಡ್ಕರ್​ ತತ್ವಗಳನ್ನು ಅಳವಡಿಸಿಕೊಂಡಿರುವ ಬಿಎಸ್​ಪಿಗೆ ತೀವ್ರ ಹಾನಿಯನ್ನುಂಟು ಮಾಡಿದೆ. ಹೀಗಾಗಿ ನಾವು ಇನ್ನು ಯಾವುದೇ ಟಿವಿ ಡಿಬೇಟ್​ (ಮಾಧ್ಯಮಗಳಲ್ಲಿ ನಡೆಯುವ ಪ್ಯಾನಲ್​ ಡಿಸ್ಕಶನ್​)ಗಳಲ್ಲೂ ಪಾಲ್ಗೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ್ದ ಮಾಯಾವತಿ, ಬಿಎಸ್​ಪಿ ನಿರೀಕ್ಷೆಗೆ ವಿರುದ್ಧವಾಗಿ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಆದರೆ ನಿರಾಸೆಯಾಗಿದ್ದರೂ, ಆತ್ಮವಿಶ್ವಾಸ ಕಳೆದುಕೊಂಡಿಲ್ಲ. ಚುನಾವಣೆ ಸಂದರ್ಭದಲ್ಲಿ ಇಲ್ಲಿನ ಮಾಧ್ಯಮಗಳು ನಮ್ಮನ್ನು ಬಿಜೆಪಿಯ ಬಿ ಟೀಂನಂತೆ ಬಿಂಬಿಸಿದವು. ಹೀಗಾಗಿ ಸಹಜವಾಗಿಯೇ ಬಿಜೆಪಿ ವಿರೋಧಿಗಳು, ಮುಸ್ಲಿಮರು ತಮ್ಮ ಮತವನ್ನು ಬಿಎಸ್​ಪಿಗೆ ಹಾಕಲಿಲ್ಲ. ಸೋತೆವೆಂದು ಸುಮ್ಮನೆ ಇರುವುದಿಲ್ಲ. ನಮ್ಮ ಪಕ್ಷಸಂಘಟನೆ, ಚಳವಳಿಯನ್ನು ಮುಂದುವರಿಸುತ್ತೇವೆ. ಖಂಡಿತ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದರು

ಉತ್ತರ ಪ್ರದೇಶದ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ಕೇವಲ ಒಂದು ಕ್ಷೇತ್ರದಲ್ಲಿ ಗೆದ್ದುಕೊಂಡಿದೆ. 403 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 255 ಸೀಟ್​ಗಳನ್ನು ಗೆದ್ದಿದೆ. 1885ರ ನಂತರ  ಉತ್ತರ ಪ್ರದೇಶದಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ಮೊದಲ ಪಕ್ಷ ಎಂಬ ಹೆಗ್ಗಳಿಕೆ ಬಿಜೆಪಿಯದ್ದಾದರೆ, ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ದಾಖಲೆ ಬರೆದವರು ಯೋಗಿ ಆದಿತ್ಯನಾಥ್​. 2000ನೇ ಇಸ್ವಿಯಲ್ಲಿ ಒಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆದರೆ ಆ ಸರ್ಕಾರ ತುಂಬ ದಿನ ಉಳಿಯಲಿಲ್ಲ. ಆಗ ರಾಜನಾಥ್​ ಸಿಂಗ್​ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದರು. ಅಲ್ಲಿಂದ 2017ರವರೆಗೆ ಒಮ್ಮೆಯೂ ಬಿಜೆಪಿ ಆಡಳಿತಕ್ಕೆ ಬಂದಿರಲಿಲ್ಲ. ಈ ಅವಧಿಯಲ್ಲಿ ಸಮಾಜವಾದಿ ಪಕ್ಷ, ಬಿಎಸ್​ಪಿಗಳು ಆಳಿವೆ. 2017ರಲ್ಲಿ ಸರ್ಕಾರ ರಚನೆ ಮಾಡಿದ ಬಿಜೆಪಿ ಇದೀಗ ಎರಡನೇ ಅವಧಿಗೆ ಅಧಿಕಾರ ಹಿಡಿದಿದೆ.

ಇದನ್ನೂ ಓದಿ: Migraine : ಕಿರಿಕಿರಿ ಉಂಟು ಮಾಡುವ ಮೈಗ್ರೇನ್​ ಪರಿಹಾರಕ್ಕೆ ಇಲ್ಲಿದೆ ಸಿಂಪಲ್​ ಟಿಪ್ಸ್​​

Published On - 12:16 pm, Sat, 12 March 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ