AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಸುಗಂಧ ದ್ರವ್ಯ ವ್ಯಾಪಾರಿ ಪಿಯೂಷ್ ಜೈನ್‌ಗೆ ಜಾಮೀನು

ಪಿಯೂಷ್ ಜೈನ ಅವರನ್ನು ಡಿಸೆಂಬರ್ 26, 2021 ರಂದು ಸಿಬಿಐಸಿ ಅಧಿಕಾರಿಗಳು ಬಂಧಿಸಲಾಯಿತು, ಅವರ ನಿವಾಸದ ಮೇಲೆ ಸಿಬಿಐಸಿ ದಾಳಿ ನಡೆದು ಭಾರಿ ಹಣವನ್ನು ವಶಪಡಿಸಿಕೊಳ್ಳಲು ಕಾರಣವಾಯಿತು.

ಉತ್ತರ ಪ್ರದೇಶದ ಸುಗಂಧ ದ್ರವ್ಯ ವ್ಯಾಪಾರಿ ಪಿಯೂಷ್ ಜೈನ್‌ಗೆ ಜಾಮೀನು
Piyush Jain
TV9 Web
| Edited By: |

Updated on:Sep 09, 2022 | 9:59 AM

Share

ಉತ್ತರ ಪ್ರದೇಶ: ಕಳೆದ ವರ್ಷ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಅವರ ಆವರಣದ ಮೇಲೆ ಸಿಬಿಐಸಿ ದಾಳಿ ನಡೆಸಿ ಸುಮಾರು 200 ಕೋಟಿ ರೂಪಾಯಿ ನಗದು ಮತ್ತು 23 ಕೆಜಿ ಚಿನ್ನವನ್ನು ಸಿಬಿಐಸಿ ವಶಪಡಿಸಿಕೊಂಡಿದ್ದು, ಎಂಟು ತಿಂಗಳ ಸೆರೆವಾಸ ಅನುಭವಿಸಿ ಇದೀಗ ಅವರಿಗೆ ಗುರುವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಅವರ ಬಂಧನವು ಗದ್ದಲಕ್ಕೆ ಕಾರಣವಾಗಿತ್ತು, ಕಾನ್ಪುರ ಮೂಲದ ಸುಗಂಧ ದ್ರವ್ಯ ವ್ಯಾಪಾರಿಯನ್ನು ಬಿಜೆಪಿಯು ಸಮಾಜವಾದಿ ಪಕ್ಷದ (ಎಸ್‌ಪಿ) ಸ್ನೇಹಿತ ಎಂದು ಕರೆದಿದೆ. ಆದರೆ ಜೈನ್ ಬಿಜೆಪಿಗೆ ಸೇರಿದವರು ಎಂದು ವಿರೋಧ ಪಕ್ಷ ಆರೋಪಿಸಿತ್ತು.

ವಿಶೇಷ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ಬಿಡುಗಡೆ ಮಾಡಿದ ಆದೇಶದ ನಂತರ ಪಿಯೂಷ್ ಜೈನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಕಾನ್ಪುರ ಜೈಲು ಅಧೀಕ್ಷಕ ಬಿಧು ದತ್ ಪಾಂಡೆ ಹೇಳಿದ್ದಾರೆ.

ಕಳೆದ ವಾರ ಅಲಹಾಬಾದ್ ಹೈಕೋರ್ಟ್ ಜೈನ್ ಅವರ ಜಾಮೀನು ಅರ್ಜಿಯನ್ನು ಅಂಗೀಕರಿಸಿದ ನಂತರ ವಿಶೇಷ ಸಿಜೆಎಂ ಬಿಡುಗಡೆ ಪರವಾನಗಿಯನ್ನು ನೀಡಿತು. ಅವರ ಕುಟುಂಬ ಸದಸ್ಯರು ಮಾಡಿದ ತಲಾ 10 ಲಕ್ಷ ರೂ.ಗೆ ಇಬ್ಬರ ಶ್ಯೂರಿಟಿ ಸಲ್ಲಿಸುವಂತೆ ವಿಶೇಷ ಸಿಜೆಎಂ ಸೂಚಿಸಿದರು.

ಡಿಸೆಂಬರ್ 26 ರಂದು ಜೈನ್ ಅವರ ನಿವಾಸದ ಮೇಲೆ ನಡೆದ ದಾಳಿಯ ನಂತರ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ) ಭಾರಿ ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡ ನಂತರ ಅವರನ್ನು ಬಂಧಿಸಲಾಯಿತು.

Published On - 9:57 am, Fri, 9 September 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ