AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿಗೆ ಮಾಧ್ಯಮಗಳು ಕಾರಣವೆಂದ ಮಾಯಾವತಿ; ಟಿವಿ ಡಿಬೇಟ್​ಗಳನ್ನು ಬಹಿಷ್ಕರಿಸಿದ ಬಹುಜನ ಸಮಾಜ ಪಕ್ಷ

ದೆಹಲಿ: ಬಹುಜನ ಸಮಾಜ ಪಾರ್ಟಿ ಮುಖ್ಯಸ್ಥೆ ಮಾಯಾವತಿ (BSP Chief Mayawati) ಸುದ್ದಿ ಮಾಧ್ಯಮಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಎಸ್​ಪಿ ನೆಲಕಚ್ಚಲು ಮಾಧ್ಯಮಗಳೇ ಕಾರಣ ಎಂದು ಆರೋಪಿಸಿರುವ ಅವರು, ತಮ್ಮ ಪಕ್ಷ ಟಿವಿ ಡಿಬೇಟ್​​ಗಳನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.  ಉತ್ತರ ಪ್ರದೇಶ ಚುನಾವಣೆ ಸಮಯದಲ್ಲಿ ಮಾಧ್ಯಮಗಳು ಜಾತಿ ಆಧಾರಿತ ವರದಿ ಮಾಡಿವೆ. ಇದು ಅಂಬೇಡ್ಕರ್​ ತತ್ವಗಳನ್ನು ಅಳವಡಿಸಿಕೊಂಡಿರುವ ಬಿಎಸ್​ಪಿಗೆ ತೀವ್ರ ಹಾನಿಯನ್ನುಂಟು ಮಾಡಿದೆ. ಹೀಗಾಗಿ ನಾವು ಇನ್ನು ಯಾವುದೇ ಟಿವಿ ಡಿಬೇಟ್​ (ಮಾಧ್ಯಮಗಳಲ್ಲಿ ನಡೆಯುವ […]

ಸೋಲಿಗೆ ಮಾಧ್ಯಮಗಳು ಕಾರಣವೆಂದ ಮಾಯಾವತಿ; ಟಿವಿ ಡಿಬೇಟ್​ಗಳನ್ನು ಬಹಿಷ್ಕರಿಸಿದ ಬಹುಜನ ಸಮಾಜ ಪಕ್ಷ
ಮಾಯಾವತಿ
TV9 Web
| Updated By: Lakshmi Hegde|

Updated on:Mar 12, 2022 | 12:38 PM

Share

ದೆಹಲಿ: ಬಹುಜನ ಸಮಾಜ ಪಾರ್ಟಿ ಮುಖ್ಯಸ್ಥೆ ಮಾಯಾವತಿ (BSP Chief Mayawati) ಸುದ್ದಿ ಮಾಧ್ಯಮಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಎಸ್​ಪಿ ನೆಲಕಚ್ಚಲು ಮಾಧ್ಯಮಗಳೇ ಕಾರಣ ಎಂದು ಆರೋಪಿಸಿರುವ ಅವರು, ತಮ್ಮ ಪಕ್ಷ ಟಿವಿ ಡಿಬೇಟ್​​ಗಳನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.  ಉತ್ತರ ಪ್ರದೇಶ ಚುನಾವಣೆ ಸಮಯದಲ್ಲಿ ಮಾಧ್ಯಮಗಳು ಜಾತಿ ಆಧಾರಿತ ವರದಿ ಮಾಡಿವೆ. ಇದು ಅಂಬೇಡ್ಕರ್​ ತತ್ವಗಳನ್ನು ಅಳವಡಿಸಿಕೊಂಡಿರುವ ಬಿಎಸ್​ಪಿಗೆ ತೀವ್ರ ಹಾನಿಯನ್ನುಂಟು ಮಾಡಿದೆ. ಹೀಗಾಗಿ ನಾವು ಇನ್ನು ಯಾವುದೇ ಟಿವಿ ಡಿಬೇಟ್​ (ಮಾಧ್ಯಮಗಳಲ್ಲಿ ನಡೆಯುವ ಪ್ಯಾನಲ್​ ಡಿಸ್ಕಶನ್​)ಗಳಲ್ಲೂ ಪಾಲ್ಗೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ್ದ ಮಾಯಾವತಿ, ಬಿಎಸ್​ಪಿ ನಿರೀಕ್ಷೆಗೆ ವಿರುದ್ಧವಾಗಿ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಆದರೆ ನಿರಾಸೆಯಾಗಿದ್ದರೂ, ಆತ್ಮವಿಶ್ವಾಸ ಕಳೆದುಕೊಂಡಿಲ್ಲ. ಚುನಾವಣೆ ಸಂದರ್ಭದಲ್ಲಿ ಇಲ್ಲಿನ ಮಾಧ್ಯಮಗಳು ನಮ್ಮನ್ನು ಬಿಜೆಪಿಯ ಬಿ ಟೀಂನಂತೆ ಬಿಂಬಿಸಿದವು. ಹೀಗಾಗಿ ಸಹಜವಾಗಿಯೇ ಬಿಜೆಪಿ ವಿರೋಧಿಗಳು, ಮುಸ್ಲಿಮರು ತಮ್ಮ ಮತವನ್ನು ಬಿಎಸ್​ಪಿಗೆ ಹಾಕಲಿಲ್ಲ. ಸೋತೆವೆಂದು ಸುಮ್ಮನೆ ಇರುವುದಿಲ್ಲ. ನಮ್ಮ ಪಕ್ಷಸಂಘಟನೆ, ಚಳವಳಿಯನ್ನು ಮುಂದುವರಿಸುತ್ತೇವೆ. ಖಂಡಿತ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದರು

ಉತ್ತರ ಪ್ರದೇಶದ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ಕೇವಲ ಒಂದು ಕ್ಷೇತ್ರದಲ್ಲಿ ಗೆದ್ದುಕೊಂಡಿದೆ. 403 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 255 ಸೀಟ್​ಗಳನ್ನು ಗೆದ್ದಿದೆ. 1885ರ ನಂತರ  ಉತ್ತರ ಪ್ರದೇಶದಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ಮೊದಲ ಪಕ್ಷ ಎಂಬ ಹೆಗ್ಗಳಿಕೆ ಬಿಜೆಪಿಯದ್ದಾದರೆ, ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ದಾಖಲೆ ಬರೆದವರು ಯೋಗಿ ಆದಿತ್ಯನಾಥ್​. 2000ನೇ ಇಸ್ವಿಯಲ್ಲಿ ಒಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆದರೆ ಆ ಸರ್ಕಾರ ತುಂಬ ದಿನ ಉಳಿಯಲಿಲ್ಲ. ಆಗ ರಾಜನಾಥ್​ ಸಿಂಗ್​ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದರು. ಅಲ್ಲಿಂದ 2017ರವರೆಗೆ ಒಮ್ಮೆಯೂ ಬಿಜೆಪಿ ಆಡಳಿತಕ್ಕೆ ಬಂದಿರಲಿಲ್ಲ. ಈ ಅವಧಿಯಲ್ಲಿ ಸಮಾಜವಾದಿ ಪಕ್ಷ, ಬಿಎಸ್​ಪಿಗಳು ಆಳಿವೆ. 2017ರಲ್ಲಿ ಸರ್ಕಾರ ರಚನೆ ಮಾಡಿದ ಬಿಜೆಪಿ ಇದೀಗ ಎರಡನೇ ಅವಧಿಗೆ ಅಧಿಕಾರ ಹಿಡಿದಿದೆ.

ಇದನ್ನೂ ಓದಿ: Migraine : ಕಿರಿಕಿರಿ ಉಂಟು ಮಾಡುವ ಮೈಗ್ರೇನ್​ ಪರಿಹಾರಕ್ಕೆ ಇಲ್ಲಿದೆ ಸಿಂಪಲ್​ ಟಿಪ್ಸ್​​

Published On - 12:16 pm, Sat, 12 March 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!