AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿಗೆ ಮಾಧ್ಯಮಗಳು ಕಾರಣವೆಂದ ಮಾಯಾವತಿ; ಟಿವಿ ಡಿಬೇಟ್​ಗಳನ್ನು ಬಹಿಷ್ಕರಿಸಿದ ಬಹುಜನ ಸಮಾಜ ಪಕ್ಷ

ದೆಹಲಿ: ಬಹುಜನ ಸಮಾಜ ಪಾರ್ಟಿ ಮುಖ್ಯಸ್ಥೆ ಮಾಯಾವತಿ (BSP Chief Mayawati) ಸುದ್ದಿ ಮಾಧ್ಯಮಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಎಸ್​ಪಿ ನೆಲಕಚ್ಚಲು ಮಾಧ್ಯಮಗಳೇ ಕಾರಣ ಎಂದು ಆರೋಪಿಸಿರುವ ಅವರು, ತಮ್ಮ ಪಕ್ಷ ಟಿವಿ ಡಿಬೇಟ್​​ಗಳನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.  ಉತ್ತರ ಪ್ರದೇಶ ಚುನಾವಣೆ ಸಮಯದಲ್ಲಿ ಮಾಧ್ಯಮಗಳು ಜಾತಿ ಆಧಾರಿತ ವರದಿ ಮಾಡಿವೆ. ಇದು ಅಂಬೇಡ್ಕರ್​ ತತ್ವಗಳನ್ನು ಅಳವಡಿಸಿಕೊಂಡಿರುವ ಬಿಎಸ್​ಪಿಗೆ ತೀವ್ರ ಹಾನಿಯನ್ನುಂಟು ಮಾಡಿದೆ. ಹೀಗಾಗಿ ನಾವು ಇನ್ನು ಯಾವುದೇ ಟಿವಿ ಡಿಬೇಟ್​ (ಮಾಧ್ಯಮಗಳಲ್ಲಿ ನಡೆಯುವ […]

ಸೋಲಿಗೆ ಮಾಧ್ಯಮಗಳು ಕಾರಣವೆಂದ ಮಾಯಾವತಿ; ಟಿವಿ ಡಿಬೇಟ್​ಗಳನ್ನು ಬಹಿಷ್ಕರಿಸಿದ ಬಹುಜನ ಸಮಾಜ ಪಕ್ಷ
ಮಾಯಾವತಿ
TV9 Web
| Edited By: |

Updated on:Mar 12, 2022 | 12:38 PM

Share

ದೆಹಲಿ: ಬಹುಜನ ಸಮಾಜ ಪಾರ್ಟಿ ಮುಖ್ಯಸ್ಥೆ ಮಾಯಾವತಿ (BSP Chief Mayawati) ಸುದ್ದಿ ಮಾಧ್ಯಮಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಎಸ್​ಪಿ ನೆಲಕಚ್ಚಲು ಮಾಧ್ಯಮಗಳೇ ಕಾರಣ ಎಂದು ಆರೋಪಿಸಿರುವ ಅವರು, ತಮ್ಮ ಪಕ್ಷ ಟಿವಿ ಡಿಬೇಟ್​​ಗಳನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.  ಉತ್ತರ ಪ್ರದೇಶ ಚುನಾವಣೆ ಸಮಯದಲ್ಲಿ ಮಾಧ್ಯಮಗಳು ಜಾತಿ ಆಧಾರಿತ ವರದಿ ಮಾಡಿವೆ. ಇದು ಅಂಬೇಡ್ಕರ್​ ತತ್ವಗಳನ್ನು ಅಳವಡಿಸಿಕೊಂಡಿರುವ ಬಿಎಸ್​ಪಿಗೆ ತೀವ್ರ ಹಾನಿಯನ್ನುಂಟು ಮಾಡಿದೆ. ಹೀಗಾಗಿ ನಾವು ಇನ್ನು ಯಾವುದೇ ಟಿವಿ ಡಿಬೇಟ್​ (ಮಾಧ್ಯಮಗಳಲ್ಲಿ ನಡೆಯುವ ಪ್ಯಾನಲ್​ ಡಿಸ್ಕಶನ್​)ಗಳಲ್ಲೂ ಪಾಲ್ಗೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ್ದ ಮಾಯಾವತಿ, ಬಿಎಸ್​ಪಿ ನಿರೀಕ್ಷೆಗೆ ವಿರುದ್ಧವಾಗಿ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಆದರೆ ನಿರಾಸೆಯಾಗಿದ್ದರೂ, ಆತ್ಮವಿಶ್ವಾಸ ಕಳೆದುಕೊಂಡಿಲ್ಲ. ಚುನಾವಣೆ ಸಂದರ್ಭದಲ್ಲಿ ಇಲ್ಲಿನ ಮಾಧ್ಯಮಗಳು ನಮ್ಮನ್ನು ಬಿಜೆಪಿಯ ಬಿ ಟೀಂನಂತೆ ಬಿಂಬಿಸಿದವು. ಹೀಗಾಗಿ ಸಹಜವಾಗಿಯೇ ಬಿಜೆಪಿ ವಿರೋಧಿಗಳು, ಮುಸ್ಲಿಮರು ತಮ್ಮ ಮತವನ್ನು ಬಿಎಸ್​ಪಿಗೆ ಹಾಕಲಿಲ್ಲ. ಸೋತೆವೆಂದು ಸುಮ್ಮನೆ ಇರುವುದಿಲ್ಲ. ನಮ್ಮ ಪಕ್ಷಸಂಘಟನೆ, ಚಳವಳಿಯನ್ನು ಮುಂದುವರಿಸುತ್ತೇವೆ. ಖಂಡಿತ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದರು

ಉತ್ತರ ಪ್ರದೇಶದ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ಕೇವಲ ಒಂದು ಕ್ಷೇತ್ರದಲ್ಲಿ ಗೆದ್ದುಕೊಂಡಿದೆ. 403 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 255 ಸೀಟ್​ಗಳನ್ನು ಗೆದ್ದಿದೆ. 1885ರ ನಂತರ  ಉತ್ತರ ಪ್ರದೇಶದಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ಮೊದಲ ಪಕ್ಷ ಎಂಬ ಹೆಗ್ಗಳಿಕೆ ಬಿಜೆಪಿಯದ್ದಾದರೆ, ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ದಾಖಲೆ ಬರೆದವರು ಯೋಗಿ ಆದಿತ್ಯನಾಥ್​. 2000ನೇ ಇಸ್ವಿಯಲ್ಲಿ ಒಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆದರೆ ಆ ಸರ್ಕಾರ ತುಂಬ ದಿನ ಉಳಿಯಲಿಲ್ಲ. ಆಗ ರಾಜನಾಥ್​ ಸಿಂಗ್​ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದರು. ಅಲ್ಲಿಂದ 2017ರವರೆಗೆ ಒಮ್ಮೆಯೂ ಬಿಜೆಪಿ ಆಡಳಿತಕ್ಕೆ ಬಂದಿರಲಿಲ್ಲ. ಈ ಅವಧಿಯಲ್ಲಿ ಸಮಾಜವಾದಿ ಪಕ್ಷ, ಬಿಎಸ್​ಪಿಗಳು ಆಳಿವೆ. 2017ರಲ್ಲಿ ಸರ್ಕಾರ ರಚನೆ ಮಾಡಿದ ಬಿಜೆಪಿ ಇದೀಗ ಎರಡನೇ ಅವಧಿಗೆ ಅಧಿಕಾರ ಹಿಡಿದಿದೆ.

ಇದನ್ನೂ ಓದಿ: Migraine : ಕಿರಿಕಿರಿ ಉಂಟು ಮಾಡುವ ಮೈಗ್ರೇನ್​ ಪರಿಹಾರಕ್ಕೆ ಇಲ್ಲಿದೆ ಸಿಂಪಲ್​ ಟಿಪ್ಸ್​​

Published On - 12:16 pm, Sat, 12 March 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ